Homeಫ್ಯಾಕ್ಟ್‌ಚೆಕ್FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ...

FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ ಇಲ್ಲಿದೆ

- Advertisement -
- Advertisement -

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ನಿಂತಿರುವಂತೆ ತೋರುವ ಕಪ್ಪು ಬಿಳುಪಿನ (Black and white) ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸರ್ವೇಶ್ ಕುಟ್ಲೆಹರಿಯ ಎಂಬ ಫೇಸ್‌ಬುಕ್ ಬಳಕೆದಾರ ಜುಲೈ 12ರಂದು ಈ ಫೋಟೋ ಹಂಚಿಕೊಂಡಿದ್ದು “8,500 ರೂ. ಕಟಾ ಕಟ್‌ ಟಕಾ ಟಕ್ ಸಿಗಲಿದೆ ಎಂದು ಹೇಳಲಾದ ವ್ಯಕ್ತಿಯ ಪೋಸ್ಟ್ 20 ಸಾವಿರಕ್ಕೂ ಹೆಚ್ಚು ಲೈಕ್ಸ್‌ಗಳು ಮತ್ತು 5,900 ಶೇರ್‌ಗಳನ್ನು ಪಡೆದುಕೊಂಡಿದೆ ಎಂದು ಬರೆದುಕೊಂಡಿದ್ದಾರೆ.

ಅನೇಕ ಎಕ್ಸ್‌ ಮತ್ತು ಫೇಸ್‌ಬುಕ್ ಬಳಕೆದಾರರು ಇದೇ ಬರಹದೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

ಹಾಗಾದರೆ ವೈರಲ್ ಫೋಟೋದಲ್ಲಿರುವ ಮಹಿಳೆ ನಿಜವಾಗ್ಲೂ ಸೋನಿಯಾ ಗಾಂಧಿಯ? ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ಫೋಟೋಗೆ ಪೋಸ್‌ಗೆ ಕೊಟ್ರಾ? ಎಂದು ಪರಿಶೀಲಿಸೋನ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಕೆಳಗೆ ಎರಡ ಭಾಗದಲ್ಲಿ ‘ರಿಮಾರ್ಕರ್’ (Remarker)ಎಂಬ ವಾಟರ್ ಮಾರ್ಕ್ ಇರುವುದನ್ನು ನಾವು ಗಮನಿಸಿದ್ದೇವೆ. ರಿಮಾರ್ಕರ್ ಕುರಿತು ನಾವು ಗೂಗಲ್ ಮೂಲಕ ಮಾಹಿತಿ ಹುಡುಕಿದಾಗ ಅದೊಂದು ಕೃತಕ ಬುದ್ದಿಮತ್ತೆ (Artificial intelligence) ಟೂಲ್ ಎಂಬುವುದು ಗೊತ್ತಾಗಿದೆ. ಈ ಎಐ ಟೂಲ್ ಯಾವುದಾದರು ಫೋಟೋದಲ್ಲಿ ವ್ಯಕ್ತಿಗಳ ಮುಖವನ್ನು ಬದಲಿ ಮತ್ತೊಬ್ಬರ ಮುಖ ಜೋಡಿಸಲು ಅನುವು ಮಾಡುತ್ತದೆ. ಹಾಗಾಗಿ, ಸೋನಿಯಾ ಗಾಂಧಿಯವರ ಫೋಟೋವನ್ನು ಎಐ ಮೂಲಕ ಸೃಷ್ಟಿಸಿರುವುದು ನಮಗೆ ಗೊತ್ತಾಗಿದೆ.

ಇನ್ನು ವೈರಲ್ ಫೋಟೋದ ಮೂಲ ಹುಡುಕಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ತಂಬ್ಲರ್‌ನಲ್ಲಿ 2013ರಲ್ಲಿ ವೈರಲ್ ಫೋಟೋದ ರೀತಿಯ ಪೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಆದರೆ, ಅಲ್ಲಿ ಸೋನಿಯಾ ಗಾಂಧಿಯ ಬದಲು ಮತ್ತೊಬ್ಬರು ಮಹಿಳೆಯ ಫೋಟೋ ಇದೆ. ಫೋಟೋಗೆ “Ghazale Photographed By Farzad Sarfarazi, 2012” ಎಂದು ಕ್ಯಾಪ್ಶನ್ ಕೊಡಲಾಗಿದೆ. ಫೋಟೋದ ಕೆಳಗೆ ಬಲ ಭಾಗದಲ್ಲಿ ವಾಟರ್ ಮಾರ್ಕ್‌ ಕೂಡ ಇದೆ.

ತಂಬ್ಲರ್‌ನಲ್ಲಿ ನಮಗೆ ಲಭ್ಯವಾಗಿರುವ ಫೋಟೋವನ್ನು ಅನೇಕರು ವಿವಿಧ ಸಂದರ್ಭಗಳಲ್ಲಿ ಹಂಚಿಕೊಂಡಿದ್ದು, ಫರ್ಝಾದ್ ಸರ್ಫರಾಝಿ ಅವರ ಫೋಟೋ ಎಂದು ತಿಳಿಸಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ, ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿರುವಂತೆ ಕಾಣುವ ಫೋಟೋ ರಿಮಾರ್ಕರ್ ಎಂಬ ಎಐ ಟೂಲ್ ಬಳಸಿ ಎಡಿಟ್ ಮಾಡಿರುವಂತದ್ದು. ಬೇರೊಬ್ಬ ಮಹಿಳೆಯ ಫೋಟೋದ ಮುಖ ಬದಲಾಯಿಸಿ ಸೋನಿಯಾ ಗಾಂಧಿಯವರ ಮುಖ ಕೂರಿಸಿರುವುದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...