Homeಫ್ಯಾಕ್ಟ್‌ಚೆಕ್Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಂಸದರು ಸಂಸತ್ ಭವನದಲ್ಲೇ ಥಳಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಮುಯಿಝು ಅವರ ಭಾರತ ವಿರೋಧಿ ನಿಲುವಿನಿಂದ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿರುವ ಮಾಲ್ಡೀವ್ಸ್‌ನ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಈ ಕಾರಣಕ್ಕೆ ಕೋಪಗೊಂಡ ಸಂಸದರು ಮುಯಿಝು ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಸುದ್ದಿ ಹಬ್ಬಿದೆ.

 

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್‌ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಹುಡುಕಿದ್ದೇವೆ. ಈ ವೇಳೆ, ಜನವರಿ 28,2024ರಂದು ಇಂಡಿಯನ್ ಎಕ್ಸ್‌ಪ್ರೆಸ್‌ ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

“Maldives parliament proceedings halted as MPs fight each other” ಸಂಸದರ ನಡುವೆ ಜಗಳ ಏರ್ಪಟ್ಟ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ನ ಕಲಾಪ ಸ್ಥಗಿತಗೊಂಡಿದೆ” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ “ಮಾಲ್ಡೀವಿಯನ್ ಡೆಮಾಕ್ರಾಟಿಕ್ ಪಾರ್ಟಿ (ಎಂಡಿಪಿ) ಸಂಸದ ಇಶಾ ಮತ್ತು ಆಡಳಿತ ಪಕ್ಷ ಪೀಪಲ್ಸ್‌ ನ್ಯಾಷನಲ್ ಕಾಂಗ್ರೆಸ್‌(ಪಿಎನ್‌ಸಿ) ನ ಸಂಸದರಾದ ಅಬ್ದುಲ್ಲಾ ಶಹೀಮ್, ಅಬ್ದುಲ್ ಹಕೀಂ ನಡುವಿನ ಜಗಳದ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ ಕಲಾಪ ಸ್ಥಗಿತಗೊಂಡಿದೆ” ಎಂದು ತಿಳಿಸಿದೆ. ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಿದ್ದಾರೆ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖಸಿಲ್ಲ.

ವರದಿ ಲಿಂಕ್ ಇಲ್ಲಿದೆ.

ಜನವರಿ 28ರಂದು ಎನ್‌ಡಿ ಟಿವಿ ಕೂಡ ತನ್ನ ವೆಬ್‌ಸೈಟ್‌ನಲ್ಲಿ ಈ ಸುದ್ದಿ ಪ್ರಕಟಿಸಿದ್ದು, “ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಾಯಕರು ಹೊಡೆದಾಡಿಕೊಂಡ ಬಳಿಕ ಇಂದು ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಕಲಾಪ ಸ್ಥಗಿತಗೊಂಡಿದೆ. ಚೀನಾ ಪರ ಅಧ್ಯಕ್ಷ ಮೊಹಮದ್ ಮುಯಿಝು ಅವರ ಹೊಸ ಸಚಿವ ಸಂಪುಟವನ್ನು ಅನುಮೋದಿಸುವ ಬಗ್ಗೆ ಭಿನ್ನಾಭಿಪ್ರಾಯಗಳ ಉಂಟಾಗಿ ಜಗಳ ನಡೆದಿದೆ ಎಂದು ವರದಿಗಳು ತಿಳಿಸಿವೆ. ಮುಯಿಝು ಅವರ “ಭಾರತ ವಿರೋಧಿ ನೀತಿಗಳ” ಬಗ್ಗೆ ಅನೇಕ ನಾಯಕರು ಕೋಪಗೊಂಡಿದ್ದರು. ಮಾಲ್ಡೀವ್ಸ್‌ನಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಬಗ್ಗೆ ವಿರೋಧ ಪಕ್ಷವು ಚಕಾರವೆತ್ತಿದೆ. ಭಾರತವನ್ನು ಮಾಲ್ಡೀವ್ಸ್‌ನ ಅಭಿವೃದ್ಧಿಯ ದೊಡ್ಡ ಪಾಲುದಾರ ಎಂದು ಅದು ಪರಿಗಣಿಸಿದೆ” ಎಂದು ವರದಿ ತಿಳಿಸಿದೆ. ಅಧ್ಯಕ್ಷ ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಲಾಗಿದೆ ಎಂದು ಎಲ್ಲೂ ಹೇಳಿಲ್ಲ.

ವರದಿ ಲಿಂಕ್ ಇಲ್ಲಿದೆ

ಮಾಲ್ಡೀವ್ಸ್‌ ಸಂಸದ ಇಬ್ರಾಹಿಂ ಶರೀಫ್ ಕೂಡ ಜನವರಿ 28ರಂದು ಈ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಗಲಾಟೆಯ ನಂತರ ಸಂಸದ ಶಹೀಮ್‌ ಅವರು ಗಾಯಗೊಂಡಿರುವುದನ್ನು ಸ್ಪಷ್ಟವಾಗಿ ನೋಡಬಹುದು.

ಏಜೆನ್ಸ್ ಫ್ರಾನ್ಸ್‌ ಪ್ರೆಸ್‌ (ಎಎಫ್‌ಪಿ) ಅನ್ನು ಉಲ್ಲೇಖಿಸಿ barrons.com ಜನವರಿ 29ರಂದು “Maldives Parliament Rejects Three Cabinet Members After Brawl” ಎಂಬ ಶೀರ್ಷಿಕೆಯಲ್ಲಿ ಈ ಕುರಿತು ಸುದ್ದಿ ಪ್ರಕಟಿಸಿದ್ದು, ಮಾಲ್ಡೀವ್ಸ್ ಸಂಸತ್‌ನಲ್ಲಿ ಮೂವರು ಸಚಿವರನ್ನು ನೇಮಿಸುವುದರ ವಿರುದ್ದ ಸಂಸದರು ಮತ ಚಲಾಯಿಸಿದ್ದಾರೆ. ಅದಕ್ಕೂ ಮುನ್ನ ನಡೆದ ಸಂಸದರ ನಡುವಿನ ಗಲಾಟೆಯಲ್ಲಿ ಒಬ್ಬರು ಸಂಸದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಇಲ್ಲೂ ಅಧ್ಯಕ್ಷ ಮುಯಿಝು ಅವರಿಗೆ ಥಳಿಸಿದ ಬಗ್ಗೆ ಉಲ್ಲೇಖಿಸಿಲ್ಲ.

ಸುದ್ದಿ ಲಿಂಕ್

ವಿವಿಧ ಮೂಲಗಳನ್ನು ಪರಿಶೀಲಿಸಿದಾಗ, ವೈರಲ್‌ ಆಗುತ್ತಿರುವ ವಿಡಿಯೋ ಜನವರಿ 28ರಂದು ಮಾಲ್ಡೀವ್ಸ್‌ ಸಂಸತ್‌ನಲ್ಲಿ ಸಂಸದರ ನಡುವೆ ನಡೆದ ಗಲಾಟೆಯದ್ದು, ಅಲ್ಲದೆ ಭಾರತ ವಿರೋಧಿ ನಿಲುವು ಖಂಡಿಸಿ ಸಂಸದರು ಅಧ್ಯಕ್ಷ ಮುಝಿಝು ಅವರಿಗೆ ಥಳಿಸಿರುವುದು ಅಲ್ಲ ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ಆಸ್ತಿ ಜಗಳದ ವಿಡಿಯೋ ಹಿಂದೂಗಳ ಮೇಲೆ ಮುಸ್ಲಿಮರ ದಾಳಿಯೆಂದು ತಪ್ಪಾಗಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...