Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...