Homeಫ್ಯಾಕ್ಟ್‌ಚೆಕ್Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರಿಂದ ದೌರ್ಜನ್ಯ ನಡೆಯುತ್ತಿರುವ ಹಲವು ವಿಡಿಯೋಗಳು ವೈರಲ್‌ ಆದನಂತರ ಪೊಲೀಸರ ಹೊಡೆಯುವಿಕೆ ನಿಂತಿದೆ. ಆದರೆ ಈಗ ಜನರೇ ವಾಪಸ್‌ ಪೊಲೀಸರಿಗೆ ಹೊಡೆಯುತ್ತಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿವೆ.

ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರನ್ನು ಖಾವಿ ಧರಿಸಿದ ಪೂಜಾರಿಯೊಬ್ಬರು ಹಿಡಿದಿಟ್ಟುಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಪೂಜಾರಿಯು ಪೋಲೀಸನ್ನು ಉಸಿರುಗಟ್ಟಿಸುವ ರೀತಿಯಲ್ಲಿ ಕುತ್ತಿಗೆಯನ್ನು ಹಿಡಿಯುತ್ತಿರುವುದು ಕಾಣಬಹುದು. ‘ಜಾಗೊ ಇಂಡಿಯಾ’ ಎಂಬ ಫೇಸ್ ಬುಕ್ ಪೇಜ್ ಈ ವಿಡಿಯೊ ಪೋಸ್ಟ್ ಮಾಡಿದೆ. ಈ ಪೋಸ್ಟ್ ಈವರೆಗೆ 18,000 ಕ್ಕೂ ಹೆಚ್ಚು ಶೇರುಗಳಾಗಿದೆ.

Anda bokth, police बाले koमार क्यू रहे हो???

Posted by Jago India on Monday, April 6, 2020

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೋ ಬಗ್ಗೆ “ಆಲ್ಟ್ ನ್ಯೂಸ್” ಫ್ಯಾಕ್ಟ್ ಚೆಕ್ ನಡೆಸಿದೆ. ಪ್ರಸ್ತುತ ವಿಡಿಯೊ ಮಾರ್ಚ್ 18, 2019 ರಂದು ಯೂಟ್ಯೂಬ್ ಚಾನೆಲಾದ CWE ತನ್ನ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಇದು ಎಂದು ಕಂಡು ಹಿಡಿದಿದೆ. ಕೆಳಗೆ ಇರುವ ವೀಡಿಯೊದಲ್ಲಿ 2:52 ನಿಮಿಷಗಳ ನಂತರ ವೈರಲ್ ಆದ ಚಿತ್ರಣವನ್ನು ನೋಡಬಹುದು.

ವೀಡಿಯೊವನ್ನು ವಿಭಿನ್ನ ಕ್ಯಾಮೆರಾ ಕೋನಗಳಿಂದ ಚಿತ್ರೀಕರಿಸಲಾಗಿರುವುದರಿಂದ, ಇದು ವೃತ್ತಿಪರವಾಗಿ ತಯಾರಿಸಲ್ಪಟ್ಟಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಅಂದರೆ ಅದು ಚಿತ್ರೀಕರಣಕ್ಕಾಗಿ ಮಾಡಿದ ನಟನೆಯಾಗಿದ್ದು ನಿಜವಾಗಿ ಹೊಡೆದುದ್ದಲ್ಲ. ಇದಲ್ಲದೆ, CWE ಚಾನೆಲ್ ನಲ್ಲಿ ಇಂತಹ ಅನೇಕ ಇತರ ವೀಡಿಯೊಗಳನ್ನು ಕಾಣಬಹುದಾಗಿದೆ.

ಈ ವೀಡಿಯೋದಲ್ಲಿರುವ ಪೊಲಿಸ್ ಪಾತ್ರದ ಹೆಸರು “ಸಿಂಘಮ್ ದುಬೆ” ಆಗಿದ್ದು, ನಟನ ಹೆಸರು ಮನೀಶ್ ದುಬೆ ಎಂದಾಗಿದೆ. ಇವರು ತನ್ನ ಫೇಸ್‌ಬುಕ್ ಬಯೋದಲ್ಲಿ ತನ್ನನ್ನು ತಾನು ವೃತ್ತಿಪರ ಕುಸ್ತಿಪಟು ಎಂದು ಗುರುತಿಸಿಕೊಳ್ಳುತ್ತಾರೆ.

CWE ಚಾನೆಲ್ ನ ಮತ್ತೊಂದು ವಿಡಿಯೊವನ್ನು ಅವಿನಾಶ್ ಎಂಬ ಫೇಸ್‌ಬುಕ್ ಅಕೌಂಟಿನಿಂದ ಪೋಸ್ಟ್ ಮಾಡಿ “ಹಿಂದೂಸ್ತಾನಿ ಮಹಿಳೆಯ ಶಕ್ತಿ ನೋಡಿ. ಮುಂಬೈಯಲ್ಲಿ, ಪಾಕಿಸ್ತಾನದ ಮಹಿಳಾ ಫ್ರೀಸ್ಟೈಲ್ ಕುಸ್ತಿಪಟುವೊಬ್ಬಳು ಅಖಾಡಕ್ಕಿಳಿದು, ಭಾರತೀಯ ಮಹಿಳೆಯರಿಗೆ ಅಶ್ಲೀಲವಾಗಿ ಬೈದು ಅಖಾಡಕ್ಕೆ ಇಳಿಯುವಂತೆ ಸವಾಲು ಒಡ್ಡುತ್ತಾಳೆ. ಅವಳ ಸವಾಲನ್ನು ಸಂಧ್ಯಾ ಫಡ್ಕೆ ಎಂಬ ದುರ್ಗಾ ವಾಹಿನಿಯ ಮಹಿಳೆ ಸ್ವೀಕರಿಸಿದಳು” ಎಂದು ಬರೆಯಲಾಗಿದೆ.

एक हिंदुस्तानी औरत की ताकत ?देखीये। मुम्बई मे एक पाकिस्तानी लेडीज फ्रीस्टाइल कुस्तीबाज महिला रिंग मे खडे हो कर भारतीय महिला ओ को गाली देते हुये रिग मे आने के लिये चैलेन्ज करने लगी इसके चैलेन्ज को स्वीकार करते हुये दुर्गा वाहिनी की महिला संन्ध्या फडके नाम की महिला रिंग मे उतर कर आई आगे क्या हुआ इस वीडियो मे आप खुद देखे ?

Posted by Avinash Singh Rajput on Tuesday, January 21, 2020

CWE ಎಂದರೆ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್. ಚಾನೆಲ್ ತನ್ನನ್ನು “ಮೊದಲ ಭಾರತೀಯ ಕುಸ್ತಿ ಮನರಂಜನಾ ಅಕಾಡೆಮಿ” ಎಂದು ಕರೆದುಕೊಳ್ಳುತ್ತದೆ. ಈ ಹಿಂದೆಯೂ ಈ ಚಾನೆಲ್ ವಿಡಿಯೋಗಳನ್ನು ಇಟ್ಟುಕೊಂದು ನೈಜ ಘಟನೆಗಳೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...