Homeಫ್ಯಾಕ್ಟ್‌ಚೆಕ್FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

- Advertisement -
- Advertisement -

“ಜಗದೀಶ್ ಶೆಟ್ಟರ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಲಂಡನ್‌ ನಗರದ ಥೇಮ್ಸ್ ನದಿ ತಟದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಅನುದಾನ ನೀಡಿದ್ದರು. ಆದರೆ, ಶೆಟ್ಟರ್ ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಆ ಅನುದಾನವನ್ನು ಕಡಿತಗೊಳಿಸಿದ್ದರು. ಲಂಡನ್‌ನಲ್ಲಿ ಬಸವಣ್ಣ ಪ್ರತಿಮೆ ನಿರ್ಮಾಣದ ಉಸ್ತುವಾರಿ ತೆಗೆದುಕೊಂಡಿದ್ದ ಡಾ. ನೀರಜ್ ಪಾಟೀಲ್ ಹಲವು ಭಾರೀ ಆಹ್ವಾನಿಸಿದ್ದರೂ, ಸಿದ್ದರಾಮಯ್ಯ ಪ್ರತಿಮೆ ಉದ್ಘಾಟನೆಗೆ ಹೋಗಿರಲಿಲ್ಲ. ಕೊನೆಗೆ ನೀರಜ್ ಪಾಟೀಲ್ ಅವರು ಪ್ರಧಾನಿ ಮೋದಿಯಿಂದ ಪ್ರತಿಮೆ ಉದ್ಘಾಟಿಸಿದ್ದರು. ಇದೆಲ್ಲಾ ಆದ ಬಳಿಕ ಲಂಡನ್‌ಗೆ ತೆರಳಿದ್ದ ಸಿದ್ದರಾಮಯ್ಯ ಅವರು ಒಂದು ದಿನ ರಾತ್ರಿ ಹೊತ್ತು ಬಸನವಣ್ಣ ಪ್ರತಿಮೆ ಬಳಿ ತೆರಳಿ ಫೋಟೋ ತೆಗೆಸಿಕೊಂಡು ಪೋಸ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರು ಬಸವಣ್ಣ ಮತ್ತು ಅವರ ಅನುಯಾಯಿಗಳ ವಿರೋಧಿ” ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಇದು 2018ರ ವಿಷಯ ಎಂದು ಗೊತ್ತಾಗಿದೆ. 2018ರಲ್ಲಿ ಸಿದ್ದರಾಮಯ್ಯನವರು ಲಂಡನ್‌ಗೆ ತೆರಳಿದ್ದ ವೇಳೆ ವ ಬಸವಣ್ಣ ಪ್ರತಿಮೆ ಮುಂದೆ ನಿಂತು ಫೋಟೋಈ ತೆಗೆಸಿಕೊಂಡಿದ್ದರು. ಅದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು “ಲಂಡನ್‌ನ ಜೇಮ್ಸ್ ಪಾರ್ಕ್‌ನಲ್ಲಿರುವ ಅಣ್ಣ ಬಸವಣ್ಣನವರ ಪುತ್ಥಳಿ ನೋಡಿ‌ ಕಣ್ತುಂಬಿ ಬಂತು. ನಿಜವಾದ ವಿಶ್ವಗುರು ನಮ್ಮ ಬಸವಣ್ಣ” ಎಂದು ಬರೆದುಕೊಂಡಿದ್ದರು.

ಸಿದ್ದರಾಮಯ್ಯನವರು ಫೋಟೋ ತೆಗೆಸಿಕೊಂಡಿದ್ದ ಬಸವಣ್ಣ ಪ್ರತಿಮೆಯ ನಿರ್ಮಾಣದ ಉಸ್ತುವಾರಿಯನ್ನು ಕರ್ನಾಟಕದ ಕಲಬುರಗಿ ಮೂಲದ ಅಂದಿನ ಲಂಡನ್ ಮೇಯರ್ ಡಾ. ನೀರಜ್ ಪಾಟೀಲ್ ವಹಿಸಿದ್ದರು. ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದ ಈ ನೀರಜ್ ಪಾಟೀಲ್, ಸಿದ್ದರಾಮಯ್ಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು. ಆ ಆರೋಪಗಳನ್ನು ಆಧರಿಸಿ ವೈರಲ್ ವಿಡಿಯೋ ತಯಾರಿಸಲಾಗಿದೆ.

ಟಿವಿ ವಾಹಿನಿ ಜೊತೆ ಮಾತನಾಡಿದ್ದ ನೀರಜ್ ಪಾಟೀಲ್, “ಸಿದ್ದರಾಮಯ್ಯನವರು ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಜಗದೀಶ್ ಶೆಟ್ಟರ್ ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು. ಇದರಿಂದ ನಾವು ತುಂಬಾ ಕಷ್ಟಪಡುವಂತಾಯಿತು. ಅನುದಾನ ಕೋರಿ ನಾವು ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, “ಲಂಡನ್‌ನಲ್ಲಿ ಯಾರಿಗೆ ಬಸವಣ್ಣ ಪ್ರತಿಮೆ? ಅಲ್ಲಿ ಯಾರಿಗೆ ಬಸವಣ್ಣ ಗೊತ್ತು?” ಎಂದು ಉಡಾಫೆಯಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆ ಕಾರ್ಯಕ್ರಮಕ್ಕೆ ಬರಲು ನಿರಾಕರಿಸಿದ್ದರು” ಎಂದು ಆರೋಪಿಸಿದ್ದರು.

ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದರು. “ನಾನು ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಯಾವುದೇ ಅನುದಾನ ನೀಡಿಲ್ಲ ಮತ್ತು ಖಡಿತಗೊಳಿಸಿಲ್ಲ. ಪ್ರಧಾನಿ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಾರೆ ಎಂಬ ಕಾರಣಕ್ಕೆ ನಾನು ಹೋಗಿರಲಿಲ್ಲ ಎಂಬುವುದು ಸುಳ್ಳು. ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ನಾನು ಪ್ರತಿಮೆ ಉದ್ಘಾಟನೆಗೆ ಹೋಗಲಾಗಿಲ್ಲ. ಆ ಬಳಿಕ ಲಂಡನ್‌ಗೆ ಹೋಗಿದ್ದಾಗ ಬಸವಣ್ಣ ಪ್ರತಿಮೆ ಕಂಡು ಫೋಟೋ ತೆಗೆಸಿಕೊಂಡಿದ್ದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ 

ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದಂತೆ ಡಾ. ನೀರಜ್ ಪಾಟೀಲ್ ಮಾಡಿರುವ ಆರೋಪಗಳು ಸುಳ್ಳು. ಅಲ್ಲದೆ, ನಾವು ಪರಿಶೀಲನೆ ನಡೆಸಿದಂತೆ ಸಿಎಂ ಸಿದ್ದರಾಮಯ್ಯ ಬಸವಣ್ಣ ಪ್ರತಿಮೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದಾರೆ ಎಂದು ನೀರಜ್ ಪಾಟೀಲ್ ಹೊರತು ಇತರ ಯಾರೂ ಆರೋಪ ಮಾಡಿಲ್ಲ. 2018ರ ಬಳಿಕ ಬಂದ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಕೂಡ ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನೀರಜ್ ಪಾಟೀಲ್ ಆರೋಪಕ್ಕೆ ಪೂರಕವಾದ ಯಾವುದೇ ಸಾಕ್ಷ್ಯಗಳು ಕೂಡ ದೊರೆತಿಲ್ಲ.

ಇದನ್ನೂ ಓದಿ : FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...