Homeಫ್ಯಾಕ್ಟ್‌ಚೆಕ್FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು...

FACT CHECK : ರಾಹುಲ್‌ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಅಮೆರಿಕದ ಜನತೆ ಕೇಳಿರುವುದು ನಿಜಾನಾ?

- Advertisement -
- Advertisement -

ಲೋಕಸಭೆಯ ಪ್ರತಿ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಮೂರು ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಸುದ್ದಿ ಪತ್ರಿಕೆಯನ್ನು ಹೋಲುವ ಫೋಟೋವೊಂದು ವೈರಲ್ ಆಗಿದೆ.

ಅದರಲ್ಲಿ “ರಾಹುಲ್ ಗಾಂಧಿ ಭಾರತದಿಂದ ಬಂದವರಾ? ಪಾಕಿಸ್ತಾನದವರಾ? ಎಂದು ಅಮೆರಿಕನ್ನರು ಕೇಳುತ್ತಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅದನ್ನು ಹಂಚಿಕೊಂಡು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ವೃತ್ತ ಪತ್ರಿಕೆಯ ವರದಿ ಎಂದು ಹೇಳಿಕೊಂಡಿದ್ದಾರೆ.

ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ಸೆಪ್ಟೆಂಬರ್ 10ರಂದು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು “ಅಮೆರಿಕನ್ನರು ರಾಹುಲ್ ಗಾಂಧಿ ಭಾರತದವರಾ..ಪಾಕಿಸ್ತಾನದವರಾ? ಎಂದು ತಿಳಿಯಲು ಬಯಸುತ್ತಿದ್ದಾರೆ. ಯಾವ ವ್ಯಕ್ತಿ ತನ್ನ ಸ್ವಂತ ಮನೆಯನ್ನು ಹಾಳು ಮಾಡಲು ವಿದೇಶಕ್ಕೆ ಹೋಗುತ್ತಾನೆ? ಜಗತ್ತಿನಲ್ಲೇ ಕೇಳಿಲ್ಲ. ಈ ವ್ಯಕ್ತಿಯನ್ನು ಹೊರತು. ಕಾಂಗ್ರೆಸ್, ಸ್ಯಾಮ್ ಪಿತ್ರೋಡಾ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನಾಟೆ, ಜೈರಾಮ್ ರಮೇಶ್ ಇದು ಕಾಂಗ್ರೆಸ್ ಪದ್ದತಿ ಎಂದು ಒಪ್ಪಿಕೊಳ್ಳುತ್ತೀರಾ? ಎಂದು ಬರೆದುಕೊಂಡಿದ್ದರು.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.13, 12.17pm) ಪೋಸ್ಟ್ 5 ಲಕ್ಷದ 22 ಸಾವಿರ ವೀಕ್ಷಣೆ ಪಡೆದಿತ್ತು. 6 ಸಾವಿರಕ್ಕೂ ಅಧಿಕ ಜನರು ರಿಟ್ವೀಟ್ ಮಾಡಿದ್ದರು.

ಹರ್ಷಾ ಕಾಕರ್ ಅವರು ಹಾಕಿರುವ ರೀತಿಯದ್ದೇ ಪೋಸ್ಟ್ ಅನ್ನು ಮತ್ತೊಂದು ವೆರಿಫೈಡ್ ಎಕ್ಸ್ ಖಾತೆ ರಿನಿತಿ ಚಟರ್ಜಿ ಪಾಂಡೆ (@mainRiniti)ಯಲ್ಲಿ ಸೆಪ್ಟೆಂಬರ್ 11, 2024ರಂದು ಹಂಚಿಕೊಳ್ಳಲಾಗಿತ್ತು.

ಅದೇ ಪೋಟೋವನ್ನು ನೀತು ಗಾರ್ಗ್ (@NeetuGarg6)ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 11ರಂದು ಹಂಚಿಕೊಳ್ಳಲಾಗಿತ್ತು. ನೀತು ಗಾರ್ಗ್ ಬಯೋ ಪ್ರಕಾರ, ಅವರು ಬಿಜೆಪಿ ಮಹಿಳಾ ಮೋರ್ಚಾ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಈ ಹಿಂದೆಯೂ ಫೋಟೋ ವೈರಲ್ ಆಗಿತ್ತು

ರಾಹುಲ್ ಗಾಂಧಿ ಕಳೆದ ವರ್ಷವೂ ಯುಎಸ್‌ಗೆ ಭೇಟಿ ನೀಡಿದ್ದರು. ಮೇ 2023 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾಷಣ ಮಾಡಿದ್ದರು. ಆಗ ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿಯ ಭಾಷಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅವರು (ರಾಹುಲ್ ಗಾಂಧಿ) ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದೂ ಕೆಲವರು ಹೇಳಿದ್ದರು. ಆಗಲೂ ಇದೇ ಪತ್ರಿಕೆಯ ಫೋಟೋ ವೈರಲ್ ಆಗಿತ್ತು.

ಎಕ್ಸ್‌ ಬಳಕೆದಾರ ಜನ್ಮಜಿತ್ ಸಿನ್ಹಾ (@JSinha007) ಅವರು ಜೂನ್ 21,2023 ರಂದು ಸ್ಪಷ್ಟವಾದ ಪತ್ರಿಕೆಯ ವರದಿಯ ಫೋಟೋ ಹಂಚಿಕೊಂಡಿದ್ದರು. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಭಾರತದ ಶತ್ರುವಿನ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ (@Sadhvi_prachi) ಅವರು ಜೂನ್ 19, 2023 ರಂದು ಫೋಟೋ ಹಂಚಿಕೊಂಡಿದ್ದರು. ಅವರ ಪೋಸ್ಟ್‌ 1.35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು, ಮೊದಲು ನಾವು ಪೋಟೋವನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಈ ವೇಳೆ ಸಾಮಾನ್ಯ ಸುದ್ದಿ ಪತ್ರಿಕೆಗಳಿಗಿಂತ ಅದು ಭಿನ್ನವಾಗಿ ಖಂಡಿದೆ. ಅಕ್ಷರ ತಪ್ಪುಗಳು, ವಾಕ್ಯಗಳ ಹೊಂದಾಣಿಕೆ ಸೇರಿದಂತೆ ಹಲವು ಅಂಶಗಳು ನಮಗೆ ವ್ಯತಿರಿಕ್ತವಾಗಿ ಕಂಡು ಬಂದಿದೆ.

ಫೋಟೋದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಅವರು ಭಾಷಣ ಮಾಡಿರುವ ಸ್ಥಳ ‘ಸಾಂಟಾ ಕ್ಲಾಸ್, ಕ್ಯಾಲಿಫೋರ್ನಿಯಾ’ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಇತ್ತೀಚೆಗೆ ಭಾಷಣ ಮಾಡಿರುವುದು ‘ಸಾಂಟಾ ಕ್ಲಾರಾ, ಕ್ಯಾಲಿಫೋರ್ನಿಯಾ’ದಲ್ಲಾಗಿದೆ. ಇನ್ನೂ ಪತ್ರಿಕೆಯ ಎಡ ಭಾಗದಲ್ಲಿ ಅರ್ಧ ಹಿಂದಿ ಪದ ಕಂಡು ಬಂದಿದೆ. ಹಾಗಾಗಿ, ಅದು ನಿಜವಾದ ಪತ್ರಿಕಾ ವರದಿಯಾ? ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ನಾವು ಸರ್ಚ್ ಮಾಡಿದ್ದೇವೆ. ಈ ವೇಳೆ ವಿವೇಕ್ ಪಾಂಡೆ (INDIVivekPandey_) ಎಕ್ಸ್‌ ಖಾತೆಯಲ್ಲಿ ಅದೇ ರೀತಿಯ ಹಿಂದಿ ಭಾಷೆಯ ಪತ್ರಿಕೆಯ ಫೋಟೋವನ್ನು ಜೂನ್ 5, 2023ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಗೂಗಲ್ ಟ್ರಾನ್ಸ್‌ಲೇಟ್ ಬಳಸಿ ಹಿಂದಿ ಪೋಟೋವನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದಾಗ, ಅದು ವೈರಲ್ ಫೋಟೋಗೆ ಸಾಮ್ಯತೆ ಇರುವುದು ಕಂಡು ಬಂದಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಪತ್ರಿಕೆಯ ವರದಿ ಎನ್ನಲಾದ ಫೋಟೋ ಹಿಂದಿ ವರದಿಯೊಂದರ ಅನುವಾದ ಆವೃತ್ತಿ ಎಂಬುವುದು ನಮಗೆ ಖಚಿತವಾಗಿದೆ. ಆದರೆ, ಆ ಹಿಂದಿ ವರದಿ ನಕಲಿಯಾಗಿದೆ. ಅಂತಹ ಯಾವುದೇ ವರದಿ, ಯಾವುದೇ ಪತ್ರಿಕೆಗಳಲ್ಲಿ ಕಂಡು ಬಂದಿಲ್ಲ.

ಒಟ್ಟಿನಲ್ಲಿ, ರಾಹುಲ್ ಗಾಂಧಿ ಕುರಿತು ವೈರಲ್ ಆಗುತ್ತಿರುವ ಪತ್ರಿಕೆಯ ವರದಿ ನಕಲಿಯಾಗಿದೆ. ಅದು ಯಾವುದೇ ಅಧಿಕೃತ ಪತ್ರಿಕೆಯ ವರದಿ ಅಲ್ಲ. ಹಿಂದಿ ಭಾಷೆಯಲ್ಲಿ ಯಾರೋ ನಕಲಿ ವರದಿ ಸೃಷ್ಟಿಸಿದ್ದರು. ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಪ್ರತಿಯನ್ನು ಹಲವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...