Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ವಂದೇ ಭಾರತ್ ಎಕ್ಸ್‌ಪ್ರೆಸ್ ಕಿಟಕಿಯನ್ನು ಸುತ್ತಿಗೆಯಿಂದ ಹೊಡೆದುಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ”ಈ ಜಿಹಾದಿಗಳಿಗೆ ಬುದ್ದಿ ಕಲಿಸದಿದ್ದರೇ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಇವರು ಈಗ ಗಾಜನ್ನು ಒಡೆದಿದ್ದಾರೆ. ಮುಂದೇ ಇಡೀ ರೈಲನ್ನು ಹೊಡೆದು ಹಾಕಬಹುದು. ಇಂತಹ ಮುಸಲ್ಮಾನನನ್ನು ನೀವು ಉಗ್ರಗಾಮಿ, ಜಿಹಾದಿ ಎನ್ನದೆ, ಇನ್ನೇನು ಹೇಳುತ್ತೀರಿ.” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಅಮಿತ್‌ ಸನಾತನಿ ಎಂಬ ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು,  ಮುಸ್ಲಿಂ ಜಿಹಾದಿಗಳು ವಂದೇ ಭಾರತ್‌ ರೈಲಿಗೆ ಹಾನಿಯುಂಟು ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ವಿಡಿಯೋದಲ್ಲಿ ರೈಲಿನ ಗಾಜು ಹೊಡೆಯುತ್ತಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವನೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಂದೇ ಭಾರತ್‌ ರೈಲಿಕ ಕಿಟಕಿ ಗಾಜನ್ನು ಸುತ್ತಿಗೆಯಿಂದ ಹೊಡೆಯುತ್ತಿರುವ ವ್ಯಕ್ತಿ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಅವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಈ ಪೋಸ್ಟ್ ‌ಗಳ ಪ್ರಕಾರ ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಈ ಗಾಜುಗಳನ್ನು ಒಡೆಯಲಾಗಿಲ್ಲ‌, ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಎಂಬುದು ತಿಳಿದು ಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, 10 ಸೆಪ್ಟೆಂಬರ್ 2024  ರಂದು ಅಪ್‌ಲೋಡ್ ಮಾಡಿದ ಇನ್‌ಸ್ಟಾಗ್ರಾಂ ಸ್ಟೋರಿ ಲಭ್ಯವಾಗಿದೆ. ಇದೇ ರೀತಿ ರೈಲಿಗೆ ಸಂಬಂಧ ಪಟ್ಟಂತೆ ಹಲವು ರೀಲ್ಸ್‌ಗಳು ಅವರ ಖಾತೆಯಲ್ಲಿ ಕಂಡು ಬಂದಿದೆ. ಹೀಗಾಗಿ ಹಲವು ಮಾಧ್ಯಮ ಸಂಸ್ಥೆಗಳು ಅವರನ್ನು ಸಂಪರ್ಕಿಸಿದಾಗ ಅವರು ತಮ್ಮ ಹೆಸರು ಮನೀಶ್ ಕುಮಾರ್ ಮತ್ತು ತಾನು ಬಿಹಾರದ ಅರ್ರಾ ನಿವಾಸಿ ಎಂದು ತಿಳಿಸಿದ್ದಾರೆ. ಪ್ರಸ್ತುತ ಅಹಮದಾಬಾದ್‌ನಲ್ಲಿ ಮತ್ತು ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ವೈರಲ್ ವಿಡಿಯೋಗಳ ಕುರಿತು ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿದ್ದರಿಂದ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ‌ ಎಂದು ತಿಳಿದು ಬಂದಿದೆ.

ವಂದೇ ಭಾರತ್ ರೈಲಿನ ಕಿಟಕಿ ಗಾಜನ್ನು ಮುಸ್ಲಿಂ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಒಡೆದಿದ್ದಾನೆ ಎನ್ನಲಾದ ವಿಡಿಯೋವನ್ನು ಮತ್ತಷ್ಟು ಪರಿಶೀಲಿಸಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ.

” ವೈರಲ್‌ ವಿಡಿಯೋದಲ್ಲಿರುವ ವ್ಯಕ್ತಿ ಗಾಜನ್ನು ಬದಲಾಯಿಸಲು, ಈಗಿರುವ ಗಾಜನ್ನು ಒಡೆದು ತೆಯುತ್ತಾರೆ. ಇದು ಗಾಜು ಬದಲಾಯಿತು ಪ್ರಕ್ರಿಯೆಯಾಗಿದೆ. ಗಾಜುಗಳು ರೈಲಿಗೆ ಭೀಗಿಯಾಗಿ ಅಳವಡಿಸಿರುವುದರಿಂದ ಅವುಗಳನ್ನು ಹೀಗೆ ಸುತ್ತಿಗೆಯಲ್ಲಿ ಒಡೆದು ತೆಗೆಯಲಾಗುತ್ತದೆ.” ಎಂದು ಮಾಹಿತಿಯನ್ನು ನೀಡಿರುವುದು ಕಂಡು ಬಂದಿದೆ.

ಈಗಾಗಲೇ ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಒಡೆದು ಹಾಕಲಾಗುತ್ತಿದೆ ಎಂಬ ಅಂಶವನ್ನು ರೈಲ್ವೇ ಅಧಿಕಾರಿಯೂ ದೃಢಪಡಿಸಿದ್ದಾರೆ. ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ ಎಂದು ದೃಢಪಡಿಸಿದ್ದಾರೆ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಗುಪ್ತಾ ಎಂಬುವವರು ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಸುತ್ತಿಗೆಯಿಂದ ಒಡೆಯುತ್ತಿರುವ ವಿಡಿಯೋವನ್ನು, ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...