Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

- Advertisement -
- Advertisement -

ಹಿಂದೂ ಸನ್ಯಾಸಿಯೊಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ಭಾರತದಲ್ಲಿ ಹಿಂದೂ ಸನ್ಯಾಸಿಯೊಬ್ಬರು ಇಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಅರೆ ನಗ್ನಾವಸ್ಥೆಯಲ್ಲಿರುವ ಇಬ್ಬರು ಮಹಿಳೆಯರೊಂದಿಗೆ ಏಕಾಂತವಾಗಿ ಇದ್ದ ಸಂದರ್ಭದಲ್ಲಿ ಗುಂಪೊಂದು ಕೊಠಡಿಗೆ ನುಗ್ಗಿಇಬ್ಬರು ಮಹಿಳೆ ಮತ್ತು ಸ್ವಾಮೀಜಿಯ ಮೇಲೆ  ಹಲ್ಲೆ ಮಾಡುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.

ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಸಿಕ್ಕಿಬಿದ್ದ ಸ್ವಾಮೀಜಿಯನ್ನು ನಿರ್ಮಲ್ ಸಿಂಗ್ ಜಿ ಹಿಂದೂ ಸನ್ಯಾಸಿ ಎಂದು ಆರೋಪಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸ್ವಾಮೀಜಿಯೊಬ್ಬರ ಫೋಟೊದೊಂದಿಗೆ ಸಂಯೋಜಿಸಲಾಗಿದ್ದು, ಫೋಟೊದಲ್ಲಿರುವ ಸ್ವಾಮೀಜಿ ಮತ್ತು ವಿಡಿಯೋದಲ್ಲಿರುವ ಸಾಧು ಇಬ್ಬರು ಒಬ್ಬರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಕುರಿತು ಮಾಡಿರುವ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 08 ಜುಲೈ 2023ರಂದು ಶ್ರೀಲಂಕಾದ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಲಭ್ಯವಾಗಿವೆ. ವರದಿಗಳ ಪ್ರಕಾರ ಶ್ರೀಲಂಕಾದ ನವಗಮುವಾ ಪ್ರದೇಶದ ಪಲ್ಲೆಗಾಮ ಸುಮನ ಥೆರೋ ಎಂಬ ಬೌದ್ಧ ಸನ್ಯಾಸಿ ಇಬ್ಬರು ಮಹಿಳೆಯರೊಂದಿಗೆ ಅರೆನಗ್ನಾವಸ್ಥೆಯಲ್ಲಿ ಇದ್ದಾಗ ಗುಂಪೊಂದು ದಾಳಿ ನಡೆಸಿದೆ. ವರದಿಗಳು ಇಲ್ಲಿ , ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವರದಿಯ ಪ್ರಕಾರ, 08 ಜುಲೈ 2023ರಂದು ನವಗಾಮುವ, ಬೊಮಿರಿಯಾ, ರಸಪಾನದಲ್ಲಿ ಸಂಭವಿಸಿದ ಆಘಾತಕಾರಿ ಘಟನೆಯಲ್ಲಿ, ಪಲ್ಲೆಗಾಮ ಸುಮನ ಥೇರೋ ಮತ್ತು ವಸತಿ ಗೃಹದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ನಂತರ ನವಗಾಮುವಾ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.

ಯುವಕರ ಗುಂಪೊಂದು ಬಲವಂತವಾಗಿ ಮನೆಗೆ ನುಗ್ಗಿ ತಾಯಿ ಮತ್ತು ಮಗಳ ಮೇಲೆ ದೈಹಿಕ ಹಲ್ಲೆ ನಡೆಸಿ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಪಲ್ಲೆಗಾಮ ಸುಮನ ಥೇರೋ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಸಮುದಾಯದಲ್ಲಿ ಪ್ರಮುಖ ಸ್ಥಾನದಲ್ಲಿರುವ ಸುಮನಾ ಥೇರೋ ಅವರು ಶಾಮೀಲಾಗಿರುವುದರಿಂದ ದೂರು ಹೆಚ್ಚಿನ ಗಮನ ಸೆಳೆಯಿತು.

ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಆರೋಪಿಗಳು, ಸುಮನ ಥೇರೋ ಇಬ್ಬರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನೀಡಿದ್ದೇವೆ ಎಂದು ಹೇಳಿದ್ದಾರೆ. ಈ ಆಪಾದಿತ ಸನ್ನಿವೇಶದಿಂದ ಕೋಪಗೊಂಡ ಗುಂಪು ಸನ್ಯಾಸಿ ಮತ್ತು ಮಹಿಳೆಯರ ಮೇಲೆ ಹಲ್ಲೆ ನಡೆಸಿತು. ಈ ಘಟನೆಯನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡ ನಂತರ ವಿಡಿಯೋ ವೈರಲ್ ಆಗಿತ್ತು ಮತ್ತು ಸಾರ್ವಜನಿಕವಾಗಿ ಖಂಡನೆಗೆ ಒಳಗಾಗಿತ್ತು.

ವರದಿಗಳ ಪ್ರಕಾರ, ಗುರೂಜಿ ಎಂದು ಕರೆಯಲ್ಪಡುವ ನಿರ್ಮಲ್ ಸಿಂಗ್ ಜಿ ಅವರು 2007 ರಲ್ಲಿ ನಿಧನರಾಗಿದ್ದಾರೆ ಎಂಬ ವರದಿಗಳು ಲಭ್ಯವಾಗಿದೆ. ಇಂಡಿಯಾ ಟುಡೇ ಜೊತೆಗಿನ ಸಂವಾದದಲ್ಲಿ, ದೆಹಲಿಯಲ್ಲಿರುವ ನಿರ್ಮಲ್ ಸಿಂಗ್ ಜಿ ಅವರ ಆಶ್ರಮದ ಸದಸ್ಯರೊಬ್ಬರು ಮಾತನಾಡಿದ್ದು, ಗುರೂಜಿಯವರಿಗೂ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಶ್ರಮ ಮುಂದಾಗಿದೆ ಎಂದು ಉಲ್ಲೇಖಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಶ್ರೀಲಂಕಾದ ಬೌದ್ಧ ಸನ್ಯಾಸಿಗೆ ಸಂಬಂಧಿಸಿದ್ದು,  ವೈರಲ್ ವಿಡಿಯೋದಲ್ಲಿ ಭಾರತದ ಸ್ವಾಮೀಜಿ ಎಂದು ಹೇಳಲಾಗುತ್ತಿರುವ ಸನ್ಯಾಸಿ ನಿರ್ಮಲ್ ಸಿಂಗ್ 2007 ರಲ್ಲಿಯೇ ನಿಧನರಾಗಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...