Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

- Advertisement -
- Advertisement -

ಹಿಂದೂ ಸನ್ಯಾಸಿಯೊಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ಭಾರತದಲ್ಲಿ ಹಿಂದೂ ಸನ್ಯಾಸಿಯೊಬ್ಬರು ಇಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಅರೆ ನಗ್ನಾವಸ್ಥೆಯಲ್ಲಿರುವ ಇಬ್ಬರು ಮಹಿಳೆಯರೊಂದಿಗೆ ಏಕಾಂತವಾಗಿ ಇದ್ದ ಸಂದರ್ಭದಲ್ಲಿ ಗುಂಪೊಂದು ಕೊಠಡಿಗೆ ನುಗ್ಗಿಇಬ್ಬರು ಮಹಿಳೆ ಮತ್ತು ಸ್ವಾಮೀಜಿಯ ಮೇಲೆ  ಹಲ್ಲೆ ಮಾಡುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.

ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಸಿಕ್ಕಿಬಿದ್ದ ಸ್ವಾಮೀಜಿಯನ್ನು ನಿರ್ಮಲ್ ಸಿಂಗ್ ಜಿ ಹಿಂದೂ ಸನ್ಯಾಸಿ ಎಂದು ಆರೋಪಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸ್ವಾಮೀಜಿಯೊಬ್ಬರ ಫೋಟೊದೊಂದಿಗೆ ಸಂಯೋಜಿಸಲಾಗಿದ್ದು, ಫೋಟೊದಲ್ಲಿರುವ ಸ್ವಾಮೀಜಿ ಮತ್ತು ವಿಡಿಯೋದಲ್ಲಿರುವ ಸಾಧು ಇಬ್ಬರು ಒಬ್ಬರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಕುರಿತು ಮಾಡಿರುವ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 08 ಜುಲೈ 2023ರಂದು ಶ್ರೀಲಂಕಾದ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಲಭ್ಯವಾಗಿವೆ. ವರದಿಗಳ ಪ್ರಕಾರ ಶ್ರೀಲಂಕಾದ ನವಗಮುವಾ ಪ್ರದೇಶದ ಪಲ್ಲೆಗಾಮ ಸುಮನ ಥೆರೋ ಎಂಬ ಬೌದ್ಧ ಸನ್ಯಾಸಿ ಇಬ್ಬರು ಮಹಿಳೆಯರೊಂದಿಗೆ ಅರೆನಗ್ನಾವಸ್ಥೆಯಲ್ಲಿ ಇದ್ದಾಗ ಗುಂಪೊಂದು ದಾಳಿ ನಡೆಸಿದೆ. ವರದಿಗಳು ಇಲ್ಲಿ , ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವರದಿಯ ಪ್ರಕಾರ, 08 ಜುಲೈ 2023ರಂದು ನವಗಾಮುವ, ಬೊಮಿರಿಯಾ, ರಸಪಾನದಲ್ಲಿ ಸಂಭವಿಸಿದ ಆಘಾತಕಾರಿ ಘಟನೆಯಲ್ಲಿ, ಪಲ್ಲೆಗಾಮ ಸುಮನ ಥೇರೋ ಮತ್ತು ವಸತಿ ಗೃಹದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ನಂತರ ನವಗಾಮುವಾ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.

ಯುವಕರ ಗುಂಪೊಂದು ಬಲವಂತವಾಗಿ ಮನೆಗೆ ನುಗ್ಗಿ ತಾಯಿ ಮತ್ತು ಮಗಳ ಮೇಲೆ ದೈಹಿಕ ಹಲ್ಲೆ ನಡೆಸಿ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಪಲ್ಲೆಗಾಮ ಸುಮನ ಥೇರೋ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಸಮುದಾಯದಲ್ಲಿ ಪ್ರಮುಖ ಸ್ಥಾನದಲ್ಲಿರುವ ಸುಮನಾ ಥೇರೋ ಅವರು ಶಾಮೀಲಾಗಿರುವುದರಿಂದ ದೂರು ಹೆಚ್ಚಿನ ಗಮನ ಸೆಳೆಯಿತು.

ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಆರೋಪಿಗಳು, ಸುಮನ ಥೇರೋ ಇಬ್ಬರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನೀಡಿದ್ದೇವೆ ಎಂದು ಹೇಳಿದ್ದಾರೆ. ಈ ಆಪಾದಿತ ಸನ್ನಿವೇಶದಿಂದ ಕೋಪಗೊಂಡ ಗುಂಪು ಸನ್ಯಾಸಿ ಮತ್ತು ಮಹಿಳೆಯರ ಮೇಲೆ ಹಲ್ಲೆ ನಡೆಸಿತು. ಈ ಘಟನೆಯನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡ ನಂತರ ವಿಡಿಯೋ ವೈರಲ್ ಆಗಿತ್ತು ಮತ್ತು ಸಾರ್ವಜನಿಕವಾಗಿ ಖಂಡನೆಗೆ ಒಳಗಾಗಿತ್ತು.

ವರದಿಗಳ ಪ್ರಕಾರ, ಗುರೂಜಿ ಎಂದು ಕರೆಯಲ್ಪಡುವ ನಿರ್ಮಲ್ ಸಿಂಗ್ ಜಿ ಅವರು 2007 ರಲ್ಲಿ ನಿಧನರಾಗಿದ್ದಾರೆ ಎಂಬ ವರದಿಗಳು ಲಭ್ಯವಾಗಿದೆ. ಇಂಡಿಯಾ ಟುಡೇ ಜೊತೆಗಿನ ಸಂವಾದದಲ್ಲಿ, ದೆಹಲಿಯಲ್ಲಿರುವ ನಿರ್ಮಲ್ ಸಿಂಗ್ ಜಿ ಅವರ ಆಶ್ರಮದ ಸದಸ್ಯರೊಬ್ಬರು ಮಾತನಾಡಿದ್ದು, ಗುರೂಜಿಯವರಿಗೂ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಶ್ರಮ ಮುಂದಾಗಿದೆ ಎಂದು ಉಲ್ಲೇಖಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಶ್ರೀಲಂಕಾದ ಬೌದ್ಧ ಸನ್ಯಾಸಿಗೆ ಸಂಬಂಧಿಸಿದ್ದು,  ವೈರಲ್ ವಿಡಿಯೋದಲ್ಲಿ ಭಾರತದ ಸ್ವಾಮೀಜಿ ಎಂದು ಹೇಳಲಾಗುತ್ತಿರುವ ಸನ್ಯಾಸಿ ನಿರ್ಮಲ್ ಸಿಂಗ್ 2007 ರಲ್ಲಿಯೇ ನಿಧನರಾಗಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...