Homeಫ್ಯಾಕ್ಟ್‌ಚೆಕ್FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ 'ಅಕ್ರಮ ರಾಷ್ಟ್ರ'ವೆಂದು ಘೋಷಿಸಿರುವುದು ನಿಜಾನಾ?

FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

- Advertisement -
- Advertisement -

“ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ ರಾಷ್ಟ್ರವೆಂದು ಘೋಷಿಸಿದೆ. ಅದನ್ನು ವಿಶ್ವದಾದ್ಯಂತ ಸಾರ್ವಭೌಮ ರಾಷ್ಟ್ರವೆಂದು ಗುರುತಿಸಬಾರದು ಎಂದು ನಿರ್ಧರಿಸಲಾಯಿತು. ಕೊನೆಗೂ ನ್ಯಾಯವೇ ಮೇಲುಗೈ ಸಾಧಿಸಿತು. ಅಲ್‌ ಹಮ್ದುಲಿಲ್ಲಾಹ್ ದಯವಿಟ್ಟು ಈ ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಧನ್ಯವಾದಗಳು” ಎಂಬ ಸಂದೇಶವೊಂದು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಸಂದೇಶದ ಜೊತೆಗೆ ಟಿಆರ್‌ಟಿ ವರ್ಲ್ಡ್ ಸುದ್ದಿ ಸಂಸ್ಥೆಯ ವಿಡಿಯೋ ಒಂದಿದ್ದು, ಅದರಲ್ಲಿ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ಕುರಿತು ಮಾತನಾಡಿರುವುದು ಇದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ನಾವು ಅದರ ಮೂಲ ವಿಡಿಯೋವನ್ನು ಹುಡುಕಿದ್ದೇವೆ. ಈ ವೇಳೆ ಜುಲೈ 19,2024ರಂದು ಟಿಆರ್‌ಟಿ ವರ್ಲ್ಡ್‌ ಸುದ್ದಿ ಸಂಸ್ಥೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಆಗಿರುವ ವಿಡಿಯೋ ದೊರೆತಿದೆ. ವಿಡಿಯೋದ ಶೀರ್ಷಿಕೆಯಲ್ಲೇ “Palestinian Foreign Minister Riyad al Maliki briefs media after ICJ ruling on Israel’s occupation (ಇಸ್ರೇಲ್ ಆಕ್ರಮಣದ ಬಗ್ಗೆ ಐಸಿಜೆ ತೀರ್ಪಿನ ನಂತರ ಪ್ಯಾಲೇಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು) ಎಂದಿದೆ.

ವಿಡಿಯೋದಲ್ಲಿ ರಿಯಾದ್ ಅಲ್ ಮಾಲಿಕಿಯವರು “ಅಂತಾರಾಷ್ಟ್ರೀಯ ನ್ಯಾಯಾಲಯ ಪ್ಯಾಲೆಸ್ತೀನ್‌ನಲ್ಲಿ(ಗಾಝಾದಲ್ಲಿ) ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಕಾನೂನುಬಾಹಿರ, ಅಂತಾರಾಷ್ಟ್ರೀಯ ಕಾನೂನುಗಳು ಹಾಗೂ ಮಾನವ ಹಕ್ಕುಗಳ ವಿರುದ್ದ ಎಂದಿದೆ. ಅಲ್ಲದೆ, ತಕ್ಷಣ ದಾಳಿ ನಿಲ್ಲಿಸುವಂತೆ ಸೂಚಿಸಿದೆ. ಆಕ್ರಮಿತ ಪ್ಯಾಲೆಸ್ತೀನ್ ಭೂ ಪ್ರದೇಶಗಳಲ್ಲಿ (ಪಶ್ಚಿಮ ದಂಡೆ, ಜೆರುಸಲೇಂ) ನಡೆಸುತ್ತಿರುವ ಕಾರ್ಯಚರಣೆಯನ್ನೂ ಅಕ್ರಮ ಎಂದಿದೆ. ಇದು ಪ್ಯಾಲೆಸ್ತೀನ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಸಿಕ್ಕ ಅಭೂತಪೂರ್ವ ಜಯ” ಎಂದು ಹೇಳಿರುವುದು ಇದೆ.

ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಯ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪು ಮತ್ತು ಅದಕ್ಕೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಪ್ರತಿಕ್ರಿಯಿಸಿರುವ ಕುರಿತು ಜುಲೈ 20, 2024ರಂದು palestinechronicle.com ವರದಿ ಪ್ರಕಟಿಸಿತ್ತು.

ಒಟ್ಟಿನಲ್ಲಿ, ಗಾಝಾ ಸೇರಿದಂತೆ ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ಜುಲೈ ತಿಂಗಳಲ್ಲಿ ತೀರ್ಪು ನೀಡಿತ್ತು. ಆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಅದರ ವಿಡಿಯೋವನ್ನು ಹಂಚಿಕೊಂಡು “ಅಂತಾರಾಷ್ಟ್ರೀಯ ನ್ಯಾಯಾಲಯ ಇಸ್ರೇಲ್ ಅನ್ನು ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿದೆ” ಎಂಬುವುದಾಗಿ ಸಂದೇಶ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ, ಕಾನೂನುಬಾಹಿರ ಎಂದಿದೆಯೇ ಹೊರತು, ಸಂಪೂರ್ಣ ಇಸ್ರೇಲ್ ಅನ್ನೇ ಅಕ್ರಮ ರಾಷ್ಟ್ರ ಎಂದಿಲ್ಲ.

ಇದನ್ನೂ ಓದಿ : FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....