Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...