Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...