Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...