Homeಫ್ಯಾಕ್ಟ್‌ಚೆಕ್FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ...

FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ ಇಲ್ಲಿದೆ

- Advertisement -
- Advertisement -

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ನಿಂತಿರುವಂತೆ ತೋರುವ ಕಪ್ಪು ಬಿಳುಪಿನ (Black and white) ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸರ್ವೇಶ್ ಕುಟ್ಲೆಹರಿಯ ಎಂಬ ಫೇಸ್‌ಬುಕ್ ಬಳಕೆದಾರ ಜುಲೈ 12ರಂದು ಈ ಫೋಟೋ ಹಂಚಿಕೊಂಡಿದ್ದು “8,500 ರೂ. ಕಟಾ ಕಟ್‌ ಟಕಾ ಟಕ್ ಸಿಗಲಿದೆ ಎಂದು ಹೇಳಲಾದ ವ್ಯಕ್ತಿಯ ಪೋಸ್ಟ್ 20 ಸಾವಿರಕ್ಕೂ ಹೆಚ್ಚು ಲೈಕ್ಸ್‌ಗಳು ಮತ್ತು 5,900 ಶೇರ್‌ಗಳನ್ನು ಪಡೆದುಕೊಂಡಿದೆ ಎಂದು ಬರೆದುಕೊಂಡಿದ್ದಾರೆ.

ಅನೇಕ ಎಕ್ಸ್‌ ಮತ್ತು ಫೇಸ್‌ಬುಕ್ ಬಳಕೆದಾರರು ಇದೇ ಬರಹದೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

ಹಾಗಾದರೆ ವೈರಲ್ ಫೋಟೋದಲ್ಲಿರುವ ಮಹಿಳೆ ನಿಜವಾಗ್ಲೂ ಸೋನಿಯಾ ಗಾಂಧಿಯ? ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ಫೋಟೋಗೆ ಪೋಸ್‌ಗೆ ಕೊಟ್ರಾ? ಎಂದು ಪರಿಶೀಲಿಸೋನ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಕೆಳಗೆ ಎರಡ ಭಾಗದಲ್ಲಿ ‘ರಿಮಾರ್ಕರ್’ (Remarker)ಎಂಬ ವಾಟರ್ ಮಾರ್ಕ್ ಇರುವುದನ್ನು ನಾವು ಗಮನಿಸಿದ್ದೇವೆ. ರಿಮಾರ್ಕರ್ ಕುರಿತು ನಾವು ಗೂಗಲ್ ಮೂಲಕ ಮಾಹಿತಿ ಹುಡುಕಿದಾಗ ಅದೊಂದು ಕೃತಕ ಬುದ್ದಿಮತ್ತೆ (Artificial intelligence) ಟೂಲ್ ಎಂಬುವುದು ಗೊತ್ತಾಗಿದೆ. ಈ ಎಐ ಟೂಲ್ ಯಾವುದಾದರು ಫೋಟೋದಲ್ಲಿ ವ್ಯಕ್ತಿಗಳ ಮುಖವನ್ನು ಬದಲಿ ಮತ್ತೊಬ್ಬರ ಮುಖ ಜೋಡಿಸಲು ಅನುವು ಮಾಡುತ್ತದೆ. ಹಾಗಾಗಿ, ಸೋನಿಯಾ ಗಾಂಧಿಯವರ ಫೋಟೋವನ್ನು ಎಐ ಮೂಲಕ ಸೃಷ್ಟಿಸಿರುವುದು ನಮಗೆ ಗೊತ್ತಾಗಿದೆ.

ಇನ್ನು ವೈರಲ್ ಫೋಟೋದ ಮೂಲ ಹುಡುಕಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ತಂಬ್ಲರ್‌ನಲ್ಲಿ 2013ರಲ್ಲಿ ವೈರಲ್ ಫೋಟೋದ ರೀತಿಯ ಪೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಆದರೆ, ಅಲ್ಲಿ ಸೋನಿಯಾ ಗಾಂಧಿಯ ಬದಲು ಮತ್ತೊಬ್ಬರು ಮಹಿಳೆಯ ಫೋಟೋ ಇದೆ. ಫೋಟೋಗೆ “Ghazale Photographed By Farzad Sarfarazi, 2012” ಎಂದು ಕ್ಯಾಪ್ಶನ್ ಕೊಡಲಾಗಿದೆ. ಫೋಟೋದ ಕೆಳಗೆ ಬಲ ಭಾಗದಲ್ಲಿ ವಾಟರ್ ಮಾರ್ಕ್‌ ಕೂಡ ಇದೆ.

ತಂಬ್ಲರ್‌ನಲ್ಲಿ ನಮಗೆ ಲಭ್ಯವಾಗಿರುವ ಫೋಟೋವನ್ನು ಅನೇಕರು ವಿವಿಧ ಸಂದರ್ಭಗಳಲ್ಲಿ ಹಂಚಿಕೊಂಡಿದ್ದು, ಫರ್ಝಾದ್ ಸರ್ಫರಾಝಿ ಅವರ ಫೋಟೋ ಎಂದು ತಿಳಿಸಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ, ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿರುವಂತೆ ಕಾಣುವ ಫೋಟೋ ರಿಮಾರ್ಕರ್ ಎಂಬ ಎಐ ಟೂಲ್ ಬಳಸಿ ಎಡಿಟ್ ಮಾಡಿರುವಂತದ್ದು. ಬೇರೊಬ್ಬ ಮಹಿಳೆಯ ಫೋಟೋದ ಮುಖ ಬದಲಾಯಿಸಿ ಸೋನಿಯಾ ಗಾಂಧಿಯವರ ಮುಖ ಕೂರಿಸಿರುವುದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...