Homeಫ್ಯಾಕ್ಟ್‌ಚೆಕ್FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

- Advertisement -
- Advertisement -

“ಜಗದೀಶ್ ಶೆಟ್ಟರ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಲಂಡನ್‌ ನಗರದ ಥೇಮ್ಸ್ ನದಿ ತಟದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಅನುದಾನ ನೀಡಿದ್ದರು. ಆದರೆ, ಶೆಟ್ಟರ್ ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಆ ಅನುದಾನವನ್ನು ಕಡಿತಗೊಳಿಸಿದ್ದರು. ಲಂಡನ್‌ನಲ್ಲಿ ಬಸವಣ್ಣ ಪ್ರತಿಮೆ ನಿರ್ಮಾಣದ ಉಸ್ತುವಾರಿ ತೆಗೆದುಕೊಂಡಿದ್ದ ಡಾ. ನೀರಜ್ ಪಾಟೀಲ್ ಹಲವು ಭಾರೀ ಆಹ್ವಾನಿಸಿದ್ದರೂ, ಸಿದ್ದರಾಮಯ್ಯ ಪ್ರತಿಮೆ ಉದ್ಘಾಟನೆಗೆ ಹೋಗಿರಲಿಲ್ಲ. ಕೊನೆಗೆ ನೀರಜ್ ಪಾಟೀಲ್ ಅವರು ಪ್ರಧಾನಿ ಮೋದಿಯಿಂದ ಪ್ರತಿಮೆ ಉದ್ಘಾಟಿಸಿದ್ದರು. ಇದೆಲ್ಲಾ ಆದ ಬಳಿಕ ಲಂಡನ್‌ಗೆ ತೆರಳಿದ್ದ ಸಿದ್ದರಾಮಯ್ಯ ಅವರು ಒಂದು ದಿನ ರಾತ್ರಿ ಹೊತ್ತು ಬಸನವಣ್ಣ ಪ್ರತಿಮೆ ಬಳಿ ತೆರಳಿ ಫೋಟೋ ತೆಗೆಸಿಕೊಂಡು ಪೋಸ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರು ಬಸವಣ್ಣ ಮತ್ತು ಅವರ ಅನುಯಾಯಿಗಳ ವಿರೋಧಿ” ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಇದು 2018ರ ವಿಷಯ ಎಂದು ಗೊತ್ತಾಗಿದೆ. 2018ರಲ್ಲಿ ಸಿದ್ದರಾಮಯ್ಯನವರು ಲಂಡನ್‌ಗೆ ತೆರಳಿದ್ದ ವೇಳೆ ವ ಬಸವಣ್ಣ ಪ್ರತಿಮೆ ಮುಂದೆ ನಿಂತು ಫೋಟೋಈ ತೆಗೆಸಿಕೊಂಡಿದ್ದರು. ಅದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು “ಲಂಡನ್‌ನ ಜೇಮ್ಸ್ ಪಾರ್ಕ್‌ನಲ್ಲಿರುವ ಅಣ್ಣ ಬಸವಣ್ಣನವರ ಪುತ್ಥಳಿ ನೋಡಿ‌ ಕಣ್ತುಂಬಿ ಬಂತು. ನಿಜವಾದ ವಿಶ್ವಗುರು ನಮ್ಮ ಬಸವಣ್ಣ” ಎಂದು ಬರೆದುಕೊಂಡಿದ್ದರು.

ಸಿದ್ದರಾಮಯ್ಯನವರು ಫೋಟೋ ತೆಗೆಸಿಕೊಂಡಿದ್ದ ಬಸವಣ್ಣ ಪ್ರತಿಮೆಯ ನಿರ್ಮಾಣದ ಉಸ್ತುವಾರಿಯನ್ನು ಕರ್ನಾಟಕದ ಕಲಬುರಗಿ ಮೂಲದ ಅಂದಿನ ಲಂಡನ್ ಮೇಯರ್ ಡಾ. ನೀರಜ್ ಪಾಟೀಲ್ ವಹಿಸಿದ್ದರು. ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದ ಈ ನೀರಜ್ ಪಾಟೀಲ್, ಸಿದ್ದರಾಮಯ್ಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು. ಆ ಆರೋಪಗಳನ್ನು ಆಧರಿಸಿ ವೈರಲ್ ವಿಡಿಯೋ ತಯಾರಿಸಲಾಗಿದೆ.

ಟಿವಿ ವಾಹಿನಿ ಜೊತೆ ಮಾತನಾಡಿದ್ದ ನೀರಜ್ ಪಾಟೀಲ್, “ಸಿದ್ದರಾಮಯ್ಯನವರು ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಜಗದೀಶ್ ಶೆಟ್ಟರ್ ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು. ಇದರಿಂದ ನಾವು ತುಂಬಾ ಕಷ್ಟಪಡುವಂತಾಯಿತು. ಅನುದಾನ ಕೋರಿ ನಾವು ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, “ಲಂಡನ್‌ನಲ್ಲಿ ಯಾರಿಗೆ ಬಸವಣ್ಣ ಪ್ರತಿಮೆ? ಅಲ್ಲಿ ಯಾರಿಗೆ ಬಸವಣ್ಣ ಗೊತ್ತು?” ಎಂದು ಉಡಾಫೆಯಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆ ಕಾರ್ಯಕ್ರಮಕ್ಕೆ ಬರಲು ನಿರಾಕರಿಸಿದ್ದರು” ಎಂದು ಆರೋಪಿಸಿದ್ದರು.

ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದರು. “ನಾನು ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಯಾವುದೇ ಅನುದಾನ ನೀಡಿಲ್ಲ ಮತ್ತು ಖಡಿತಗೊಳಿಸಿಲ್ಲ. ಪ್ರಧಾನಿ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಾರೆ ಎಂಬ ಕಾರಣಕ್ಕೆ ನಾನು ಹೋಗಿರಲಿಲ್ಲ ಎಂಬುವುದು ಸುಳ್ಳು. ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ನಾನು ಪ್ರತಿಮೆ ಉದ್ಘಾಟನೆಗೆ ಹೋಗಲಾಗಿಲ್ಲ. ಆ ಬಳಿಕ ಲಂಡನ್‌ಗೆ ಹೋಗಿದ್ದಾಗ ಬಸವಣ್ಣ ಪ್ರತಿಮೆ ಕಂಡು ಫೋಟೋ ತೆಗೆಸಿಕೊಂಡಿದ್ದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ 

ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದಂತೆ ಡಾ. ನೀರಜ್ ಪಾಟೀಲ್ ಮಾಡಿರುವ ಆರೋಪಗಳು ಸುಳ್ಳು. ಅಲ್ಲದೆ, ನಾವು ಪರಿಶೀಲನೆ ನಡೆಸಿದಂತೆ ಸಿಎಂ ಸಿದ್ದರಾಮಯ್ಯ ಬಸವಣ್ಣ ಪ್ರತಿಮೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದಾರೆ ಎಂದು ನೀರಜ್ ಪಾಟೀಲ್ ಹೊರತು ಇತರ ಯಾರೂ ಆರೋಪ ಮಾಡಿಲ್ಲ. 2018ರ ಬಳಿಕ ಬಂದ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಕೂಡ ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನೀರಜ್ ಪಾಟೀಲ್ ಆರೋಪಕ್ಕೆ ಪೂರಕವಾದ ಯಾವುದೇ ಸಾಕ್ಷ್ಯಗಳು ಕೂಡ ದೊರೆತಿಲ್ಲ.

ಇದನ್ನೂ ಓದಿ : FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...