Homeಫ್ಯಾಕ್ಟ್‌ಚೆಕ್FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

- Advertisement -
- Advertisement -

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಲ್ಡೀವ್ಸ್‌ಗೆ ಮೂರು ದಿನಗಳ ಭೇಟಿಗೆ ತೆರಳಿದ್ದರು. ಭಾರತ ಮತ್ತು ಮಾಲ್ಡಿವ್ಸ್ ನಡುವೆ ರಾಜತಾಂತ್ರಿಕ ಮನಸ್ತಾಪ ಉಂಟಾದ ಬಳಿಕ ಜೈಶಂಕರ್ ಇದೇ ಮೊದಲ ಬಾರಿಯಾಗಿದೆ ಅಲ್ಲಿಗೆ ಭೇಟಿ ನೀಡಿರುವುದು.

ಮೊಹಮ್ಮದ್ ಮುಯಿಝು ಅವರು ಮಾಲ್ಡೀವ್ಸ್ ಅಧ್ಯಕ್ಷರಾದ ಬಳಿಕ, ಭಾರತದೊಂದಿಗಿನ ಸಂಬಂಧ ಬಹುತೇಕ ಕಡಿದುಕೊಂಡಿದ್ದರು. ಅವರು ಚೀನಾ ಪರ ನಿಲುವು ಹೊಂದಿದ್ದರಿಂದ ಮಾಲ್ಡೀವ್ಸ್‌ನಲ್ಲಿದ್ದ ಭಾರತೀಯ ಸೇನೆಯನ್ನೂ ವಾಪಸ್ ಕಳುಹಿಸಿದ್ದರು. ಇತ್ತೀಚೆಗೆ ಮುಯಿಝು ಮತ್ತು ಭಾರತದ ನಡುವಿನ ಸಂಬಂಧ ಮತ್ತೆ ತಳಹದಿಗೆ ಬಂದಿದೆ. ಈ ಬೆಳವಣಿಗೆಯ ಬಳಿಕ ಮೊದಲ ಬಾರಿ ಭಾರತದ ವಿದೇಶಾಂಗ ಸಚಿವ ಮಾಲ್ಡೀವ್ಸ್‌ಗೆ ತೆರಳಿದ್ದು ಮಹತ್ವವೆನಿಸಿದೆ.

ತನ್ನ ಮಾಲ್ಡೀವ್ಸ್‌ ಭೇಟಿಯ ವೇಳೆ ಸಚಿವ ಜೈಶಂಕರ್ ಅವರು ಎರಡು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಉತ್ತಮಗೊಳಿಸುವ ನಿಟ್ಟಿನಲ್ಲಿ, ಅಲ್ಲಿನ ಅಧ್ಯಕ್ಷ ಮುಯಿಝು ಜೊತೆ ಮಾತುಕತೆ ನಡೆಸಿದ್ದಾರೆ. ದ್ವೀಪರಾಷ್ಟ್ರ ಮಾಲ್ಡೀವ್ಸ್‌ನ ಅಭಿವೃದ್ದಿಯಲ್ಲಿ ಭಾರತ ಕೈ ಜೋಡಿಸುವ ಯೋಜನೆಗಳಿಗೆ ಚಾಲನೆಯನ್ನೂ ನೀಡಿದ್ದಾರೆ.

ಜೈಶಂಕರ್ ಅವರು ಮಾಲ್ಡೀವ್ಸ್‌ಗೆ ಭೇಟಿ ನೀಡಿ ವಾಪಸ್ ಬಂದ ಬೆನ್ನಲ್ಲೇ, ಭಾರತದ ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ” ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಅಥವಾ ಭಾರತ ದ್ವೀಪಗಳನ್ನು ಖರೀದಿಸಿದೆ” ಎಂದು ಸುದ್ದಿ ಹಬ್ಬಿಸಿದ್ದಾರೆ.

ಎಡಪಂಥೀಯ ಸಾಮಾಜಿಕ ಮಾಧ್ಯಮ ಖಾತೆ ಪೋಸ್ಟ್‌ ಕಾರ್ಡ್ ಕನ್ನಡ “ಚೀನಾ ವಿರುದ್ದ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಗೆಲುವು. 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್” ಎಂದು ಪೋಸ್ಟರ್ ಹಂಚಿಕೊಂಡಿದೆ.

ರಾಮ್‌ ಜಿ ರಾವತ್ (@RaamJi_Rajawat) ಎಂಬ ಎಕ್ಸ್ ಬಳಕೆದಾರ “ಚೀನಾಗೆ ಚೆಕ್‌ಮೇಟ್..ಭಾರತವು ಮಾಲ್ಡೀವ್ಸ್‌ನಿಂದ 28 ದ್ವೀಪಗಳನ್ನು ಖರೀದಿಸಿದೆ. ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಹಸ್ತಾಂತರಿಸುತ್ತದೆ. ಅಧ್ಯಕ್ಷ ಮುಯಿಝು ಸ್ವತಃ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಲಕ್ಷದ್ವೀಪ ಕಡಲತೀರದಲ್ಲಿ 50 ಮೀಟರ್ ನಡಿಗೆಯ ಮ್ಯಾಜಿಕ್ ಮತ್ತು ಒಂದು ಟ್ವೀಟ್. ಉಳಿದ ಕೆಲಸವನ್ನು ವಿದೇಶಾಂಗ ವ್ಯವಹಾರಗಳ (ಎಂಇಎ) ತಂಡ ಮಾಡಿದೆ. ಮೌನವಾಗಿ ಕೆಲಸ ಮಾಡಿ ಮತ್ತು ನಿಮ್ಮ ಕೆಲಸ ಜೋರಾಗಿ ಸದ್ದು ಮಾಡಲು ಬಿಡಿ” ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಲಕ್ಷದ್ವೀಪ ಕಡಲ ತೀರದಲ್ಲಿ ಪ್ರಧಾನಿ ಮೋದಿ ನಡೆದಿದ್ದೇ ತಡ, ಮಾಲ್ಡೀವ್ಸ್ ತನ್ನ ದ್ವೀಪಗಳನ್ನೇ ಬಿಟ್ಟು ಕೊಟ್ಟಿದೆ ಎಂದು ಪ್ರಧಾನಿಗೆ ಕ್ರೆಡಿಟ್ ಕೊಟ್ಟಿದ್ದಾರೆ.

ಸಂದೀಪ್ ರಜಪೂತ್ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಕೂಡ ಮೇಲಿನಂತೆಯೇ ಬರೆದುಕೊಂಡಿದ್ದಾರೆ.

ಹಾಗಾದರೆ, ಈ ಸುದ್ದಿ ನಿಜಾನಾ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರ ಪೋಸ್ಟ್‌ಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ಪೋಸ್ಟ್‌ಗಳು ತಪ್ಪು ಮಾಹಿತಿಯನ್ನು ಒಳಗೊಂಡಿರುವುದು ಗೊತ್ತಾಗಿದೆ.

ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ಕೇವಲ ಅಭಿವೃದ್ದಿ ಕಾರ್ಯಗಳಿಗೆ ಮಾತ್ರವಾಗಿದೆ. ಅಲ್ಲದೆ, ಶಾಶ್ವತವಾಗಿ ಭಾರತಕ್ಕೇ ಬಿಟ್ಟು ಕೊಟ್ಟಿಲ್ಲ. ದ್ವೀಪಗಳಲ್ಲಿ
ನೀರು, ನೈರ್ಮಲ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿಯನ್ನು ಭಾರತ ವಹಿಸಿಕೊಂಡಿದೆ. ಈ ಕುರಿತ ಯೋಜನೆಗೆ ಸಚಿವ ಜೈಶಂಕರ್ ಭೇಟಿಯ ವೇಳೆ ಚಾಲನೆ ನೀಡಲಾಗಿದೆ.

ಆಗಸ್ಟ್ 10, 2024 ರಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿ ಇಂಡಿಯಾ ಟುಡೇ ಈ ಕುರಿತು ವರದಿಯೊಂದನ್ನು ಪ್ರಕಟಿಸಿತ್ತು. ವರದಿಯಲ್ಲಿ “ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಕಲ್ಪಿಸುವ ಸುಮಾರು 923 ಕೋಟಿ ರೂಪಾಯಿ (110 ಮಿಲಿಯನ್ ಡಾಲರ್ ) ಮೊತ್ತದ ಬೃಹತ್ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಯೋಜನೆ ಮಾಲ್ಡೀವ್ಸ್‌ನ ಶೇಖಡ 7ರಷ್ಟು ಜನಸಂಖ್ಯೆಯನ್ನು ಒಳಗೊಳ್ಳುತ್ತದೆ” ಎಂದು ಹೇಳಲಾಗಿದೆ.

ಸಚಿವ ಜೈಶಂಕರ್ ಅವರ ಮಾಲ್ಡೀವ್ಸ್ ಭೇಟಿಯ ಕುರಿತು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಈ ವಿಚಾರವನ್ನು ಉಲ್ಲೇಖಿಸಲಾಗಿದೆ.

“ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಕಚೇರಿಯಲ್ಲಿ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯ ಕಲ್ಪಿಸುವ ಭಾರತದ ಲೈನ್ ಆಫ್ ಕ್ರೆಡಿಟ್ (ಎಲ್‌ಒಸಿ) ನೆರವಿನ ಯೋಜನೆಯನ್ನು ಭಾರತ ಮತ್ತು ಮಾಲ್ಡೀವ್ಸ್‌ ವಿದೇಶಾಂಗ ಸಚಿವರು ಉದ್ಘಾಟಿಸಿದರು” ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತದ ನೆರವಿನೊಂದಿಗೆ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಭ್ಯಗಳನ್ನು ಕಲ್ಪಿಸುವ ಯೋಜನೆಯ ವರ್ಚುವಲ್ ಉದ್ಘಾಟನಾ ಸಮಾರಂಭವನ್ನು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಆಗಸ್ಟ್ 10, 2024 ರಂದು ನೇರ ಪ್ರಸಾರ ಮಾಡಲಾಗಿತ್ತು. ಕಾರ್ಯಕ್ರಮದ ಡಿಜಿಟಲ್ ಬ್ಯಾನರ್‌ನಲ್ಲಿ “ಎಕ್ಸಿಮ್ ಬ್ಯಾಂಕ್ ಆಫ್ ಇಂಡಿಯಾದ ಲೈನ್ ಆಫ್ ಕ್ರೆಡಿಟ್ ನೆರವಿನ ಮೂಲಕ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯ ಕಲ್ಪಿಸುವ ಯೋಜನೆಯ ಅಧಿಕೃತ ಉದ್ಘಾಟನೆ” ಎಂದು ಬರೆದಿರುವುದನ್ನು ನೋಡಬಹುದು.

ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಆಗಸ್ಟ್ 12, 2024ರಂದು ತನ್ನ ಮಾಲ್ಡೀವ್ಸ್ ಭೇಟಿಯ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲೂ ಈ ಬ್ಯಾನರ್ ಕಾಣಬಹುದು.

ಆಗಸ್ಟ್ 10, 2024ರಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಸಚಿವ ಜೈಶಂಕರ್ ಅವರ ಭೇಟಿಯ ಕುರಿತು ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲೂ 28 ದ್ವೀಪಗಳಲ್ಲಿ ಭಾರತದ ನೆರವಿನ ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ಬಗ್ಗೆ ಉಲ್ಲೇಖಿಸಿದ್ದಾರೆ.

ಒಟ್ಟಿನಲ್ಲಿ, ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ಭಾರತ ನೆರವಿನೊಂದಿಗೆ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಯೋಜನೆಗೆ ಚಾಲನೆ ನೀಡಿರುವುದನ್ನು, ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಎಂದು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬೃಹತ್ ರ್‍ಯಾಲಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...