Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...