Homeಫ್ಯಾಕ್ಟ್‌ಚೆಕ್Fact Check: ಇನ್ನು ಮುಂದೆ ವಾರಕ್ಕೆ ಮೂರು ದಿನ ರಜೆ ಎನ್ನುವುದು ನಿಜಾನಾ?

Fact Check: ಇನ್ನು ಮುಂದೆ ವಾರಕ್ಕೆ ಮೂರು ದಿನ ರಜೆ ಎನ್ನುವುದು ನಿಜಾನಾ?

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರದ 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1,2024) ಮಂಡಿಸಿದ್ದಾರೆ.

ಬಜೆಟ್‌ ಮಂಡನೆಗೂ ಮುನ್ನ ಮತ್ತು ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್‌ ಒಂದು ವೈರಲ್‌ ಆಗಿದೆ. ಆ ಪೋಸ್ಟರ್ ಪ್ರಕಾರ, ಇನ್ಮುಂದೆ ಕಚೇರಿ ಕೆಲಸ ಮಾಡುವ ಉದ್ಯೋಗಿಗಳಿಗೆ ವಾರದಲ್ಲಿ ಮೂರು ದಿನ ರಜೆ ಸಿಗಲಿದೆ. ಇಂದು (ಫೆ.1,2024) ಮಂಡನೆಯಾಗುವ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಅಷ್ಟೇ ಅಲ್ಲದೆ, ಕಂಪನಿಗಳು ಉದ್ಯೋಗಿಗಳ ಕೆಲಸದ ಅವಧಿಯನ್ನು 10-12 ಗಂಟೆಗೆ ಏರಿಸಬಹುದು. ವಾರದಲ್ಲಿ ನಾಲ್ಕು ದಿನ ಮಾತ್ರ ಕೆಲಸವಿರಲಿದೆ. ಕೈಗೆ ಬರುವ ದುಡ್ಡು (ವೇತನ) ಕಡಿಮೆಯಾಗಲಿದೆ. ಪಿಎಫ್ ಹೆಚ್ಚಾಗಲಿದೆ. ಮೋದಿ ಸರ್ಕಾರ ಹೊಸ ನಿಯಮಗಳನ್ನು ಒಳಗೊಂಡ ಈ ಕಾರ್ಮಿಕ ಕಾನೂನನ್ನು ಅತೀ ಶೀಘ್ರದಲ್ಲಿ ಜಾರಿಗೊಳಿಸಲಿದೆ ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್‌ : ಬಜೆಟ್‌ ಮಂಡನೆಯ ದಿನವಾದ ಇಂದು ( ಫೆ.1,2024) ಈ ಪೋಸ್ಟರ್‌ ಭಾರೀ ವೈರಲ್‌ ಆಗಿರುವ ಹಿನ್ನೆಲೆ, ನಾನುಗೌರಿ.ಕಾಂ ಈ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ನಾವು ಗೂಗಲ್‌ ಸರ್ಚ್‌ ಮಾಡಿದಾಗ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧೀನದ ‘ಪ್ರೆಸ್ ಇನ್ಪಾರ್ಮೇಶನ್ ಬ್ಯೂರೋ ಫ್ಯಾಕ್ಟ್‌ ಚೆಕ್‌’ (PIB Fact Check) ಎಕ್ಸ್‌ ಖಾತೆಯಲ್ಲಿ ಪೋಸ್ಟರ್ ಕಾಣಿಸಿಕೊಂಡಿದೆ. ಜನವರಿ 31,2024ರಂದು ಈ ಪೋಸ್ಟರ್‌ ಪೋಸ್ಟ್‌ ಮಾಡಿರುವ ಪಿಐಬಿ, “ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೂರು ದಿನ ರಜೆಯ ನೀತಿಯನ್ನು ಪ್ರಕಟಿಸಲಿದ್ದಾರೆ ಎಂಬ ಫೋಟೋ ಒಂದು ವೈರಲ್‌ ಆಗ್ತಿದೆ. ಇದು ನಕಲಿಯಾಗಿದೆ. ಅಂತಹ ಯಾವುದೇ ಪ್ರಸ್ತಾವನೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಹೊಂದಿಲ್ಲ” ಎಂದು ತಿಳಿಸಿದೆ.

2023 ಡಿಸೆಂಬರ್ 15ರಂದು ಇದೇ ಪೋಸ್ಟರ್ ಕುರಿತಾಗಿ ‘ಪ್ರಜಾವಾಣಿ ಪತ್ರಿಕೆ’ “ಇನ್ನು ಮುಂದೆ ವಾರಕ್ಕೆ ಮೂರು ದಿನ ರಜೆ ಎಂಬುವುದು ಸುಳ್ಳು” ಎಂಬ ಶೀರ್ಷಿಕೆಯ ಫ್ಯಾಕ್ಟ್‌ ಚೆಕ್‌ ಸುದ್ದಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ರಜಾವಾಣಿ ಸುದ್ದಿ ಲಿಂಕ್‌

ಜನವರಿ 31, 2024ರಂದು ಎನ್‌ಡಿ ಟಿವಿ ಕೂಡ “Fact Check: Viral Claim On Proposed Changes In Work Week Debunked”ಎಂಬ ಶೀರ್ಷಿಕೆಯಲ್ಲಿ ಈ ಕುರಿತು ಸುದ್ದಿ ಪ್ರಕಟಿಸಿದೆ. ರಜೆಯ ಹೆಸರಿನಲ್ಲಿ ವೈರಲ್‌ ಆಗುತ್ತಿರುವ ಪೋಸ್ಟರ್ ಸುಳ್ಳು ಎಂದಿದೆ.

ಎನ್‌ಡಿ ಟಿವಿ ಸುದ್ದಿ ಲಿಂಕ್ 

ಇಂದು (ಫೆ.1,2024) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ವಾರಕ್ಕೆ ಮೂರು ದಿನ ರಜೆಯ ಬಗ್ಗೆ ಉಲ್ಲೇಖಿಸಿದ ಬಗ್ಗೆ ಯಾವುದೇ ಮಾಹಿತಿ ನಮಗೆ ದೊರೆತಿಲ್ಲ. ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಿಸುವ ಬಗ್ಗೆಯೂ ಅವರು ಘೋಷಣೆ ಮಾಡಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿರುವ ಪೋಸ್ಟರ್‌ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ: Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...