Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನ ಕಿಟಕಿಯ ಗಾಜನ್ನು ಸುತ್ತಿಗೆಯಿಂದ ಒಡೆದು ಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಸ್ಲಿಂ ವ್ಯಕ್ತಿ ರೈಲಿನ ಗಾಜನ್ನು ಒಡೆದಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ.

ದೇಶದ ಹಲವು ಭಾಗಗಳಲ್ಲಿ ರೈಲು ಹಳಿ ಮೇಲೆ ವಿವಿಧ ವಸ್ತುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸುವದು, ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು ಸೇರಿದಂತೆ ಎಲ್ಲಾ ಘಟನೆಗಳನ್ನು ಮುಸ್ಲಿಮರ ತಲೆಗೆ ಕಟ್ಟುತ್ತಿರುವ ಸಂದರ್ಭದಲ್ಲಿ ವಂದೇ ಭಾರತ್ ರೈಲಿನ ಗಾಜನ್ನು ಮುಸ್ಲಿಂ ವ್ಯಕ್ತಿ ರಾಜಾರೋಷವಾಗಿ ಒಡೆದು ಹಾಕಿದ್ದಾನೆ ಎಂಬುವುದು ಮಹತ್ವ ಪಡೆದುಕೊಂಡಿದೆ. ಹಾಗಾಗಿ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಎಂಬವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಕಮೆಂಟ್ ಪ್ರಕಾರ, ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಗಾಜುಗಳನ್ನು ಒಡೆಯಲಾಗಿಲ್ಲ‌. ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಅದು ಎಂದು ತಿಳಿದು ಬಂದಿದೆ.

ನಾವು ಈ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ. ಪೋಸ್ಟ್‌ನಲ್ಲಿ “ಇಲ್ಲ, ಅವರು ರೈಲಿಗೆ ಹಾನಿ ಮಾಡುತ್ತಿಲ್ಲ, ನಿರ್ವಹಣಾ ಡಿಪೋದಲ್ಲಿ ಹೊಸ ಗಾಜಿಗೆ ಬದಲಿಸಲು ಈಗಾಗಲೇ ಹಾನಿಗೊಳಗಾದ ಗಾಜನ್ನು ಒಡೆಯುತ್ತಿದ್ದಾರೆ. ಏಕೆಂದರೆ, ರೈಲಿನ ಗಾಜನ್ನು ಅದರ ಬಾಡಿಗೆ ಬಿಗಿಯಾಗಿ ಅಳವಡಿಸಿರುವುದರಿಂದ ಅದನ್ನು ತೆಗೆಯಲು ಒಡೆದು ಹಾಕುವ ಅವಶ್ಯಕತೆಯಿದೆ” ಎಂದು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ಗಾಜು ಒಡೆಯುತ್ತಿರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆದ್ದರಿಂದ ಮುಸ್ಲಿಂ ವ್ಯಕ್ತಿ ರೈಲಿನ ಗಾಜು ಒಡೆದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...