Homeಫ್ಯಾಕ್ಟ್‌ಚೆಕ್Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರಿಂದ ದೌರ್ಜನ್ಯ ನಡೆಯುತ್ತಿರುವ ಹಲವು ವಿಡಿಯೋಗಳು ವೈರಲ್‌ ಆದನಂತರ ಪೊಲೀಸರ ಹೊಡೆಯುವಿಕೆ ನಿಂತಿದೆ. ಆದರೆ ಈಗ ಜನರೇ ವಾಪಸ್‌ ಪೊಲೀಸರಿಗೆ ಹೊಡೆಯುತ್ತಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿವೆ.

ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರನ್ನು ಖಾವಿ ಧರಿಸಿದ ಪೂಜಾರಿಯೊಬ್ಬರು ಹಿಡಿದಿಟ್ಟುಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಪೂಜಾರಿಯು ಪೋಲೀಸನ್ನು ಉಸಿರುಗಟ್ಟಿಸುವ ರೀತಿಯಲ್ಲಿ ಕುತ್ತಿಗೆಯನ್ನು ಹಿಡಿಯುತ್ತಿರುವುದು ಕಾಣಬಹುದು. ‘ಜಾಗೊ ಇಂಡಿಯಾ’ ಎಂಬ ಫೇಸ್ ಬುಕ್ ಪೇಜ್ ಈ ವಿಡಿಯೊ ಪೋಸ್ಟ್ ಮಾಡಿದೆ. ಈ ಪೋಸ್ಟ್ ಈವರೆಗೆ 18,000 ಕ್ಕೂ ಹೆಚ್ಚು ಶೇರುಗಳಾಗಿದೆ.

Anda bokth, police बाले koमार क्यू रहे हो???

Posted by Jago India on Monday, April 6, 2020

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೋ ಬಗ್ಗೆ “ಆಲ್ಟ್ ನ್ಯೂಸ್” ಫ್ಯಾಕ್ಟ್ ಚೆಕ್ ನಡೆಸಿದೆ. ಪ್ರಸ್ತುತ ವಿಡಿಯೊ ಮಾರ್ಚ್ 18, 2019 ರಂದು ಯೂಟ್ಯೂಬ್ ಚಾನೆಲಾದ CWE ತನ್ನ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಇದು ಎಂದು ಕಂಡು ಹಿಡಿದಿದೆ. ಕೆಳಗೆ ಇರುವ ವೀಡಿಯೊದಲ್ಲಿ 2:52 ನಿಮಿಷಗಳ ನಂತರ ವೈರಲ್ ಆದ ಚಿತ್ರಣವನ್ನು ನೋಡಬಹುದು.

ವೀಡಿಯೊವನ್ನು ವಿಭಿನ್ನ ಕ್ಯಾಮೆರಾ ಕೋನಗಳಿಂದ ಚಿತ್ರೀಕರಿಸಲಾಗಿರುವುದರಿಂದ, ಇದು ವೃತ್ತಿಪರವಾಗಿ ತಯಾರಿಸಲ್ಪಟ್ಟಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಅಂದರೆ ಅದು ಚಿತ್ರೀಕರಣಕ್ಕಾಗಿ ಮಾಡಿದ ನಟನೆಯಾಗಿದ್ದು ನಿಜವಾಗಿ ಹೊಡೆದುದ್ದಲ್ಲ. ಇದಲ್ಲದೆ, CWE ಚಾನೆಲ್ ನಲ್ಲಿ ಇಂತಹ ಅನೇಕ ಇತರ ವೀಡಿಯೊಗಳನ್ನು ಕಾಣಬಹುದಾಗಿದೆ.

ಈ ವೀಡಿಯೋದಲ್ಲಿರುವ ಪೊಲಿಸ್ ಪಾತ್ರದ ಹೆಸರು “ಸಿಂಘಮ್ ದುಬೆ” ಆಗಿದ್ದು, ನಟನ ಹೆಸರು ಮನೀಶ್ ದುಬೆ ಎಂದಾಗಿದೆ. ಇವರು ತನ್ನ ಫೇಸ್‌ಬುಕ್ ಬಯೋದಲ್ಲಿ ತನ್ನನ್ನು ತಾನು ವೃತ್ತಿಪರ ಕುಸ್ತಿಪಟು ಎಂದು ಗುರುತಿಸಿಕೊಳ್ಳುತ್ತಾರೆ.

CWE ಚಾನೆಲ್ ನ ಮತ್ತೊಂದು ವಿಡಿಯೊವನ್ನು ಅವಿನಾಶ್ ಎಂಬ ಫೇಸ್‌ಬುಕ್ ಅಕೌಂಟಿನಿಂದ ಪೋಸ್ಟ್ ಮಾಡಿ “ಹಿಂದೂಸ್ತಾನಿ ಮಹಿಳೆಯ ಶಕ್ತಿ ನೋಡಿ. ಮುಂಬೈಯಲ್ಲಿ, ಪಾಕಿಸ್ತಾನದ ಮಹಿಳಾ ಫ್ರೀಸ್ಟೈಲ್ ಕುಸ್ತಿಪಟುವೊಬ್ಬಳು ಅಖಾಡಕ್ಕಿಳಿದು, ಭಾರತೀಯ ಮಹಿಳೆಯರಿಗೆ ಅಶ್ಲೀಲವಾಗಿ ಬೈದು ಅಖಾಡಕ್ಕೆ ಇಳಿಯುವಂತೆ ಸವಾಲು ಒಡ್ಡುತ್ತಾಳೆ. ಅವಳ ಸವಾಲನ್ನು ಸಂಧ್ಯಾ ಫಡ್ಕೆ ಎಂಬ ದುರ್ಗಾ ವಾಹಿನಿಯ ಮಹಿಳೆ ಸ್ವೀಕರಿಸಿದಳು” ಎಂದು ಬರೆಯಲಾಗಿದೆ.

एक हिंदुस्तानी औरत की ताकत ?देखीये। मुम्बई मे एक पाकिस्तानी लेडीज फ्रीस्टाइल कुस्तीबाज महिला रिंग मे खडे हो कर भारतीय महिला ओ को गाली देते हुये रिग मे आने के लिये चैलेन्ज करने लगी इसके चैलेन्ज को स्वीकार करते हुये दुर्गा वाहिनी की महिला संन्ध्या फडके नाम की महिला रिंग मे उतर कर आई आगे क्या हुआ इस वीडियो मे आप खुद देखे ?

Posted by Avinash Singh Rajput on Tuesday, January 21, 2020

CWE ಎಂದರೆ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್. ಚಾನೆಲ್ ತನ್ನನ್ನು “ಮೊದಲ ಭಾರತೀಯ ಕುಸ್ತಿ ಮನರಂಜನಾ ಅಕಾಡೆಮಿ” ಎಂದು ಕರೆದುಕೊಳ್ಳುತ್ತದೆ. ಈ ಹಿಂದೆಯೂ ಈ ಚಾನೆಲ್ ವಿಡಿಯೋಗಳನ್ನು ಇಟ್ಟುಕೊಂದು ನೈಜ ಘಟನೆಗಳೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...