Homeಫ್ಯಾಕ್ಟ್‌ಚೆಕ್FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

- Advertisement -
- Advertisement -

“ಜಗದೀಶ್ ಶೆಟ್ಟರ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಲಂಡನ್‌ ನಗರದ ಥೇಮ್ಸ್ ನದಿ ತಟದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಅನುದಾನ ನೀಡಿದ್ದರು. ಆದರೆ, ಶೆಟ್ಟರ್ ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಆ ಅನುದಾನವನ್ನು ಕಡಿತಗೊಳಿಸಿದ್ದರು. ಲಂಡನ್‌ನಲ್ಲಿ ಬಸವಣ್ಣ ಪ್ರತಿಮೆ ನಿರ್ಮಾಣದ ಉಸ್ತುವಾರಿ ತೆಗೆದುಕೊಂಡಿದ್ದ ಡಾ. ನೀರಜ್ ಪಾಟೀಲ್ ಹಲವು ಭಾರೀ ಆಹ್ವಾನಿಸಿದ್ದರೂ, ಸಿದ್ದರಾಮಯ್ಯ ಪ್ರತಿಮೆ ಉದ್ಘಾಟನೆಗೆ ಹೋಗಿರಲಿಲ್ಲ. ಕೊನೆಗೆ ನೀರಜ್ ಪಾಟೀಲ್ ಅವರು ಪ್ರಧಾನಿ ಮೋದಿಯಿಂದ ಪ್ರತಿಮೆ ಉದ್ಘಾಟಿಸಿದ್ದರು. ಇದೆಲ್ಲಾ ಆದ ಬಳಿಕ ಲಂಡನ್‌ಗೆ ತೆರಳಿದ್ದ ಸಿದ್ದರಾಮಯ್ಯ ಅವರು ಒಂದು ದಿನ ರಾತ್ರಿ ಹೊತ್ತು ಬಸನವಣ್ಣ ಪ್ರತಿಮೆ ಬಳಿ ತೆರಳಿ ಫೋಟೋ ತೆಗೆಸಿಕೊಂಡು ಪೋಸ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರು ಬಸವಣ್ಣ ಮತ್ತು ಅವರ ಅನುಯಾಯಿಗಳ ವಿರೋಧಿ” ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಇದು 2018ರ ವಿಷಯ ಎಂದು ಗೊತ್ತಾಗಿದೆ. 2018ರಲ್ಲಿ ಸಿದ್ದರಾಮಯ್ಯನವರು ಲಂಡನ್‌ಗೆ ತೆರಳಿದ್ದ ವೇಳೆ ವ ಬಸವಣ್ಣ ಪ್ರತಿಮೆ ಮುಂದೆ ನಿಂತು ಫೋಟೋಈ ತೆಗೆಸಿಕೊಂಡಿದ್ದರು. ಅದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು “ಲಂಡನ್‌ನ ಜೇಮ್ಸ್ ಪಾರ್ಕ್‌ನಲ್ಲಿರುವ ಅಣ್ಣ ಬಸವಣ್ಣನವರ ಪುತ್ಥಳಿ ನೋಡಿ‌ ಕಣ್ತುಂಬಿ ಬಂತು. ನಿಜವಾದ ವಿಶ್ವಗುರು ನಮ್ಮ ಬಸವಣ್ಣ” ಎಂದು ಬರೆದುಕೊಂಡಿದ್ದರು.

ಸಿದ್ದರಾಮಯ್ಯನವರು ಫೋಟೋ ತೆಗೆಸಿಕೊಂಡಿದ್ದ ಬಸವಣ್ಣ ಪ್ರತಿಮೆಯ ನಿರ್ಮಾಣದ ಉಸ್ತುವಾರಿಯನ್ನು ಕರ್ನಾಟಕದ ಕಲಬುರಗಿ ಮೂಲದ ಅಂದಿನ ಲಂಡನ್ ಮೇಯರ್ ಡಾ. ನೀರಜ್ ಪಾಟೀಲ್ ವಹಿಸಿದ್ದರು. ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದ ಈ ನೀರಜ್ ಪಾಟೀಲ್, ಸಿದ್ದರಾಮಯ್ಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು. ಆ ಆರೋಪಗಳನ್ನು ಆಧರಿಸಿ ವೈರಲ್ ವಿಡಿಯೋ ತಯಾರಿಸಲಾಗಿದೆ.

ಟಿವಿ ವಾಹಿನಿ ಜೊತೆ ಮಾತನಾಡಿದ್ದ ನೀರಜ್ ಪಾಟೀಲ್, “ಸಿದ್ದರಾಮಯ್ಯನವರು ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಜಗದೀಶ್ ಶೆಟ್ಟರ್ ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು. ಇದರಿಂದ ನಾವು ತುಂಬಾ ಕಷ್ಟಪಡುವಂತಾಯಿತು. ಅನುದಾನ ಕೋರಿ ನಾವು ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, “ಲಂಡನ್‌ನಲ್ಲಿ ಯಾರಿಗೆ ಬಸವಣ್ಣ ಪ್ರತಿಮೆ? ಅಲ್ಲಿ ಯಾರಿಗೆ ಬಸವಣ್ಣ ಗೊತ್ತು?” ಎಂದು ಉಡಾಫೆಯಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆ ಕಾರ್ಯಕ್ರಮಕ್ಕೆ ಬರಲು ನಿರಾಕರಿಸಿದ್ದರು” ಎಂದು ಆರೋಪಿಸಿದ್ದರು.

ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದರು. “ನಾನು ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಯಾವುದೇ ಅನುದಾನ ನೀಡಿಲ್ಲ ಮತ್ತು ಖಡಿತಗೊಳಿಸಿಲ್ಲ. ಪ್ರಧಾನಿ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಾರೆ ಎಂಬ ಕಾರಣಕ್ಕೆ ನಾನು ಹೋಗಿರಲಿಲ್ಲ ಎಂಬುವುದು ಸುಳ್ಳು. ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ನಾನು ಪ್ರತಿಮೆ ಉದ್ಘಾಟನೆಗೆ ಹೋಗಲಾಗಿಲ್ಲ. ಆ ಬಳಿಕ ಲಂಡನ್‌ಗೆ ಹೋಗಿದ್ದಾಗ ಬಸವಣ್ಣ ಪ್ರತಿಮೆ ಕಂಡು ಫೋಟೋ ತೆಗೆಸಿಕೊಂಡಿದ್ದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ 

ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದಂತೆ ಡಾ. ನೀರಜ್ ಪಾಟೀಲ್ ಮಾಡಿರುವ ಆರೋಪಗಳು ಸುಳ್ಳು. ಅಲ್ಲದೆ, ನಾವು ಪರಿಶೀಲನೆ ನಡೆಸಿದಂತೆ ಸಿಎಂ ಸಿದ್ದರಾಮಯ್ಯ ಬಸವಣ್ಣ ಪ್ರತಿಮೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದಾರೆ ಎಂದು ನೀರಜ್ ಪಾಟೀಲ್ ಹೊರತು ಇತರ ಯಾರೂ ಆರೋಪ ಮಾಡಿಲ್ಲ. 2018ರ ಬಳಿಕ ಬಂದ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಕೂಡ ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನೀರಜ್ ಪಾಟೀಲ್ ಆರೋಪಕ್ಕೆ ಪೂರಕವಾದ ಯಾವುದೇ ಸಾಕ್ಷ್ಯಗಳು ಕೂಡ ದೊರೆತಿಲ್ಲ.

ಇದನ್ನೂ ಓದಿ : FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...