Homeಫ್ಯಾಕ್ಟ್‌ಚೆಕ್FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ 'ಅಕ್ರಮ ರಾಷ್ಟ್ರ'ವೆಂದು ಘೋಷಿಸಿರುವುದು ನಿಜಾನಾ?

FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

- Advertisement -
- Advertisement -

“ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ ರಾಷ್ಟ್ರವೆಂದು ಘೋಷಿಸಿದೆ. ಅದನ್ನು ವಿಶ್ವದಾದ್ಯಂತ ಸಾರ್ವಭೌಮ ರಾಷ್ಟ್ರವೆಂದು ಗುರುತಿಸಬಾರದು ಎಂದು ನಿರ್ಧರಿಸಲಾಯಿತು. ಕೊನೆಗೂ ನ್ಯಾಯವೇ ಮೇಲುಗೈ ಸಾಧಿಸಿತು. ಅಲ್‌ ಹಮ್ದುಲಿಲ್ಲಾಹ್ ದಯವಿಟ್ಟು ಈ ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಧನ್ಯವಾದಗಳು” ಎಂಬ ಸಂದೇಶವೊಂದು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಸಂದೇಶದ ಜೊತೆಗೆ ಟಿಆರ್‌ಟಿ ವರ್ಲ್ಡ್ ಸುದ್ದಿ ಸಂಸ್ಥೆಯ ವಿಡಿಯೋ ಒಂದಿದ್ದು, ಅದರಲ್ಲಿ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ಕುರಿತು ಮಾತನಾಡಿರುವುದು ಇದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ನಾವು ಅದರ ಮೂಲ ವಿಡಿಯೋವನ್ನು ಹುಡುಕಿದ್ದೇವೆ. ಈ ವೇಳೆ ಜುಲೈ 19,2024ರಂದು ಟಿಆರ್‌ಟಿ ವರ್ಲ್ಡ್‌ ಸುದ್ದಿ ಸಂಸ್ಥೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಆಗಿರುವ ವಿಡಿಯೋ ದೊರೆತಿದೆ. ವಿಡಿಯೋದ ಶೀರ್ಷಿಕೆಯಲ್ಲೇ “Palestinian Foreign Minister Riyad al Maliki briefs media after ICJ ruling on Israel’s occupation (ಇಸ್ರೇಲ್ ಆಕ್ರಮಣದ ಬಗ್ಗೆ ಐಸಿಜೆ ತೀರ್ಪಿನ ನಂತರ ಪ್ಯಾಲೇಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು) ಎಂದಿದೆ.

ವಿಡಿಯೋದಲ್ಲಿ ರಿಯಾದ್ ಅಲ್ ಮಾಲಿಕಿಯವರು “ಅಂತಾರಾಷ್ಟ್ರೀಯ ನ್ಯಾಯಾಲಯ ಪ್ಯಾಲೆಸ್ತೀನ್‌ನಲ್ಲಿ(ಗಾಝಾದಲ್ಲಿ) ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಕಾನೂನುಬಾಹಿರ, ಅಂತಾರಾಷ್ಟ್ರೀಯ ಕಾನೂನುಗಳು ಹಾಗೂ ಮಾನವ ಹಕ್ಕುಗಳ ವಿರುದ್ದ ಎಂದಿದೆ. ಅಲ್ಲದೆ, ತಕ್ಷಣ ದಾಳಿ ನಿಲ್ಲಿಸುವಂತೆ ಸೂಚಿಸಿದೆ. ಆಕ್ರಮಿತ ಪ್ಯಾಲೆಸ್ತೀನ್ ಭೂ ಪ್ರದೇಶಗಳಲ್ಲಿ (ಪಶ್ಚಿಮ ದಂಡೆ, ಜೆರುಸಲೇಂ) ನಡೆಸುತ್ತಿರುವ ಕಾರ್ಯಚರಣೆಯನ್ನೂ ಅಕ್ರಮ ಎಂದಿದೆ. ಇದು ಪ್ಯಾಲೆಸ್ತೀನ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಸಿಕ್ಕ ಅಭೂತಪೂರ್ವ ಜಯ” ಎಂದು ಹೇಳಿರುವುದು ಇದೆ.

ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಯ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪು ಮತ್ತು ಅದಕ್ಕೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಪ್ರತಿಕ್ರಿಯಿಸಿರುವ ಕುರಿತು ಜುಲೈ 20, 2024ರಂದು palestinechronicle.com ವರದಿ ಪ್ರಕಟಿಸಿತ್ತು.

ಒಟ್ಟಿನಲ್ಲಿ, ಗಾಝಾ ಸೇರಿದಂತೆ ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ಜುಲೈ ತಿಂಗಳಲ್ಲಿ ತೀರ್ಪು ನೀಡಿತ್ತು. ಆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಅದರ ವಿಡಿಯೋವನ್ನು ಹಂಚಿಕೊಂಡು “ಅಂತಾರಾಷ್ಟ್ರೀಯ ನ್ಯಾಯಾಲಯ ಇಸ್ರೇಲ್ ಅನ್ನು ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿದೆ” ಎಂಬುವುದಾಗಿ ಸಂದೇಶ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ, ಕಾನೂನುಬಾಹಿರ ಎಂದಿದೆಯೇ ಹೊರತು, ಸಂಪೂರ್ಣ ಇಸ್ರೇಲ್ ಅನ್ನೇ ಅಕ್ರಮ ರಾಷ್ಟ್ರ ಎಂದಿಲ್ಲ.

ಇದನ್ನೂ ಓದಿ : FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...