Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...