Homeಫ್ಯಾಕ್ಟ್‌ಚೆಕ್FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

- Advertisement -
- Advertisement -

“ಜಗದೀಶ್ ಶೆಟ್ಟರ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಲಂಡನ್‌ ನಗರದ ಥೇಮ್ಸ್ ನದಿ ತಟದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಅನುದಾನ ನೀಡಿದ್ದರು. ಆದರೆ, ಶೆಟ್ಟರ್ ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಆ ಅನುದಾನವನ್ನು ಕಡಿತಗೊಳಿಸಿದ್ದರು. ಲಂಡನ್‌ನಲ್ಲಿ ಬಸವಣ್ಣ ಪ್ರತಿಮೆ ನಿರ್ಮಾಣದ ಉಸ್ತುವಾರಿ ತೆಗೆದುಕೊಂಡಿದ್ದ ಡಾ. ನೀರಜ್ ಪಾಟೀಲ್ ಹಲವು ಭಾರೀ ಆಹ್ವಾನಿಸಿದ್ದರೂ, ಸಿದ್ದರಾಮಯ್ಯ ಪ್ರತಿಮೆ ಉದ್ಘಾಟನೆಗೆ ಹೋಗಿರಲಿಲ್ಲ. ಕೊನೆಗೆ ನೀರಜ್ ಪಾಟೀಲ್ ಅವರು ಪ್ರಧಾನಿ ಮೋದಿಯಿಂದ ಪ್ರತಿಮೆ ಉದ್ಘಾಟಿಸಿದ್ದರು. ಇದೆಲ್ಲಾ ಆದ ಬಳಿಕ ಲಂಡನ್‌ಗೆ ತೆರಳಿದ್ದ ಸಿದ್ದರಾಮಯ್ಯ ಅವರು ಒಂದು ದಿನ ರಾತ್ರಿ ಹೊತ್ತು ಬಸನವಣ್ಣ ಪ್ರತಿಮೆ ಬಳಿ ತೆರಳಿ ಫೋಟೋ ತೆಗೆಸಿಕೊಂಡು ಪೋಸ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರು ಬಸವಣ್ಣ ಮತ್ತು ಅವರ ಅನುಯಾಯಿಗಳ ವಿರೋಧಿ” ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಇದು 2018ರ ವಿಷಯ ಎಂದು ಗೊತ್ತಾಗಿದೆ. 2018ರಲ್ಲಿ ಸಿದ್ದರಾಮಯ್ಯನವರು ಲಂಡನ್‌ಗೆ ತೆರಳಿದ್ದ ವೇಳೆ ವ ಬಸವಣ್ಣ ಪ್ರತಿಮೆ ಮುಂದೆ ನಿಂತು ಫೋಟೋಈ ತೆಗೆಸಿಕೊಂಡಿದ್ದರು. ಅದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು “ಲಂಡನ್‌ನ ಜೇಮ್ಸ್ ಪಾರ್ಕ್‌ನಲ್ಲಿರುವ ಅಣ್ಣ ಬಸವಣ್ಣನವರ ಪುತ್ಥಳಿ ನೋಡಿ‌ ಕಣ್ತುಂಬಿ ಬಂತು. ನಿಜವಾದ ವಿಶ್ವಗುರು ನಮ್ಮ ಬಸವಣ್ಣ” ಎಂದು ಬರೆದುಕೊಂಡಿದ್ದರು.

ಸಿದ್ದರಾಮಯ್ಯನವರು ಫೋಟೋ ತೆಗೆಸಿಕೊಂಡಿದ್ದ ಬಸವಣ್ಣ ಪ್ರತಿಮೆಯ ನಿರ್ಮಾಣದ ಉಸ್ತುವಾರಿಯನ್ನು ಕರ್ನಾಟಕದ ಕಲಬುರಗಿ ಮೂಲದ ಅಂದಿನ ಲಂಡನ್ ಮೇಯರ್ ಡಾ. ನೀರಜ್ ಪಾಟೀಲ್ ವಹಿಸಿದ್ದರು. ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದ ಈ ನೀರಜ್ ಪಾಟೀಲ್, ಸಿದ್ದರಾಮಯ್ಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು. ಆ ಆರೋಪಗಳನ್ನು ಆಧರಿಸಿ ವೈರಲ್ ವಿಡಿಯೋ ತಯಾರಿಸಲಾಗಿದೆ.

ಟಿವಿ ವಾಹಿನಿ ಜೊತೆ ಮಾತನಾಡಿದ್ದ ನೀರಜ್ ಪಾಟೀಲ್, “ಸಿದ್ದರಾಮಯ್ಯನವರು ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಜಗದೀಶ್ ಶೆಟ್ಟರ್ ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು. ಇದರಿಂದ ನಾವು ತುಂಬಾ ಕಷ್ಟಪಡುವಂತಾಯಿತು. ಅನುದಾನ ಕೋರಿ ನಾವು ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, “ಲಂಡನ್‌ನಲ್ಲಿ ಯಾರಿಗೆ ಬಸವಣ್ಣ ಪ್ರತಿಮೆ? ಅಲ್ಲಿ ಯಾರಿಗೆ ಬಸವಣ್ಣ ಗೊತ್ತು?” ಎಂದು ಉಡಾಫೆಯಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆ ಕಾರ್ಯಕ್ರಮಕ್ಕೆ ಬರಲು ನಿರಾಕರಿಸಿದ್ದರು” ಎಂದು ಆರೋಪಿಸಿದ್ದರು.

ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದರು. “ನಾನು ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಯಾವುದೇ ಅನುದಾನ ನೀಡಿಲ್ಲ ಮತ್ತು ಖಡಿತಗೊಳಿಸಿಲ್ಲ. ಪ್ರಧಾನಿ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಾರೆ ಎಂಬ ಕಾರಣಕ್ಕೆ ನಾನು ಹೋಗಿರಲಿಲ್ಲ ಎಂಬುವುದು ಸುಳ್ಳು. ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ನಾನು ಪ್ರತಿಮೆ ಉದ್ಘಾಟನೆಗೆ ಹೋಗಲಾಗಿಲ್ಲ. ಆ ಬಳಿಕ ಲಂಡನ್‌ಗೆ ಹೋಗಿದ್ದಾಗ ಬಸವಣ್ಣ ಪ್ರತಿಮೆ ಕಂಡು ಫೋಟೋ ತೆಗೆಸಿಕೊಂಡಿದ್ದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ 

ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದಂತೆ ಡಾ. ನೀರಜ್ ಪಾಟೀಲ್ ಮಾಡಿರುವ ಆರೋಪಗಳು ಸುಳ್ಳು. ಅಲ್ಲದೆ, ನಾವು ಪರಿಶೀಲನೆ ನಡೆಸಿದಂತೆ ಸಿಎಂ ಸಿದ್ದರಾಮಯ್ಯ ಬಸವಣ್ಣ ಪ್ರತಿಮೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದಾರೆ ಎಂದು ನೀರಜ್ ಪಾಟೀಲ್ ಹೊರತು ಇತರ ಯಾರೂ ಆರೋಪ ಮಾಡಿಲ್ಲ. 2018ರ ಬಳಿಕ ಬಂದ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಕೂಡ ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನೀರಜ್ ಪಾಟೀಲ್ ಆರೋಪಕ್ಕೆ ಪೂರಕವಾದ ಯಾವುದೇ ಸಾಕ್ಷ್ಯಗಳು ಕೂಡ ದೊರೆತಿಲ್ಲ.

ಇದನ್ನೂ ಓದಿ : FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...