Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...