Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...