Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ವಂದೇ ಭಾರತ್ ಎಕ್ಸ್‌ಪ್ರೆಸ್ ಕಿಟಕಿಯನ್ನು ಸುತ್ತಿಗೆಯಿಂದ ಹೊಡೆದುಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ”ಈ ಜಿಹಾದಿಗಳಿಗೆ ಬುದ್ದಿ ಕಲಿಸದಿದ್ದರೇ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಇವರು ಈಗ ಗಾಜನ್ನು ಒಡೆದಿದ್ದಾರೆ. ಮುಂದೇ ಇಡೀ ರೈಲನ್ನು ಹೊಡೆದು ಹಾಕಬಹುದು. ಇಂತಹ ಮುಸಲ್ಮಾನನನ್ನು ನೀವು ಉಗ್ರಗಾಮಿ, ಜಿಹಾದಿ ಎನ್ನದೆ, ಇನ್ನೇನು ಹೇಳುತ್ತೀರಿ.” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಅಮಿತ್‌ ಸನಾತನಿ ಎಂಬ ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು,  ಮುಸ್ಲಿಂ ಜಿಹಾದಿಗಳು ವಂದೇ ಭಾರತ್‌ ರೈಲಿಗೆ ಹಾನಿಯುಂಟು ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ವಿಡಿಯೋದಲ್ಲಿ ರೈಲಿನ ಗಾಜು ಹೊಡೆಯುತ್ತಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವನೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಂದೇ ಭಾರತ್‌ ರೈಲಿಕ ಕಿಟಕಿ ಗಾಜನ್ನು ಸುತ್ತಿಗೆಯಿಂದ ಹೊಡೆಯುತ್ತಿರುವ ವ್ಯಕ್ತಿ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಅವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಈ ಪೋಸ್ಟ್ ‌ಗಳ ಪ್ರಕಾರ ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಈ ಗಾಜುಗಳನ್ನು ಒಡೆಯಲಾಗಿಲ್ಲ‌, ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಎಂಬುದು ತಿಳಿದು ಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, 10 ಸೆಪ್ಟೆಂಬರ್ 2024  ರಂದು ಅಪ್‌ಲೋಡ್ ಮಾಡಿದ ಇನ್‌ಸ್ಟಾಗ್ರಾಂ ಸ್ಟೋರಿ ಲಭ್ಯವಾಗಿದೆ. ಇದೇ ರೀತಿ ರೈಲಿಗೆ ಸಂಬಂಧ ಪಟ್ಟಂತೆ ಹಲವು ರೀಲ್ಸ್‌ಗಳು ಅವರ ಖಾತೆಯಲ್ಲಿ ಕಂಡು ಬಂದಿದೆ. ಹೀಗಾಗಿ ಹಲವು ಮಾಧ್ಯಮ ಸಂಸ್ಥೆಗಳು ಅವರನ್ನು ಸಂಪರ್ಕಿಸಿದಾಗ ಅವರು ತಮ್ಮ ಹೆಸರು ಮನೀಶ್ ಕುಮಾರ್ ಮತ್ತು ತಾನು ಬಿಹಾರದ ಅರ್ರಾ ನಿವಾಸಿ ಎಂದು ತಿಳಿಸಿದ್ದಾರೆ. ಪ್ರಸ್ತುತ ಅಹಮದಾಬಾದ್‌ನಲ್ಲಿ ಮತ್ತು ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ವೈರಲ್ ವಿಡಿಯೋಗಳ ಕುರಿತು ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿದ್ದರಿಂದ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ‌ ಎಂದು ತಿಳಿದು ಬಂದಿದೆ.

ವಂದೇ ಭಾರತ್ ರೈಲಿನ ಕಿಟಕಿ ಗಾಜನ್ನು ಮುಸ್ಲಿಂ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಒಡೆದಿದ್ದಾನೆ ಎನ್ನಲಾದ ವಿಡಿಯೋವನ್ನು ಮತ್ತಷ್ಟು ಪರಿಶೀಲಿಸಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ.

” ವೈರಲ್‌ ವಿಡಿಯೋದಲ್ಲಿರುವ ವ್ಯಕ್ತಿ ಗಾಜನ್ನು ಬದಲಾಯಿಸಲು, ಈಗಿರುವ ಗಾಜನ್ನು ಒಡೆದು ತೆಯುತ್ತಾರೆ. ಇದು ಗಾಜು ಬದಲಾಯಿತು ಪ್ರಕ್ರಿಯೆಯಾಗಿದೆ. ಗಾಜುಗಳು ರೈಲಿಗೆ ಭೀಗಿಯಾಗಿ ಅಳವಡಿಸಿರುವುದರಿಂದ ಅವುಗಳನ್ನು ಹೀಗೆ ಸುತ್ತಿಗೆಯಲ್ಲಿ ಒಡೆದು ತೆಗೆಯಲಾಗುತ್ತದೆ.” ಎಂದು ಮಾಹಿತಿಯನ್ನು ನೀಡಿರುವುದು ಕಂಡು ಬಂದಿದೆ.

ಈಗಾಗಲೇ ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಒಡೆದು ಹಾಕಲಾಗುತ್ತಿದೆ ಎಂಬ ಅಂಶವನ್ನು ರೈಲ್ವೇ ಅಧಿಕಾರಿಯೂ ದೃಢಪಡಿಸಿದ್ದಾರೆ. ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ ಎಂದು ದೃಢಪಡಿಸಿದ್ದಾರೆ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಗುಪ್ತಾ ಎಂಬುವವರು ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಸುತ್ತಿಗೆಯಿಂದ ಒಡೆಯುತ್ತಿರುವ ವಿಡಿಯೋವನ್ನು, ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...