Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

- Advertisement -
- Advertisement -

ಹಿಂದೂ ಸನ್ಯಾಸಿಯೊಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ಭಾರತದಲ್ಲಿ ಹಿಂದೂ ಸನ್ಯಾಸಿಯೊಬ್ಬರು ಇಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಅರೆ ನಗ್ನಾವಸ್ಥೆಯಲ್ಲಿರುವ ಇಬ್ಬರು ಮಹಿಳೆಯರೊಂದಿಗೆ ಏಕಾಂತವಾಗಿ ಇದ್ದ ಸಂದರ್ಭದಲ್ಲಿ ಗುಂಪೊಂದು ಕೊಠಡಿಗೆ ನುಗ್ಗಿಇಬ್ಬರು ಮಹಿಳೆ ಮತ್ತು ಸ್ವಾಮೀಜಿಯ ಮೇಲೆ  ಹಲ್ಲೆ ಮಾಡುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.

ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಸಿಕ್ಕಿಬಿದ್ದ ಸ್ವಾಮೀಜಿಯನ್ನು ನಿರ್ಮಲ್ ಸಿಂಗ್ ಜಿ ಹಿಂದೂ ಸನ್ಯಾಸಿ ಎಂದು ಆರೋಪಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸ್ವಾಮೀಜಿಯೊಬ್ಬರ ಫೋಟೊದೊಂದಿಗೆ ಸಂಯೋಜಿಸಲಾಗಿದ್ದು, ಫೋಟೊದಲ್ಲಿರುವ ಸ್ವಾಮೀಜಿ ಮತ್ತು ವಿಡಿಯೋದಲ್ಲಿರುವ ಸಾಧು ಇಬ್ಬರು ಒಬ್ಬರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಕುರಿತು ಮಾಡಿರುವ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 08 ಜುಲೈ 2023ರಂದು ಶ್ರೀಲಂಕಾದ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಲಭ್ಯವಾಗಿವೆ. ವರದಿಗಳ ಪ್ರಕಾರ ಶ್ರೀಲಂಕಾದ ನವಗಮುವಾ ಪ್ರದೇಶದ ಪಲ್ಲೆಗಾಮ ಸುಮನ ಥೆರೋ ಎಂಬ ಬೌದ್ಧ ಸನ್ಯಾಸಿ ಇಬ್ಬರು ಮಹಿಳೆಯರೊಂದಿಗೆ ಅರೆನಗ್ನಾವಸ್ಥೆಯಲ್ಲಿ ಇದ್ದಾಗ ಗುಂಪೊಂದು ದಾಳಿ ನಡೆಸಿದೆ. ವರದಿಗಳು ಇಲ್ಲಿ , ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವರದಿಯ ಪ್ರಕಾರ, 08 ಜುಲೈ 2023ರಂದು ನವಗಾಮುವ, ಬೊಮಿರಿಯಾ, ರಸಪಾನದಲ್ಲಿ ಸಂಭವಿಸಿದ ಆಘಾತಕಾರಿ ಘಟನೆಯಲ್ಲಿ, ಪಲ್ಲೆಗಾಮ ಸುಮನ ಥೇರೋ ಮತ್ತು ವಸತಿ ಗೃಹದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ನಂತರ ನವಗಾಮುವಾ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.

ಯುವಕರ ಗುಂಪೊಂದು ಬಲವಂತವಾಗಿ ಮನೆಗೆ ನುಗ್ಗಿ ತಾಯಿ ಮತ್ತು ಮಗಳ ಮೇಲೆ ದೈಹಿಕ ಹಲ್ಲೆ ನಡೆಸಿ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಪಲ್ಲೆಗಾಮ ಸುಮನ ಥೇರೋ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಸಮುದಾಯದಲ್ಲಿ ಪ್ರಮುಖ ಸ್ಥಾನದಲ್ಲಿರುವ ಸುಮನಾ ಥೇರೋ ಅವರು ಶಾಮೀಲಾಗಿರುವುದರಿಂದ ದೂರು ಹೆಚ್ಚಿನ ಗಮನ ಸೆಳೆಯಿತು.

ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಆರೋಪಿಗಳು, ಸುಮನ ಥೇರೋ ಇಬ್ಬರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನೀಡಿದ್ದೇವೆ ಎಂದು ಹೇಳಿದ್ದಾರೆ. ಈ ಆಪಾದಿತ ಸನ್ನಿವೇಶದಿಂದ ಕೋಪಗೊಂಡ ಗುಂಪು ಸನ್ಯಾಸಿ ಮತ್ತು ಮಹಿಳೆಯರ ಮೇಲೆ ಹಲ್ಲೆ ನಡೆಸಿತು. ಈ ಘಟನೆಯನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡ ನಂತರ ವಿಡಿಯೋ ವೈರಲ್ ಆಗಿತ್ತು ಮತ್ತು ಸಾರ್ವಜನಿಕವಾಗಿ ಖಂಡನೆಗೆ ಒಳಗಾಗಿತ್ತು.

ವರದಿಗಳ ಪ್ರಕಾರ, ಗುರೂಜಿ ಎಂದು ಕರೆಯಲ್ಪಡುವ ನಿರ್ಮಲ್ ಸಿಂಗ್ ಜಿ ಅವರು 2007 ರಲ್ಲಿ ನಿಧನರಾಗಿದ್ದಾರೆ ಎಂಬ ವರದಿಗಳು ಲಭ್ಯವಾಗಿದೆ. ಇಂಡಿಯಾ ಟುಡೇ ಜೊತೆಗಿನ ಸಂವಾದದಲ್ಲಿ, ದೆಹಲಿಯಲ್ಲಿರುವ ನಿರ್ಮಲ್ ಸಿಂಗ್ ಜಿ ಅವರ ಆಶ್ರಮದ ಸದಸ್ಯರೊಬ್ಬರು ಮಾತನಾಡಿದ್ದು, ಗುರೂಜಿಯವರಿಗೂ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಶ್ರಮ ಮುಂದಾಗಿದೆ ಎಂದು ಉಲ್ಲೇಖಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಶ್ರೀಲಂಕಾದ ಬೌದ್ಧ ಸನ್ಯಾಸಿಗೆ ಸಂಬಂಧಿಸಿದ್ದು,  ವೈರಲ್ ವಿಡಿಯೋದಲ್ಲಿ ಭಾರತದ ಸ್ವಾಮೀಜಿ ಎಂದು ಹೇಳಲಾಗುತ್ತಿರುವ ಸನ್ಯಾಸಿ ನಿರ್ಮಲ್ ಸಿಂಗ್ 2007 ರಲ್ಲಿಯೇ ನಿಧನರಾಗಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...