Homeಫ್ಯಾಕ್ಟ್‌ಚೆಕ್Fact Check: 11 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ 1,91,000 ಕೋಟಿ ರೂ. ಸಾಲ ಮಾಡಿರುವುದು ನಿಜವೇ?

Fact Check: 11 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ 1,91,000 ಕೋಟಿ ರೂ. ಸಾಲ ಮಾಡಿರುವುದು ನಿಜವೇ?

- Advertisement -
- Advertisement -

ಕಳೆದ 11 ತಿಂಗಳ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1,91,000 ಕೋಟಿ ರೂಪಾಯಿ ಸಾಲ ಮಾಡಿದೆ. ಈ ಮೂಲಕ ಪ್ರತಿ ಕನ್ನಡಿಗನ ತಲೆ ಮೇಲೆ 31, 833 ರೂ. ಸಾಲ ಹೊರಿಸಿದೆ. ಐದು ವರ್ಷದಲ್ಲಿ ಪ್ರತಿ ಕನ್ನಡಿಗನ ತಲೆ ಮೇಲೆ 1.5 ಲಕ್ಷ ಸಾಲ ಹೊರೆಸುವುದು ಪಕ್ಕಾ ಎಂದು ಸುವರ್ಣ ನ್ಯೂಸ್ ಚಾನೆಲ್‌ನ ಡಿಬೆಟ್ ಒಂದೆ ವಿಡಿಯೋವನ್ನು ಹಂಚಿಕೊಳ್ಳಲಾಗ್ತಿದೆ. ವಿಡಿಯೋದಲ್ಲಿ ಬಿಜೆಪಿ ವಕ್ತಾರರೊಬ್ಬರು ಕೇವಲ 11 ತಿಂಗಳ ಅವಧಿಯಲ್ಲಿ ಸಿದ್ದರಾಮಯ್ಯ ಸರ್ಕಾರ 1, 91,000 ಕೋಟಿ ರೂ. ಸಾಲ ಮಾಡಿದೆ ಎಂದು ಆರೋಪಿಸಿದ್ದಾರೆ.

ಪೋಸ್ಟ್‌ ಲಿಂಕ್ ಇಲ್ಲಿದೆ 

ಬಿಜೆಪಿ ಮತ್ತು ಪ್ರಧಾನಿ ಮೋದಿ ಬೆಂಬಲಿಗರು ಈ ಹೇಳಿಕೆ ಆಧರಿಸಿ ಪೋಸ್ಟರ್‌ಗಳನ್ನು ಕೂಡ ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.

ಫ್ಯಾಕ್ಟ್‌ಚೆಕ್: ಮೇಲೆ ಉಲ್ಲೇಖಿಸಿದ ಸುದ್ದಿಯ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ನಡೆಸಿದೆ. ರಾಜ್ಯ ಸರ್ಕಾರಗಳು ಮಾಡಿದ ಸಾಲದ ಮಾಹಿತಿ ತಿಳಿಯಲು ನಾವು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ)ನ ವೆಬ್‌ಸೈಟ್‌ನಲ್ಲಿ ಕೊಡಲಾದ ಮಾಹಿತಿಯನ್ನು ಪರಿಶೀಲಿಸಿದ್ದೇವೆ.

ಆರ್‌ಬಿಐ ಮಾಹಿತಿ ಪ್ರಕಾರ, ಸಿದ್ದರಾಮಯ್ಯನವರು 2018 ರವರೆಗೆ ಮುಖ್ಯಮಂತ್ರಿ ಆಗಿದ್ದ 5 ವರ್ಷದ ಅವಧಿಯಲ್ಲಿ ರಾಜ್ಯದ ಯೋಜನೆಗಳಿಗಾಗಿ 1,33,284 ಕೋಟಿ ರೂ. ಸಾಲ ಮಾಡಿದ್ದರು.

2023ರಲ್ಲಿ ಬಸವರಾಜ ಬೊಮ್ಮಾಯಿಯವರು ಅಧಿಕಾರದಿಂದ ಕೆಳಗಿಳಿದ ಸಂದರ್ಭದಲ್ಲಿ ರಾಜ್ಯದ ಮೇಲಿದ್ದ ಒಟ್ಟು ಸಾಲ 5,35,156.7 ಕೋಟಿ ರೂಪಾಯಿ ಆಗಿತ್ತು.

ಅಂದರೆ, ಸಮ್ಮಿಶ್ರ ಸರ್ಕಾರದ ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬೊಮ್ಮಾಯಿಯವರು ಒಟ್ಟು 5 ವರ್ಷದಲ್ಲಿ (2018-23) ಮಾಡಿದ ಸಾಲ 2,48,828 ಕೋಟಿ ರೂ.

2024 ರ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು ಸಾಲ ಮಾಡುವುದಾಗಿ ಘೋಷಿಸಿರುವ ಮೊತ್ತ 1,05,246 ಕೋಟಿ ರೂಗಳು. ಅಲ್ಲಿಗೆ ರಾಜ್ಯದ ಒಟ್ಟು ಸಾಲ 6.4 ಲಕ್ಷ ಕೋಟಿಗಳಾಷ್ಟಾಗುತ್ತದೆ.

ಆದ್ದರಿಂದ, 11 ತಿಂಗಳಲ್ಲಿ ಸಿದ್ದರಾಮಯ್ಯನವರು 1,91,000 ಕೋಟಿ ಸಾಲ ಮಾಡಿದ್ದಾರೆ ಎಂಬ ಆರೋಪ ಸುಳ್ಳಾಗಿದೆ.

ಇದನ್ನೂ ಓದಿ : Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...