Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...