Homeಫ್ಯಾಕ್ಟ್‌ಚೆಕ್Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರಿಂದ ದೌರ್ಜನ್ಯ ನಡೆಯುತ್ತಿರುವ ಹಲವು ವಿಡಿಯೋಗಳು ವೈರಲ್‌ ಆದನಂತರ ಪೊಲೀಸರ ಹೊಡೆಯುವಿಕೆ ನಿಂತಿದೆ. ಆದರೆ ಈಗ ಜನರೇ ವಾಪಸ್‌ ಪೊಲೀಸರಿಗೆ ಹೊಡೆಯುತ್ತಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿವೆ.

ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರನ್ನು ಖಾವಿ ಧರಿಸಿದ ಪೂಜಾರಿಯೊಬ್ಬರು ಹಿಡಿದಿಟ್ಟುಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಪೂಜಾರಿಯು ಪೋಲೀಸನ್ನು ಉಸಿರುಗಟ್ಟಿಸುವ ರೀತಿಯಲ್ಲಿ ಕುತ್ತಿಗೆಯನ್ನು ಹಿಡಿಯುತ್ತಿರುವುದು ಕಾಣಬಹುದು. ‘ಜಾಗೊ ಇಂಡಿಯಾ’ ಎಂಬ ಫೇಸ್ ಬುಕ್ ಪೇಜ್ ಈ ವಿಡಿಯೊ ಪೋಸ್ಟ್ ಮಾಡಿದೆ. ಈ ಪೋಸ್ಟ್ ಈವರೆಗೆ 18,000 ಕ್ಕೂ ಹೆಚ್ಚು ಶೇರುಗಳಾಗಿದೆ.

Anda bokth, police बाले koमार क्यू रहे हो???

Posted by Jago India on Monday, April 6, 2020

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೋ ಬಗ್ಗೆ “ಆಲ್ಟ್ ನ್ಯೂಸ್” ಫ್ಯಾಕ್ಟ್ ಚೆಕ್ ನಡೆಸಿದೆ. ಪ್ರಸ್ತುತ ವಿಡಿಯೊ ಮಾರ್ಚ್ 18, 2019 ರಂದು ಯೂಟ್ಯೂಬ್ ಚಾನೆಲಾದ CWE ತನ್ನ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಇದು ಎಂದು ಕಂಡು ಹಿಡಿದಿದೆ. ಕೆಳಗೆ ಇರುವ ವೀಡಿಯೊದಲ್ಲಿ 2:52 ನಿಮಿಷಗಳ ನಂತರ ವೈರಲ್ ಆದ ಚಿತ್ರಣವನ್ನು ನೋಡಬಹುದು.

ವೀಡಿಯೊವನ್ನು ವಿಭಿನ್ನ ಕ್ಯಾಮೆರಾ ಕೋನಗಳಿಂದ ಚಿತ್ರೀಕರಿಸಲಾಗಿರುವುದರಿಂದ, ಇದು ವೃತ್ತಿಪರವಾಗಿ ತಯಾರಿಸಲ್ಪಟ್ಟಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಅಂದರೆ ಅದು ಚಿತ್ರೀಕರಣಕ್ಕಾಗಿ ಮಾಡಿದ ನಟನೆಯಾಗಿದ್ದು ನಿಜವಾಗಿ ಹೊಡೆದುದ್ದಲ್ಲ. ಇದಲ್ಲದೆ, CWE ಚಾನೆಲ್ ನಲ್ಲಿ ಇಂತಹ ಅನೇಕ ಇತರ ವೀಡಿಯೊಗಳನ್ನು ಕಾಣಬಹುದಾಗಿದೆ.

ಈ ವೀಡಿಯೋದಲ್ಲಿರುವ ಪೊಲಿಸ್ ಪಾತ್ರದ ಹೆಸರು “ಸಿಂಘಮ್ ದುಬೆ” ಆಗಿದ್ದು, ನಟನ ಹೆಸರು ಮನೀಶ್ ದುಬೆ ಎಂದಾಗಿದೆ. ಇವರು ತನ್ನ ಫೇಸ್‌ಬುಕ್ ಬಯೋದಲ್ಲಿ ತನ್ನನ್ನು ತಾನು ವೃತ್ತಿಪರ ಕುಸ್ತಿಪಟು ಎಂದು ಗುರುತಿಸಿಕೊಳ್ಳುತ್ತಾರೆ.

CWE ಚಾನೆಲ್ ನ ಮತ್ತೊಂದು ವಿಡಿಯೊವನ್ನು ಅವಿನಾಶ್ ಎಂಬ ಫೇಸ್‌ಬುಕ್ ಅಕೌಂಟಿನಿಂದ ಪೋಸ್ಟ್ ಮಾಡಿ “ಹಿಂದೂಸ್ತಾನಿ ಮಹಿಳೆಯ ಶಕ್ತಿ ನೋಡಿ. ಮುಂಬೈಯಲ್ಲಿ, ಪಾಕಿಸ್ತಾನದ ಮಹಿಳಾ ಫ್ರೀಸ್ಟೈಲ್ ಕುಸ್ತಿಪಟುವೊಬ್ಬಳು ಅಖಾಡಕ್ಕಿಳಿದು, ಭಾರತೀಯ ಮಹಿಳೆಯರಿಗೆ ಅಶ್ಲೀಲವಾಗಿ ಬೈದು ಅಖಾಡಕ್ಕೆ ಇಳಿಯುವಂತೆ ಸವಾಲು ಒಡ್ಡುತ್ತಾಳೆ. ಅವಳ ಸವಾಲನ್ನು ಸಂಧ್ಯಾ ಫಡ್ಕೆ ಎಂಬ ದುರ್ಗಾ ವಾಹಿನಿಯ ಮಹಿಳೆ ಸ್ವೀಕರಿಸಿದಳು” ಎಂದು ಬರೆಯಲಾಗಿದೆ.

एक हिंदुस्तानी औरत की ताकत ?देखीये। मुम्बई मे एक पाकिस्तानी लेडीज फ्रीस्टाइल कुस्तीबाज महिला रिंग मे खडे हो कर भारतीय महिला ओ को गाली देते हुये रिग मे आने के लिये चैलेन्ज करने लगी इसके चैलेन्ज को स्वीकार करते हुये दुर्गा वाहिनी की महिला संन्ध्या फडके नाम की महिला रिंग मे उतर कर आई आगे क्या हुआ इस वीडियो मे आप खुद देखे ?

Posted by Avinash Singh Rajput on Tuesday, January 21, 2020

CWE ಎಂದರೆ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್. ಚಾನೆಲ್ ತನ್ನನ್ನು “ಮೊದಲ ಭಾರತೀಯ ಕುಸ್ತಿ ಮನರಂಜನಾ ಅಕಾಡೆಮಿ” ಎಂದು ಕರೆದುಕೊಳ್ಳುತ್ತದೆ. ಈ ಹಿಂದೆಯೂ ಈ ಚಾನೆಲ್ ವಿಡಿಯೋಗಳನ್ನು ಇಟ್ಟುಕೊಂದು ನೈಜ ಘಟನೆಗಳೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...