Homeಫ್ಯಾಕ್ಟ್‌ಚೆಕ್FACT CHECK : ಸರ್ದಾರ್ ಪಟೇಲರ 'ಏಕತಾ ಪ್ರತಿಮೆ' ಬಿರುಕು ಬಿಟ್ಟಿದೆಯಾ?

FACT CHECK : ಸರ್ದಾರ್ ಪಟೇಲರ ‘ಏಕತಾ ಪ್ರತಿಮೆ’ ಬಿರುಕು ಬಿಟ್ಟಿದೆಯಾ?

- Advertisement -
- Advertisement -

ಭಾರತದ ಪ್ರಥಮ ಉಪ ಪ್ರಧಾನಿ ಹಾಗೂ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ‘ಏಕತಾ ಪ್ರತಿಮೆ'(Statue of Unity)ಯನ್ನು ಗುಜರಾತ್‌ನ ಕೇವಡಿಯಾ ಬಳಿ ಸ್ಥಾಪಿಸಲಾಗಿದೆ.

ಸುಮಾರು 562 ರಾಜ ಪ್ರಭುತ್ವಗಳಲ್ಲಿ ಹಂಚಿಹೋಗಿದ್ದ ಭಾರತವನ್ನು ಸ್ವಾತಂತ್ರ್ಯದ ಬಳಿಕ ಒಂದೇ ಒಕ್ಕೂಟದಡಿ ತಂದ ಕೀರ್ತಿ ಸರ್ದಾರ್ ಪಟೇಲರಿಗೆ ಸಲ್ಲುತ್ತದೆ. ಅಂತಹ ಪಟೇಲರ 143ನೇ ಜನ್ಮ ದಿನವಾದ ಅಕ್ಟೋಬರ್ 31, 2018ರಂದು ಪ್ರಧಾನಿ ನರೇಂದ್ರ ಮೋದಿಯವರು ‘ಏಕತಾ ಪ್ರತಿಮೆ’ಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಇದೀಗ ಏಕತಾ ಪ್ರತಿಮೆ ಬಿರುಕು ಬಿಟ್ಟಿರುವಂತೆ ಕಾಣುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘RaGaForIndia'(@RaGa4India) ಎಂಬ ಎಕ್ಸ್‌ ಖಾತೆಯಲ್ಲಿ ಇತ್ತೀಚೆಗೆ ವೈರಲ್ ಪೋಟೋ ಹಂಚಿಕೊಂಡು “ಇದು ಯಾವ ಸಂದರ್ಭದಲ್ಲಿ ಬೇಕಾದರೂ ಕುಸಿಯಬಹುದು. ಬಿರುಕು ಬಿಡಲು ಶುರುವಾಗಿದೆ” ಎಂದು ಹಿಂದಿಯಲ್ಲಿ ಭಾಷೆಯಲ್ಲಿ ಬರೆದುಕೊಳ್ಳಲಾಗಿತ್ತು. ಪ್ರಸ್ತುತ ಆ ಪೋಸ್ಟ್ ಡಿಲಿಟ್ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು, 2018ರಲ್ಲಿ ಏಕತಾ ಪ್ರತಿಮೆ ಉದ್ಘಾಟನೆಗೂ ವಾರದ ಮುನ್ನ ತೆಗೆದ ಹಳೆಯ ಫೋಟೋ ಎಂದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ನಾವು ವೈರಲ್ ಫೋಟೋ ಹಾಕಿ ಸರ್ಚ್ ಮಾಡಿದಾಗ ಲಾಸ್ ಏಂಜಲ್ಸ್ ಟೈಮ್ಸ್ ಮತ್ತು ದಿ ವಾಶಿಂಗ್ಟನ್ ಪೋಸ್ಟ್ ಸುದ್ದಿ ಸಂಸ್ಥೆಗಳು ಆ ಫೋಟೋ ಬಳಸಿಕೊಂಡು 2018ರಲ್ಲಿ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. ಎರಡೂ ಸುದ್ದಿ ವೆಬ್‌ಸೈಟ್‌ಗಳು ಆ ಫೋಟೋ 2018ರಲ್ಲಿ ಪ್ರತಿಮೆ ಉದ್ಘಾಟನಗೂ ವಾರದ ಮುನ್ನ ತೆಗೆದಿರುವಂತದ್ದು ಎಂದಿದೆ.

ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಅಧೀನದಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಸೆಪ್ಟೆಂಬರ್ 9, 2024ರಂದು ಎಕ್ಸ್‌ ಪೋಸ್ಟ್ ಮೂಲಕ ವೈರಲ್ ಫೋಟೋ 2018ರಲ್ಲಿ ಪ್ರತಿಮೆ ನಿರ್ಮಾಣದ ವೇಳೆ ತೆಗೆದಿರುವಂತದ್ದು ಎಂದು ಖಚಿತಪಡಿಸಿದೆ.

ಒಟ್ಟಿನಲ್ಲಿ, ಸರ್ದಾರ್ ಪಟೇಲರ ಏಕತಾ ಪ್ರತಿಮೆ ಬಿರುಕು ಬಿಟ್ಟಿದೆ ಎಂದು ವೈರಲ್ ಆಗುತ್ತಿರುವ ಫೋಟೋ ಈಗಿನದ್ದಲ್ಲ, ಅದು 2018ರಲ್ಲಿ ಪ್ರತಿಮೆ ಉದ್ಘಾಟನೆಗೂ ಮುನ್ನ ತೆಗೆದಿರುವಂತದ್ದು ಎಂಬುವುದನ್ನು ಅಧಿಕೃತ ಮೂಲಗಳು ಖಚಿತಪಡಿಸಿವೆ.

ಇದನ್ನೂ ಓದಿ : FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...