Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...