Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...