Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...