Homeಫ್ಯಾಕ್ಟ್‌ಚೆಕ್Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಂಸದರು ಸಂಸತ್ ಭವನದಲ್ಲೇ ಥಳಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಮುಯಿಝು ಅವರ ಭಾರತ ವಿರೋಧಿ ನಿಲುವಿನಿಂದ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿರುವ ಮಾಲ್ಡೀವ್ಸ್‌ನ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಈ ಕಾರಣಕ್ಕೆ ಕೋಪಗೊಂಡ ಸಂಸದರು ಮುಯಿಝು ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಸುದ್ದಿ ಹಬ್ಬಿದೆ.

 

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್‌ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಹುಡುಕಿದ್ದೇವೆ. ಈ ವೇಳೆ, ಜನವರಿ 28,2024ರಂದು ಇಂಡಿಯನ್ ಎಕ್ಸ್‌ಪ್ರೆಸ್‌ ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

“Maldives parliament proceedings halted as MPs fight each other” ಸಂಸದರ ನಡುವೆ ಜಗಳ ಏರ್ಪಟ್ಟ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ನ ಕಲಾಪ ಸ್ಥಗಿತಗೊಂಡಿದೆ” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ “ಮಾಲ್ಡೀವಿಯನ್ ಡೆಮಾಕ್ರಾಟಿಕ್ ಪಾರ್ಟಿ (ಎಂಡಿಪಿ) ಸಂಸದ ಇಶಾ ಮತ್ತು ಆಡಳಿತ ಪಕ್ಷ ಪೀಪಲ್ಸ್‌ ನ್ಯಾಷನಲ್ ಕಾಂಗ್ರೆಸ್‌(ಪಿಎನ್‌ಸಿ) ನ ಸಂಸದರಾದ ಅಬ್ದುಲ್ಲಾ ಶಹೀಮ್, ಅಬ್ದುಲ್ ಹಕೀಂ ನಡುವಿನ ಜಗಳದ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ ಕಲಾಪ ಸ್ಥಗಿತಗೊಂಡಿದೆ” ಎಂದು ತಿಳಿಸಿದೆ. ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಿದ್ದಾರೆ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖಸಿಲ್ಲ.

ವರದಿ ಲಿಂಕ್ ಇಲ್ಲಿದೆ.

ಜನವರಿ 28ರಂದು ಎನ್‌ಡಿ ಟಿವಿ ಕೂಡ ತನ್ನ ವೆಬ್‌ಸೈಟ್‌ನಲ್ಲಿ ಈ ಸುದ್ದಿ ಪ್ರಕಟಿಸಿದ್ದು, “ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಾಯಕರು ಹೊಡೆದಾಡಿಕೊಂಡ ಬಳಿಕ ಇಂದು ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಕಲಾಪ ಸ್ಥಗಿತಗೊಂಡಿದೆ. ಚೀನಾ ಪರ ಅಧ್ಯಕ್ಷ ಮೊಹಮದ್ ಮುಯಿಝು ಅವರ ಹೊಸ ಸಚಿವ ಸಂಪುಟವನ್ನು ಅನುಮೋದಿಸುವ ಬಗ್ಗೆ ಭಿನ್ನಾಭಿಪ್ರಾಯಗಳ ಉಂಟಾಗಿ ಜಗಳ ನಡೆದಿದೆ ಎಂದು ವರದಿಗಳು ತಿಳಿಸಿವೆ. ಮುಯಿಝು ಅವರ “ಭಾರತ ವಿರೋಧಿ ನೀತಿಗಳ” ಬಗ್ಗೆ ಅನೇಕ ನಾಯಕರು ಕೋಪಗೊಂಡಿದ್ದರು. ಮಾಲ್ಡೀವ್ಸ್‌ನಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಬಗ್ಗೆ ವಿರೋಧ ಪಕ್ಷವು ಚಕಾರವೆತ್ತಿದೆ. ಭಾರತವನ್ನು ಮಾಲ್ಡೀವ್ಸ್‌ನ ಅಭಿವೃದ್ಧಿಯ ದೊಡ್ಡ ಪಾಲುದಾರ ಎಂದು ಅದು ಪರಿಗಣಿಸಿದೆ” ಎಂದು ವರದಿ ತಿಳಿಸಿದೆ. ಅಧ್ಯಕ್ಷ ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಲಾಗಿದೆ ಎಂದು ಎಲ್ಲೂ ಹೇಳಿಲ್ಲ.

ವರದಿ ಲಿಂಕ್ ಇಲ್ಲಿದೆ

ಮಾಲ್ಡೀವ್ಸ್‌ ಸಂಸದ ಇಬ್ರಾಹಿಂ ಶರೀಫ್ ಕೂಡ ಜನವರಿ 28ರಂದು ಈ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಗಲಾಟೆಯ ನಂತರ ಸಂಸದ ಶಹೀಮ್‌ ಅವರು ಗಾಯಗೊಂಡಿರುವುದನ್ನು ಸ್ಪಷ್ಟವಾಗಿ ನೋಡಬಹುದು.

ಏಜೆನ್ಸ್ ಫ್ರಾನ್ಸ್‌ ಪ್ರೆಸ್‌ (ಎಎಫ್‌ಪಿ) ಅನ್ನು ಉಲ್ಲೇಖಿಸಿ barrons.com ಜನವರಿ 29ರಂದು “Maldives Parliament Rejects Three Cabinet Members After Brawl” ಎಂಬ ಶೀರ್ಷಿಕೆಯಲ್ಲಿ ಈ ಕುರಿತು ಸುದ್ದಿ ಪ್ರಕಟಿಸಿದ್ದು, ಮಾಲ್ಡೀವ್ಸ್ ಸಂಸತ್‌ನಲ್ಲಿ ಮೂವರು ಸಚಿವರನ್ನು ನೇಮಿಸುವುದರ ವಿರುದ್ದ ಸಂಸದರು ಮತ ಚಲಾಯಿಸಿದ್ದಾರೆ. ಅದಕ್ಕೂ ಮುನ್ನ ನಡೆದ ಸಂಸದರ ನಡುವಿನ ಗಲಾಟೆಯಲ್ಲಿ ಒಬ್ಬರು ಸಂಸದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಇಲ್ಲೂ ಅಧ್ಯಕ್ಷ ಮುಯಿಝು ಅವರಿಗೆ ಥಳಿಸಿದ ಬಗ್ಗೆ ಉಲ್ಲೇಖಿಸಿಲ್ಲ.

ಸುದ್ದಿ ಲಿಂಕ್

ವಿವಿಧ ಮೂಲಗಳನ್ನು ಪರಿಶೀಲಿಸಿದಾಗ, ವೈರಲ್‌ ಆಗುತ್ತಿರುವ ವಿಡಿಯೋ ಜನವರಿ 28ರಂದು ಮಾಲ್ಡೀವ್ಸ್‌ ಸಂಸತ್‌ನಲ್ಲಿ ಸಂಸದರ ನಡುವೆ ನಡೆದ ಗಲಾಟೆಯದ್ದು, ಅಲ್ಲದೆ ಭಾರತ ವಿರೋಧಿ ನಿಲುವು ಖಂಡಿಸಿ ಸಂಸದರು ಅಧ್ಯಕ್ಷ ಮುಝಿಝು ಅವರಿಗೆ ಥಳಿಸಿರುವುದು ಅಲ್ಲ ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ಆಸ್ತಿ ಜಗಳದ ವಿಡಿಯೋ ಹಿಂದೂಗಳ ಮೇಲೆ ಮುಸ್ಲಿಮರ ದಾಳಿಯೆಂದು ತಪ್ಪಾಗಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...