Homeಫ್ಯಾಕ್ಟ್‌ಚೆಕ್Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರಿಂದ ದೌರ್ಜನ್ಯ ನಡೆಯುತ್ತಿರುವ ಹಲವು ವಿಡಿಯೋಗಳು ವೈರಲ್‌ ಆದನಂತರ ಪೊಲೀಸರ ಹೊಡೆಯುವಿಕೆ ನಿಂತಿದೆ. ಆದರೆ ಈಗ ಜನರೇ ವಾಪಸ್‌ ಪೊಲೀಸರಿಗೆ ಹೊಡೆಯುತ್ತಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿವೆ.

ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರನ್ನು ಖಾವಿ ಧರಿಸಿದ ಪೂಜಾರಿಯೊಬ್ಬರು ಹಿಡಿದಿಟ್ಟುಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಪೂಜಾರಿಯು ಪೋಲೀಸನ್ನು ಉಸಿರುಗಟ್ಟಿಸುವ ರೀತಿಯಲ್ಲಿ ಕುತ್ತಿಗೆಯನ್ನು ಹಿಡಿಯುತ್ತಿರುವುದು ಕಾಣಬಹುದು. ‘ಜಾಗೊ ಇಂಡಿಯಾ’ ಎಂಬ ಫೇಸ್ ಬುಕ್ ಪೇಜ್ ಈ ವಿಡಿಯೊ ಪೋಸ್ಟ್ ಮಾಡಿದೆ. ಈ ಪೋಸ್ಟ್ ಈವರೆಗೆ 18,000 ಕ್ಕೂ ಹೆಚ್ಚು ಶೇರುಗಳಾಗಿದೆ.

Anda bokth, police बाले koमार क्यू रहे हो???

Posted by Jago India on Monday, April 6, 2020

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೋ ಬಗ್ಗೆ “ಆಲ್ಟ್ ನ್ಯೂಸ್” ಫ್ಯಾಕ್ಟ್ ಚೆಕ್ ನಡೆಸಿದೆ. ಪ್ರಸ್ತುತ ವಿಡಿಯೊ ಮಾರ್ಚ್ 18, 2019 ರಂದು ಯೂಟ್ಯೂಬ್ ಚಾನೆಲಾದ CWE ತನ್ನ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಇದು ಎಂದು ಕಂಡು ಹಿಡಿದಿದೆ. ಕೆಳಗೆ ಇರುವ ವೀಡಿಯೊದಲ್ಲಿ 2:52 ನಿಮಿಷಗಳ ನಂತರ ವೈರಲ್ ಆದ ಚಿತ್ರಣವನ್ನು ನೋಡಬಹುದು.

ವೀಡಿಯೊವನ್ನು ವಿಭಿನ್ನ ಕ್ಯಾಮೆರಾ ಕೋನಗಳಿಂದ ಚಿತ್ರೀಕರಿಸಲಾಗಿರುವುದರಿಂದ, ಇದು ವೃತ್ತಿಪರವಾಗಿ ತಯಾರಿಸಲ್ಪಟ್ಟಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಅಂದರೆ ಅದು ಚಿತ್ರೀಕರಣಕ್ಕಾಗಿ ಮಾಡಿದ ನಟನೆಯಾಗಿದ್ದು ನಿಜವಾಗಿ ಹೊಡೆದುದ್ದಲ್ಲ. ಇದಲ್ಲದೆ, CWE ಚಾನೆಲ್ ನಲ್ಲಿ ಇಂತಹ ಅನೇಕ ಇತರ ವೀಡಿಯೊಗಳನ್ನು ಕಾಣಬಹುದಾಗಿದೆ.

ಈ ವೀಡಿಯೋದಲ್ಲಿರುವ ಪೊಲಿಸ್ ಪಾತ್ರದ ಹೆಸರು “ಸಿಂಘಮ್ ದುಬೆ” ಆಗಿದ್ದು, ನಟನ ಹೆಸರು ಮನೀಶ್ ದುಬೆ ಎಂದಾಗಿದೆ. ಇವರು ತನ್ನ ಫೇಸ್‌ಬುಕ್ ಬಯೋದಲ್ಲಿ ತನ್ನನ್ನು ತಾನು ವೃತ್ತಿಪರ ಕುಸ್ತಿಪಟು ಎಂದು ಗುರುತಿಸಿಕೊಳ್ಳುತ್ತಾರೆ.

CWE ಚಾನೆಲ್ ನ ಮತ್ತೊಂದು ವಿಡಿಯೊವನ್ನು ಅವಿನಾಶ್ ಎಂಬ ಫೇಸ್‌ಬುಕ್ ಅಕೌಂಟಿನಿಂದ ಪೋಸ್ಟ್ ಮಾಡಿ “ಹಿಂದೂಸ್ತಾನಿ ಮಹಿಳೆಯ ಶಕ್ತಿ ನೋಡಿ. ಮುಂಬೈಯಲ್ಲಿ, ಪಾಕಿಸ್ತಾನದ ಮಹಿಳಾ ಫ್ರೀಸ್ಟೈಲ್ ಕುಸ್ತಿಪಟುವೊಬ್ಬಳು ಅಖಾಡಕ್ಕಿಳಿದು, ಭಾರತೀಯ ಮಹಿಳೆಯರಿಗೆ ಅಶ್ಲೀಲವಾಗಿ ಬೈದು ಅಖಾಡಕ್ಕೆ ಇಳಿಯುವಂತೆ ಸವಾಲು ಒಡ್ಡುತ್ತಾಳೆ. ಅವಳ ಸವಾಲನ್ನು ಸಂಧ್ಯಾ ಫಡ್ಕೆ ಎಂಬ ದುರ್ಗಾ ವಾಹಿನಿಯ ಮಹಿಳೆ ಸ್ವೀಕರಿಸಿದಳು” ಎಂದು ಬರೆಯಲಾಗಿದೆ.

एक हिंदुस्तानी औरत की ताकत ?देखीये। मुम्बई मे एक पाकिस्तानी लेडीज फ्रीस्टाइल कुस्तीबाज महिला रिंग मे खडे हो कर भारतीय महिला ओ को गाली देते हुये रिग मे आने के लिये चैलेन्ज करने लगी इसके चैलेन्ज को स्वीकार करते हुये दुर्गा वाहिनी की महिला संन्ध्या फडके नाम की महिला रिंग मे उतर कर आई आगे क्या हुआ इस वीडियो मे आप खुद देखे ?

Posted by Avinash Singh Rajput on Tuesday, January 21, 2020

CWE ಎಂದರೆ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್. ಚಾನೆಲ್ ತನ್ನನ್ನು “ಮೊದಲ ಭಾರತೀಯ ಕುಸ್ತಿ ಮನರಂಜನಾ ಅಕಾಡೆಮಿ” ಎಂದು ಕರೆದುಕೊಳ್ಳುತ್ತದೆ. ಈ ಹಿಂದೆಯೂ ಈ ಚಾನೆಲ್ ವಿಡಿಯೋಗಳನ್ನು ಇಟ್ಟುಕೊಂದು ನೈಜ ಘಟನೆಗಳೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...