Homeಫ್ಯಾಕ್ಟ್‌ಚೆಕ್FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

- Advertisement -
- Advertisement -

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಲ್ಡೀವ್ಸ್‌ಗೆ ಮೂರು ದಿನಗಳ ಭೇಟಿಗೆ ತೆರಳಿದ್ದರು. ಭಾರತ ಮತ್ತು ಮಾಲ್ಡಿವ್ಸ್ ನಡುವೆ ರಾಜತಾಂತ್ರಿಕ ಮನಸ್ತಾಪ ಉಂಟಾದ ಬಳಿಕ ಜೈಶಂಕರ್ ಇದೇ ಮೊದಲ ಬಾರಿಯಾಗಿದೆ ಅಲ್ಲಿಗೆ ಭೇಟಿ ನೀಡಿರುವುದು.

ಮೊಹಮ್ಮದ್ ಮುಯಿಝು ಅವರು ಮಾಲ್ಡೀವ್ಸ್ ಅಧ್ಯಕ್ಷರಾದ ಬಳಿಕ, ಭಾರತದೊಂದಿಗಿನ ಸಂಬಂಧ ಬಹುತೇಕ ಕಡಿದುಕೊಂಡಿದ್ದರು. ಅವರು ಚೀನಾ ಪರ ನಿಲುವು ಹೊಂದಿದ್ದರಿಂದ ಮಾಲ್ಡೀವ್ಸ್‌ನಲ್ಲಿದ್ದ ಭಾರತೀಯ ಸೇನೆಯನ್ನೂ ವಾಪಸ್ ಕಳುಹಿಸಿದ್ದರು. ಇತ್ತೀಚೆಗೆ ಮುಯಿಝು ಮತ್ತು ಭಾರತದ ನಡುವಿನ ಸಂಬಂಧ ಮತ್ತೆ ತಳಹದಿಗೆ ಬಂದಿದೆ. ಈ ಬೆಳವಣಿಗೆಯ ಬಳಿಕ ಮೊದಲ ಬಾರಿ ಭಾರತದ ವಿದೇಶಾಂಗ ಸಚಿವ ಮಾಲ್ಡೀವ್ಸ್‌ಗೆ ತೆರಳಿದ್ದು ಮಹತ್ವವೆನಿಸಿದೆ.

ತನ್ನ ಮಾಲ್ಡೀವ್ಸ್‌ ಭೇಟಿಯ ವೇಳೆ ಸಚಿವ ಜೈಶಂಕರ್ ಅವರು ಎರಡು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಉತ್ತಮಗೊಳಿಸುವ ನಿಟ್ಟಿನಲ್ಲಿ, ಅಲ್ಲಿನ ಅಧ್ಯಕ್ಷ ಮುಯಿಝು ಜೊತೆ ಮಾತುಕತೆ ನಡೆಸಿದ್ದಾರೆ. ದ್ವೀಪರಾಷ್ಟ್ರ ಮಾಲ್ಡೀವ್ಸ್‌ನ ಅಭಿವೃದ್ದಿಯಲ್ಲಿ ಭಾರತ ಕೈ ಜೋಡಿಸುವ ಯೋಜನೆಗಳಿಗೆ ಚಾಲನೆಯನ್ನೂ ನೀಡಿದ್ದಾರೆ.

ಜೈಶಂಕರ್ ಅವರು ಮಾಲ್ಡೀವ್ಸ್‌ಗೆ ಭೇಟಿ ನೀಡಿ ವಾಪಸ್ ಬಂದ ಬೆನ್ನಲ್ಲೇ, ಭಾರತದ ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ” ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಅಥವಾ ಭಾರತ ದ್ವೀಪಗಳನ್ನು ಖರೀದಿಸಿದೆ” ಎಂದು ಸುದ್ದಿ ಹಬ್ಬಿಸಿದ್ದಾರೆ.

ಎಡಪಂಥೀಯ ಸಾಮಾಜಿಕ ಮಾಧ್ಯಮ ಖಾತೆ ಪೋಸ್ಟ್‌ ಕಾರ್ಡ್ ಕನ್ನಡ “ಚೀನಾ ವಿರುದ್ದ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಗೆಲುವು. 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್” ಎಂದು ಪೋಸ್ಟರ್ ಹಂಚಿಕೊಂಡಿದೆ.

ರಾಮ್‌ ಜಿ ರಾವತ್ (@RaamJi_Rajawat) ಎಂಬ ಎಕ್ಸ್ ಬಳಕೆದಾರ “ಚೀನಾಗೆ ಚೆಕ್‌ಮೇಟ್..ಭಾರತವು ಮಾಲ್ಡೀವ್ಸ್‌ನಿಂದ 28 ದ್ವೀಪಗಳನ್ನು ಖರೀದಿಸಿದೆ. ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಹಸ್ತಾಂತರಿಸುತ್ತದೆ. ಅಧ್ಯಕ್ಷ ಮುಯಿಝು ಸ್ವತಃ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಲಕ್ಷದ್ವೀಪ ಕಡಲತೀರದಲ್ಲಿ 50 ಮೀಟರ್ ನಡಿಗೆಯ ಮ್ಯಾಜಿಕ್ ಮತ್ತು ಒಂದು ಟ್ವೀಟ್. ಉಳಿದ ಕೆಲಸವನ್ನು ವಿದೇಶಾಂಗ ವ್ಯವಹಾರಗಳ (ಎಂಇಎ) ತಂಡ ಮಾಡಿದೆ. ಮೌನವಾಗಿ ಕೆಲಸ ಮಾಡಿ ಮತ್ತು ನಿಮ್ಮ ಕೆಲಸ ಜೋರಾಗಿ ಸದ್ದು ಮಾಡಲು ಬಿಡಿ” ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಲಕ್ಷದ್ವೀಪ ಕಡಲ ತೀರದಲ್ಲಿ ಪ್ರಧಾನಿ ಮೋದಿ ನಡೆದಿದ್ದೇ ತಡ, ಮಾಲ್ಡೀವ್ಸ್ ತನ್ನ ದ್ವೀಪಗಳನ್ನೇ ಬಿಟ್ಟು ಕೊಟ್ಟಿದೆ ಎಂದು ಪ್ರಧಾನಿಗೆ ಕ್ರೆಡಿಟ್ ಕೊಟ್ಟಿದ್ದಾರೆ.

ಸಂದೀಪ್ ರಜಪೂತ್ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಕೂಡ ಮೇಲಿನಂತೆಯೇ ಬರೆದುಕೊಂಡಿದ್ದಾರೆ.

ಹಾಗಾದರೆ, ಈ ಸುದ್ದಿ ನಿಜಾನಾ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರ ಪೋಸ್ಟ್‌ಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ಪೋಸ್ಟ್‌ಗಳು ತಪ್ಪು ಮಾಹಿತಿಯನ್ನು ಒಳಗೊಂಡಿರುವುದು ಗೊತ್ತಾಗಿದೆ.

ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ಕೇವಲ ಅಭಿವೃದ್ದಿ ಕಾರ್ಯಗಳಿಗೆ ಮಾತ್ರವಾಗಿದೆ. ಅಲ್ಲದೆ, ಶಾಶ್ವತವಾಗಿ ಭಾರತಕ್ಕೇ ಬಿಟ್ಟು ಕೊಟ್ಟಿಲ್ಲ. ದ್ವೀಪಗಳಲ್ಲಿ
ನೀರು, ನೈರ್ಮಲ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿಯನ್ನು ಭಾರತ ವಹಿಸಿಕೊಂಡಿದೆ. ಈ ಕುರಿತ ಯೋಜನೆಗೆ ಸಚಿವ ಜೈಶಂಕರ್ ಭೇಟಿಯ ವೇಳೆ ಚಾಲನೆ ನೀಡಲಾಗಿದೆ.

ಆಗಸ್ಟ್ 10, 2024 ರಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿ ಇಂಡಿಯಾ ಟುಡೇ ಈ ಕುರಿತು ವರದಿಯೊಂದನ್ನು ಪ್ರಕಟಿಸಿತ್ತು. ವರದಿಯಲ್ಲಿ “ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಕಲ್ಪಿಸುವ ಸುಮಾರು 923 ಕೋಟಿ ರೂಪಾಯಿ (110 ಮಿಲಿಯನ್ ಡಾಲರ್ ) ಮೊತ್ತದ ಬೃಹತ್ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಯೋಜನೆ ಮಾಲ್ಡೀವ್ಸ್‌ನ ಶೇಖಡ 7ರಷ್ಟು ಜನಸಂಖ್ಯೆಯನ್ನು ಒಳಗೊಳ್ಳುತ್ತದೆ” ಎಂದು ಹೇಳಲಾಗಿದೆ.

ಸಚಿವ ಜೈಶಂಕರ್ ಅವರ ಮಾಲ್ಡೀವ್ಸ್ ಭೇಟಿಯ ಕುರಿತು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಈ ವಿಚಾರವನ್ನು ಉಲ್ಲೇಖಿಸಲಾಗಿದೆ.

“ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಕಚೇರಿಯಲ್ಲಿ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯ ಕಲ್ಪಿಸುವ ಭಾರತದ ಲೈನ್ ಆಫ್ ಕ್ರೆಡಿಟ್ (ಎಲ್‌ಒಸಿ) ನೆರವಿನ ಯೋಜನೆಯನ್ನು ಭಾರತ ಮತ್ತು ಮಾಲ್ಡೀವ್ಸ್‌ ವಿದೇಶಾಂಗ ಸಚಿವರು ಉದ್ಘಾಟಿಸಿದರು” ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತದ ನೆರವಿನೊಂದಿಗೆ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಭ್ಯಗಳನ್ನು ಕಲ್ಪಿಸುವ ಯೋಜನೆಯ ವರ್ಚುವಲ್ ಉದ್ಘಾಟನಾ ಸಮಾರಂಭವನ್ನು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಆಗಸ್ಟ್ 10, 2024 ರಂದು ನೇರ ಪ್ರಸಾರ ಮಾಡಲಾಗಿತ್ತು. ಕಾರ್ಯಕ್ರಮದ ಡಿಜಿಟಲ್ ಬ್ಯಾನರ್‌ನಲ್ಲಿ “ಎಕ್ಸಿಮ್ ಬ್ಯಾಂಕ್ ಆಫ್ ಇಂಡಿಯಾದ ಲೈನ್ ಆಫ್ ಕ್ರೆಡಿಟ್ ನೆರವಿನ ಮೂಲಕ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯ ಕಲ್ಪಿಸುವ ಯೋಜನೆಯ ಅಧಿಕೃತ ಉದ್ಘಾಟನೆ” ಎಂದು ಬರೆದಿರುವುದನ್ನು ನೋಡಬಹುದು.

ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಆಗಸ್ಟ್ 12, 2024ರಂದು ತನ್ನ ಮಾಲ್ಡೀವ್ಸ್ ಭೇಟಿಯ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲೂ ಈ ಬ್ಯಾನರ್ ಕಾಣಬಹುದು.

ಆಗಸ್ಟ್ 10, 2024ರಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಸಚಿವ ಜೈಶಂಕರ್ ಅವರ ಭೇಟಿಯ ಕುರಿತು ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲೂ 28 ದ್ವೀಪಗಳಲ್ಲಿ ಭಾರತದ ನೆರವಿನ ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ಬಗ್ಗೆ ಉಲ್ಲೇಖಿಸಿದ್ದಾರೆ.

ಒಟ್ಟಿನಲ್ಲಿ, ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ಭಾರತ ನೆರವಿನೊಂದಿಗೆ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಯೋಜನೆಗೆ ಚಾಲನೆ ನೀಡಿರುವುದನ್ನು, ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಎಂದು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬೃಹತ್ ರ್‍ಯಾಲಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...