Homeಫ್ಯಾಕ್ಟ್‌ಚೆಕ್Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರಿಂದ ದೌರ್ಜನ್ಯ ನಡೆಯುತ್ತಿರುವ ಹಲವು ವಿಡಿಯೋಗಳು ವೈರಲ್‌ ಆದನಂತರ ಪೊಲೀಸರ ಹೊಡೆಯುವಿಕೆ ನಿಂತಿದೆ. ಆದರೆ ಈಗ ಜನರೇ ವಾಪಸ್‌ ಪೊಲೀಸರಿಗೆ ಹೊಡೆಯುತ್ತಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿವೆ.

ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರನ್ನು ಖಾವಿ ಧರಿಸಿದ ಪೂಜಾರಿಯೊಬ್ಬರು ಹಿಡಿದಿಟ್ಟುಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಪೂಜಾರಿಯು ಪೋಲೀಸನ್ನು ಉಸಿರುಗಟ್ಟಿಸುವ ರೀತಿಯಲ್ಲಿ ಕುತ್ತಿಗೆಯನ್ನು ಹಿಡಿಯುತ್ತಿರುವುದು ಕಾಣಬಹುದು. ‘ಜಾಗೊ ಇಂಡಿಯಾ’ ಎಂಬ ಫೇಸ್ ಬುಕ್ ಪೇಜ್ ಈ ವಿಡಿಯೊ ಪೋಸ್ಟ್ ಮಾಡಿದೆ. ಈ ಪೋಸ್ಟ್ ಈವರೆಗೆ 18,000 ಕ್ಕೂ ಹೆಚ್ಚು ಶೇರುಗಳಾಗಿದೆ.

Anda bokth, police बाले koमार क्यू रहे हो???

Posted by Jago India on Monday, April 6, 2020

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೋ ಬಗ್ಗೆ “ಆಲ್ಟ್ ನ್ಯೂಸ್” ಫ್ಯಾಕ್ಟ್ ಚೆಕ್ ನಡೆಸಿದೆ. ಪ್ರಸ್ತುತ ವಿಡಿಯೊ ಮಾರ್ಚ್ 18, 2019 ರಂದು ಯೂಟ್ಯೂಬ್ ಚಾನೆಲಾದ CWE ತನ್ನ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಇದು ಎಂದು ಕಂಡು ಹಿಡಿದಿದೆ. ಕೆಳಗೆ ಇರುವ ವೀಡಿಯೊದಲ್ಲಿ 2:52 ನಿಮಿಷಗಳ ನಂತರ ವೈರಲ್ ಆದ ಚಿತ್ರಣವನ್ನು ನೋಡಬಹುದು.

ವೀಡಿಯೊವನ್ನು ವಿಭಿನ್ನ ಕ್ಯಾಮೆರಾ ಕೋನಗಳಿಂದ ಚಿತ್ರೀಕರಿಸಲಾಗಿರುವುದರಿಂದ, ಇದು ವೃತ್ತಿಪರವಾಗಿ ತಯಾರಿಸಲ್ಪಟ್ಟಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಅಂದರೆ ಅದು ಚಿತ್ರೀಕರಣಕ್ಕಾಗಿ ಮಾಡಿದ ನಟನೆಯಾಗಿದ್ದು ನಿಜವಾಗಿ ಹೊಡೆದುದ್ದಲ್ಲ. ಇದಲ್ಲದೆ, CWE ಚಾನೆಲ್ ನಲ್ಲಿ ಇಂತಹ ಅನೇಕ ಇತರ ವೀಡಿಯೊಗಳನ್ನು ಕಾಣಬಹುದಾಗಿದೆ.

ಈ ವೀಡಿಯೋದಲ್ಲಿರುವ ಪೊಲಿಸ್ ಪಾತ್ರದ ಹೆಸರು “ಸಿಂಘಮ್ ದುಬೆ” ಆಗಿದ್ದು, ನಟನ ಹೆಸರು ಮನೀಶ್ ದುಬೆ ಎಂದಾಗಿದೆ. ಇವರು ತನ್ನ ಫೇಸ್‌ಬುಕ್ ಬಯೋದಲ್ಲಿ ತನ್ನನ್ನು ತಾನು ವೃತ್ತಿಪರ ಕುಸ್ತಿಪಟು ಎಂದು ಗುರುತಿಸಿಕೊಳ್ಳುತ್ತಾರೆ.

CWE ಚಾನೆಲ್ ನ ಮತ್ತೊಂದು ವಿಡಿಯೊವನ್ನು ಅವಿನಾಶ್ ಎಂಬ ಫೇಸ್‌ಬುಕ್ ಅಕೌಂಟಿನಿಂದ ಪೋಸ್ಟ್ ಮಾಡಿ “ಹಿಂದೂಸ್ತಾನಿ ಮಹಿಳೆಯ ಶಕ್ತಿ ನೋಡಿ. ಮುಂಬೈಯಲ್ಲಿ, ಪಾಕಿಸ್ತಾನದ ಮಹಿಳಾ ಫ್ರೀಸ್ಟೈಲ್ ಕುಸ್ತಿಪಟುವೊಬ್ಬಳು ಅಖಾಡಕ್ಕಿಳಿದು, ಭಾರತೀಯ ಮಹಿಳೆಯರಿಗೆ ಅಶ್ಲೀಲವಾಗಿ ಬೈದು ಅಖಾಡಕ್ಕೆ ಇಳಿಯುವಂತೆ ಸವಾಲು ಒಡ್ಡುತ್ತಾಳೆ. ಅವಳ ಸವಾಲನ್ನು ಸಂಧ್ಯಾ ಫಡ್ಕೆ ಎಂಬ ದುರ್ಗಾ ವಾಹಿನಿಯ ಮಹಿಳೆ ಸ್ವೀಕರಿಸಿದಳು” ಎಂದು ಬರೆಯಲಾಗಿದೆ.

एक हिंदुस्तानी औरत की ताकत ?देखीये। मुम्बई मे एक पाकिस्तानी लेडीज फ्रीस्टाइल कुस्तीबाज महिला रिंग मे खडे हो कर भारतीय महिला ओ को गाली देते हुये रिग मे आने के लिये चैलेन्ज करने लगी इसके चैलेन्ज को स्वीकार करते हुये दुर्गा वाहिनी की महिला संन्ध्या फडके नाम की महिला रिंग मे उतर कर आई आगे क्या हुआ इस वीडियो मे आप खुद देखे ?

Posted by Avinash Singh Rajput on Tuesday, January 21, 2020

CWE ಎಂದರೆ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್. ಚಾನೆಲ್ ತನ್ನನ್ನು “ಮೊದಲ ಭಾರತೀಯ ಕುಸ್ತಿ ಮನರಂಜನಾ ಅಕಾಡೆಮಿ” ಎಂದು ಕರೆದುಕೊಳ್ಳುತ್ತದೆ. ಈ ಹಿಂದೆಯೂ ಈ ಚಾನೆಲ್ ವಿಡಿಯೋಗಳನ್ನು ಇಟ್ಟುಕೊಂದು ನೈಜ ಘಟನೆಗಳೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...