Homeಫ್ಯಾಕ್ಟ್‌ಚೆಕ್FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ 'ಅಕ್ರಮ ರಾಷ್ಟ್ರ'ವೆಂದು ಘೋಷಿಸಿರುವುದು ನಿಜಾನಾ?

FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

- Advertisement -
- Advertisement -

“ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ ರಾಷ್ಟ್ರವೆಂದು ಘೋಷಿಸಿದೆ. ಅದನ್ನು ವಿಶ್ವದಾದ್ಯಂತ ಸಾರ್ವಭೌಮ ರಾಷ್ಟ್ರವೆಂದು ಗುರುತಿಸಬಾರದು ಎಂದು ನಿರ್ಧರಿಸಲಾಯಿತು. ಕೊನೆಗೂ ನ್ಯಾಯವೇ ಮೇಲುಗೈ ಸಾಧಿಸಿತು. ಅಲ್‌ ಹಮ್ದುಲಿಲ್ಲಾಹ್ ದಯವಿಟ್ಟು ಈ ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಧನ್ಯವಾದಗಳು” ಎಂಬ ಸಂದೇಶವೊಂದು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಸಂದೇಶದ ಜೊತೆಗೆ ಟಿಆರ್‌ಟಿ ವರ್ಲ್ಡ್ ಸುದ್ದಿ ಸಂಸ್ಥೆಯ ವಿಡಿಯೋ ಒಂದಿದ್ದು, ಅದರಲ್ಲಿ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ಕುರಿತು ಮಾತನಾಡಿರುವುದು ಇದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ನಾವು ಅದರ ಮೂಲ ವಿಡಿಯೋವನ್ನು ಹುಡುಕಿದ್ದೇವೆ. ಈ ವೇಳೆ ಜುಲೈ 19,2024ರಂದು ಟಿಆರ್‌ಟಿ ವರ್ಲ್ಡ್‌ ಸುದ್ದಿ ಸಂಸ್ಥೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಆಗಿರುವ ವಿಡಿಯೋ ದೊರೆತಿದೆ. ವಿಡಿಯೋದ ಶೀರ್ಷಿಕೆಯಲ್ಲೇ “Palestinian Foreign Minister Riyad al Maliki briefs media after ICJ ruling on Israel’s occupation (ಇಸ್ರೇಲ್ ಆಕ್ರಮಣದ ಬಗ್ಗೆ ಐಸಿಜೆ ತೀರ್ಪಿನ ನಂತರ ಪ್ಯಾಲೇಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು) ಎಂದಿದೆ.

ವಿಡಿಯೋದಲ್ಲಿ ರಿಯಾದ್ ಅಲ್ ಮಾಲಿಕಿಯವರು “ಅಂತಾರಾಷ್ಟ್ರೀಯ ನ್ಯಾಯಾಲಯ ಪ್ಯಾಲೆಸ್ತೀನ್‌ನಲ್ಲಿ(ಗಾಝಾದಲ್ಲಿ) ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಕಾನೂನುಬಾಹಿರ, ಅಂತಾರಾಷ್ಟ್ರೀಯ ಕಾನೂನುಗಳು ಹಾಗೂ ಮಾನವ ಹಕ್ಕುಗಳ ವಿರುದ್ದ ಎಂದಿದೆ. ಅಲ್ಲದೆ, ತಕ್ಷಣ ದಾಳಿ ನಿಲ್ಲಿಸುವಂತೆ ಸೂಚಿಸಿದೆ. ಆಕ್ರಮಿತ ಪ್ಯಾಲೆಸ್ತೀನ್ ಭೂ ಪ್ರದೇಶಗಳಲ್ಲಿ (ಪಶ್ಚಿಮ ದಂಡೆ, ಜೆರುಸಲೇಂ) ನಡೆಸುತ್ತಿರುವ ಕಾರ್ಯಚರಣೆಯನ್ನೂ ಅಕ್ರಮ ಎಂದಿದೆ. ಇದು ಪ್ಯಾಲೆಸ್ತೀನ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಸಿಕ್ಕ ಅಭೂತಪೂರ್ವ ಜಯ” ಎಂದು ಹೇಳಿರುವುದು ಇದೆ.

ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಯ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪು ಮತ್ತು ಅದಕ್ಕೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಪ್ರತಿಕ್ರಿಯಿಸಿರುವ ಕುರಿತು ಜುಲೈ 20, 2024ರಂದು palestinechronicle.com ವರದಿ ಪ್ರಕಟಿಸಿತ್ತು.

ಒಟ್ಟಿನಲ್ಲಿ, ಗಾಝಾ ಸೇರಿದಂತೆ ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ಜುಲೈ ತಿಂಗಳಲ್ಲಿ ತೀರ್ಪು ನೀಡಿತ್ತು. ಆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಅದರ ವಿಡಿಯೋವನ್ನು ಹಂಚಿಕೊಂಡು “ಅಂತಾರಾಷ್ಟ್ರೀಯ ನ್ಯಾಯಾಲಯ ಇಸ್ರೇಲ್ ಅನ್ನು ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿದೆ” ಎಂಬುವುದಾಗಿ ಸಂದೇಶ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ, ಕಾನೂನುಬಾಹಿರ ಎಂದಿದೆಯೇ ಹೊರತು, ಸಂಪೂರ್ಣ ಇಸ್ರೇಲ್ ಅನ್ನೇ ಅಕ್ರಮ ರಾಷ್ಟ್ರ ಎಂದಿಲ್ಲ.

ಇದನ್ನೂ ಓದಿ : FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....