Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ವಂದೇ ಭಾರತ್ ಎಕ್ಸ್‌ಪ್ರೆಸ್ ಕಿಟಕಿಯನ್ನು ಸುತ್ತಿಗೆಯಿಂದ ಹೊಡೆದುಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ”ಈ ಜಿಹಾದಿಗಳಿಗೆ ಬುದ್ದಿ ಕಲಿಸದಿದ್ದರೇ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಇವರು ಈಗ ಗಾಜನ್ನು ಒಡೆದಿದ್ದಾರೆ. ಮುಂದೇ ಇಡೀ ರೈಲನ್ನು ಹೊಡೆದು ಹಾಕಬಹುದು. ಇಂತಹ ಮುಸಲ್ಮಾನನನ್ನು ನೀವು ಉಗ್ರಗಾಮಿ, ಜಿಹಾದಿ ಎನ್ನದೆ, ಇನ್ನೇನು ಹೇಳುತ್ತೀರಿ.” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಅಮಿತ್‌ ಸನಾತನಿ ಎಂಬ ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು,  ಮುಸ್ಲಿಂ ಜಿಹಾದಿಗಳು ವಂದೇ ಭಾರತ್‌ ರೈಲಿಗೆ ಹಾನಿಯುಂಟು ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ವಿಡಿಯೋದಲ್ಲಿ ರೈಲಿನ ಗಾಜು ಹೊಡೆಯುತ್ತಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವನೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಂದೇ ಭಾರತ್‌ ರೈಲಿಕ ಕಿಟಕಿ ಗಾಜನ್ನು ಸುತ್ತಿಗೆಯಿಂದ ಹೊಡೆಯುತ್ತಿರುವ ವ್ಯಕ್ತಿ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಅವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಈ ಪೋಸ್ಟ್ ‌ಗಳ ಪ್ರಕಾರ ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಈ ಗಾಜುಗಳನ್ನು ಒಡೆಯಲಾಗಿಲ್ಲ‌, ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಎಂಬುದು ತಿಳಿದು ಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, 10 ಸೆಪ್ಟೆಂಬರ್ 2024  ರಂದು ಅಪ್‌ಲೋಡ್ ಮಾಡಿದ ಇನ್‌ಸ್ಟಾಗ್ರಾಂ ಸ್ಟೋರಿ ಲಭ್ಯವಾಗಿದೆ. ಇದೇ ರೀತಿ ರೈಲಿಗೆ ಸಂಬಂಧ ಪಟ್ಟಂತೆ ಹಲವು ರೀಲ್ಸ್‌ಗಳು ಅವರ ಖಾತೆಯಲ್ಲಿ ಕಂಡು ಬಂದಿದೆ. ಹೀಗಾಗಿ ಹಲವು ಮಾಧ್ಯಮ ಸಂಸ್ಥೆಗಳು ಅವರನ್ನು ಸಂಪರ್ಕಿಸಿದಾಗ ಅವರು ತಮ್ಮ ಹೆಸರು ಮನೀಶ್ ಕುಮಾರ್ ಮತ್ತು ತಾನು ಬಿಹಾರದ ಅರ್ರಾ ನಿವಾಸಿ ಎಂದು ತಿಳಿಸಿದ್ದಾರೆ. ಪ್ರಸ್ತುತ ಅಹಮದಾಬಾದ್‌ನಲ್ಲಿ ಮತ್ತು ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ವೈರಲ್ ವಿಡಿಯೋಗಳ ಕುರಿತು ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿದ್ದರಿಂದ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ‌ ಎಂದು ತಿಳಿದು ಬಂದಿದೆ.

ವಂದೇ ಭಾರತ್ ರೈಲಿನ ಕಿಟಕಿ ಗಾಜನ್ನು ಮುಸ್ಲಿಂ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಒಡೆದಿದ್ದಾನೆ ಎನ್ನಲಾದ ವಿಡಿಯೋವನ್ನು ಮತ್ತಷ್ಟು ಪರಿಶೀಲಿಸಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ.

” ವೈರಲ್‌ ವಿಡಿಯೋದಲ್ಲಿರುವ ವ್ಯಕ್ತಿ ಗಾಜನ್ನು ಬದಲಾಯಿಸಲು, ಈಗಿರುವ ಗಾಜನ್ನು ಒಡೆದು ತೆಯುತ್ತಾರೆ. ಇದು ಗಾಜು ಬದಲಾಯಿತು ಪ್ರಕ್ರಿಯೆಯಾಗಿದೆ. ಗಾಜುಗಳು ರೈಲಿಗೆ ಭೀಗಿಯಾಗಿ ಅಳವಡಿಸಿರುವುದರಿಂದ ಅವುಗಳನ್ನು ಹೀಗೆ ಸುತ್ತಿಗೆಯಲ್ಲಿ ಒಡೆದು ತೆಗೆಯಲಾಗುತ್ತದೆ.” ಎಂದು ಮಾಹಿತಿಯನ್ನು ನೀಡಿರುವುದು ಕಂಡು ಬಂದಿದೆ.

ಈಗಾಗಲೇ ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಒಡೆದು ಹಾಕಲಾಗುತ್ತಿದೆ ಎಂಬ ಅಂಶವನ್ನು ರೈಲ್ವೇ ಅಧಿಕಾರಿಯೂ ದೃಢಪಡಿಸಿದ್ದಾರೆ. ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ ಎಂದು ದೃಢಪಡಿಸಿದ್ದಾರೆ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಗುಪ್ತಾ ಎಂಬುವವರು ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಸುತ್ತಿಗೆಯಿಂದ ಒಡೆಯುತ್ತಿರುವ ವಿಡಿಯೋವನ್ನು, ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...