HomeUncategorizedFACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

- Advertisement -
- Advertisement -

“ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿಯ ಮೆಟ್ರೋದಲ್ಲಿ ಓಡಾಡುತ್ತಾರೆ. ಹಾಗೆಯೆ ಅವರು ಈ ದಿನ ದೆಹಲಿಯ ಮೆಟ್ರೋದಲ್ಲಿ ಓಡಾಡುವಾಗ ಈ ವಿಡಿಯೋವನ್ನು ಚಿತ್ರಿಸಲಾಗಿದೆ. ಇದು ಮೋದಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ” ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಮೆಟ್ರೋದಲ್ಲಿ ಪ್ರಯಾಣಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಸಾಕಷ್ಟು ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.

ಹೀಗೆ ಹಂಚಿಕೊಳ್ಳುತ್ತಿರುವ ವಿಡಿಯೋದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋ ನಿಜವೆಂದು ಕಂಡು ಬಂದಿದೆ. ಆದರೆ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ತೆರಳಲು ದೆಹಲಿ ಮೆಟ್ರೋ ಬಳಸುತ್ತಿದ್ದಾರೆ ಎಂಬುದು ಅನುಮಾನ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ.

ಹಾಗಿದ್ದರೆ ನಿಜವಾಗಿಯೂ ನಿರ್ಮಲ ಸೀತಾರಾಮನ್ ಪ್ರತಿ ದಿನ ತಮ್ಮ ಕಚೇರಿಗೆ ದೆಹಲಿ ಮೆಟ್ರೋ ಮೂಲಕ ಪ್ರಯಾಣಿಸುತ್ತಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.


ಫ್ಯಾಕ್ಟ್‌ಚೆಕ್‌ :
ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರತಿ ದಿನ ತಮ್ಮ ಕಚೇರಿಗೆ ದೆಹಲಿ ಮೆಟ್ರೋ ಮೂಲಕ ಪ್ರಯಾಣಿಸುತ್ತಾರೆಯೇ ಎಂದು ಪರಿಶೀಲಿಸಲು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 17 ಮೇ 2024ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಎಕ್ಸ್‌ ( ಟ್ವಿಟರ್)ನಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದು ಲಭ್ಯವಾಗಿದೆ, ಪೋಸ್ಟ್‌ನಲ್ಲಿರುವ ವಿಡಿಯೋಗಳೀಗೂ ವೈರಲ್ ದೃಶ್ಯಾವಳಿಗಳಿಗೂ ಸಾಮ್ಯತೆ ಇರುವುದು ಕಂಡುಬಂದಿದೆ.

ಈ ಬಗ್ಗೆ ಮತ್ತಷ್ಟು ಸರ್ಚ್ ಮಾಡಿದಾಗ, ಮೇ 17ರಂದು ಟೈಮ್ಸ್‌ ಆಫ್‌ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಆ ವರದಿಯಲ್ಲಿ “ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಲ್ಹೋತ್ರಾ ಪರ ಪ್ರಚಾರ ಮಾಡಲು ಸೀತಾರಾಮನ್ ಮಂಡಿ ಹೌಸ್‌ನಿಂದ ಮೆಟ್ರೋದಲ್ಲಿ ಸಂಚರಿಸಿದರು ಎಂದು ಉಲ್ಲೇಖಿಸಲಾಗಿದೆ.  ಪ್ರಯಾಣದ ಸಂದರ್ಭದಲ್ಲಿ ಅವರು ಸಹ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು ಎಂದು ಬಿಜೆಪಿ ಪದಾಧಿಕಾರಿಗಳು ಹೇಳಿದ್ದಾರೆ. ಬಳಿಕ ಹಣಕಾಸು ಸಚಿವರು ಸಮೀಪದ ಕೋಚಿಂಗ್ ಸೆಂಟರ್‌ಗೆ ಭೇಟಿ ನೀಡಿದರು, ಅಲ್ಲಿ ಅವರು ಪ್ರಾಥಮಿಕವಾಗಿ ಉದ್ಯೋಗಾವಕಾಶಗಳು, ಆರ್ಥಿಕತೆಯ ಸ್ಥಿತಿ ಮತ್ತು ಭಾರತದಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳ ಪಾತ್ರಗಳ ಕುರಿತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ನಾವು  ಸಂಬಂಧಿತ ಕೀವರ್ಡ್ಸ್‌ಗಳನ್ನು ಬಳಸಿ ಅಂತರ್ಜಾಲದಲಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಹರ್ಷ್ ಮಲ್ಹೋತ್ರಾ ಅವರು ತಮ್ಮ ಪರಿಶೀಲಿಸಿದ X ಹ್ಯಾಂಡಲ್‌ನಿಂದ ಮೇ 17, 2024 ರಂದು ಲಕ್ಷ್ಮಿ ನಗರ ಮೆಟ್ರೋ ನಿಲ್ದಾಣದಲ್ಲಿ ವಿದ್ಯಾರ್ಥಿ ಸಭೆಯನ್ನು ನಡೆಸಿದ್ದಾರೆ ಎಂಬುದು ಕಂಡುಬಂದಿದೆ. ಈ ವರ್ಷ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಗೆ ಮಲ್ಹೋತ್ರಾ ಅವರ ಪ್ರಚಾರದಲ್ಲಿ ಭಾಗಿಯಾಗಲು ಸೀತಾರಾಮನ್ ಅವರು ಮೆಟ್ರೋ ನಿಲ್ದಾಣಕ್ಕೆ ಬರಲಿದ್ದಾರೆ ಎಂದು ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಕಚೇರಿ ಕೆಲಸಕ್ಕಾಗಿ ಪ್ರತಿನಿತ್ಯ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ ಎಂಬುದು ಸುಳ್ಳು. ಈ ಕುರಿತು ಯಾವುದೇ ವಿಶ್ವಾಸರ್ಹ ವರದಿಗಳು ಇದುವರೆಗೂ ಕಂಡು ಬಂದಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...