Homeಫ್ಯಾಕ್ಟ್‌ಚೆಕ್FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

- Advertisement -
- Advertisement -

ಏಪ್ರಿಲ್ 26ರಂದು ಲೋಕಸಭೆ ಚುನಾವಣೆಯ ಮತದಾನದ ವೇಳೆ ಬೆಂಗಳೂರಿನ 163 ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 17 ರಲ್ಲಿ ಇವಿಎಂನ ಬ್ಯಾಲೆಟ್ ಬಟನ್ ಸಕ್ರಿಯವಾಗಿರಲಿಲ್ಲ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ ಆಡಿಯೋ ವಾಟ್ಸಾಪ್‌ನಲ್ಲಿ ವೈರಲ್ ಆಗಿತ್ತು.

ಆಡಿಯೋದಲ್ಲಿ ಈ ರೀತಿ ಹೇಳಲಾಗಿತ್ತು.. “ಶುಭೋದಯ, ನಾನು ನನ್ನ ಮತದಾನ ಮಾಡಿ ಬಂದಿದ್ದೇನೆ. ನನ್ನ ಜಿಲ್ಲೆ 163 ಶಾಂತಿನಗರ, ಭಾಗ ಸಂಖ್ಯೆ 17, ಸೇಂಟ್ ಅಣ್ಣಾ ಕಾನ್ವೆಂಟ್. ನಾನು ಮತಗಟ್ಟೆಗೆ ಹೋದಾಗ ರಿಜಿಸ್ಟರ್‌ನಲ್ಲಿ ನನ್ನ ಹೆಸರು ಎಲ್ಲಿದೆ ಎಂದು ಪರಿಶೀಲಿಸಲು ಮೊದಲ ವ್ಯಕ್ತಿ ಭಾಗ ಸಂಖ್ಯೆಯನ್ನು ತೆಗೆದುಕೊಂಡರು, ಎರಡನೆಯವರು ಸಹಿ ಮಾಡಿದರು ಮತ್ತು ಮೂರನೇ ವ್ಯಕ್ತಿ ಬೆರಳಿಗೆ ಗುರುತು ಹಾಕಿದರು. ದಯವಿಟ್ಟು ಈಗ ಎಚ್ಚರಿಕೆಯಿಂದ ಆಲಿಸಿ, ಹಿಡನ್ ಪ್ಯಾನೆಲ್‌ಗಳ ಹಿಂದೆ ಇರುವ ನಿಜವಾದ ಮತದಾನ ಯಂತ್ರವನ್ನು ಸಕ್ರಿಯಗೊಳಿಸಲು ಸಿಬ್ಬಂದಿ ತಮ್ಮ ಮಾಸ್ಟರ್ ನಿಯಂತ್ರಣ ಯೂನಿಟ್‌ನ ಬಟನ್ ಅನ್ನು ಒತ್ತಬೇಕಾಗುತ್ತದೆ. ನಾನು ಹೋಗಿ ಇವಿಎಂ ಬಟನ್ ಒತ್ತಿದಾಗ ನನಗೆ ಯಾವುದೇ ಶಬ್ದ ಕೇಳಿಲ್ಲ. ನನ್ನ ಅಭ್ಯರ್ಥಿಯ ಚಿತ್ರವನ್ನು ತೋರಿಸುವ ವಿವಿಪ್ಯಾಟ್‌ನಲ್ಲೂ ಶಬ್ದ ಕೇಳಿಲ್ಲ. ಹಾಗಾಗಿ 10-15 ಸೆಕೆಂಡ್‌ ಕಾದು ಮತ್ತೆ ಬಟನ್ ಒತ್ತಿದರೂ, ವಿವಿಪ್ಯಾಟ್‌ನಲ್ಲಿ ಶಬ್ದ ಬರಲಿಲ್ಲ, ಚಿತ್ರ ಪ್ರದರ್ಶನವಾಗುತ್ತಿತ್ತು. ಹಾಗಾಗಿ ಸ್ವಲ್ಪ ಸಿಟ್ಟಾಗಿ ಮೂರನೇ ವ್ಯಕ್ತಿಯ ಬಳಿ ಹೋದೆ, ಕಂಟ್ರೋಲ್‌ ಯೂನಿಟ್‌ನಲ್ಲಿರುವ ಆಕ್ಟಿವೇಟ್ ಬಟನ್ ಒತ್ತುವ ಮೂಲಕ ಮತ ಯಂತ್ರವನ್ನು ಸಕ್ರಿಯಗೊಳಿಸುವುದು ಅವರ ಕೆಲಸವಾಗಿತ್ತು. ನಾನು ಬಟನ್ ಏಕೆ ಒತ್ತಲಿಲ್ಲ? ಎಂದು ಕೇಳಿದೆ ಮತ್ತು ಚುನಾವಣಾಧಿಕಾರಿಯನ್ನು ಮಾತನಾಡಿಸಿದೆ. ಮೂರನೇ ವ್ಯಕ್ತಿ ಮತದಾನ ಯಂತ್ರವನ್ನು ಸಕ್ರಿಯಗೊಳಿಸುವುದನ್ನು ಖಚಿತಪಡಿಸಿಕೊಳ್ಳಿ. ಅವರು ಯಂತ್ರವನ್ನು ಸಕ್ರಿಯಗೊಳಿಸಿದ್ದಾರೆ ಎಂದು ನೀವು ಖಚಿತಪಡಿಸಿಕೊಂಡ ಬಳಿಕ ಮತದಾನದ ಮಾಡುವ ಜಾಗಕ್ಕೆ ಹೋಗಿ ಬಟನ್ ಒತ್ತಿ. ಹಸಿರು ದೀಪ ಆನ್ ಆಗಿರಬೇಕು. ಎರಡೂ ಸಂದರ್ಭಗಳಲ್ಲಿ ಹಸಿರು ದೀಪವನ್ನು ನೀವು ನೋಡಲು ಸಾಧ್ಯವಾಗುತ್ತದೆ. ದುರಂತವೆಂದರೆ, ನನ್ನ ಕೈಗೆ ಗುರುತು ಹಾಕುವ ಮೊದಲು ಗುರುತು ಹಾಕಿಸಿಕೊಂಡ ವ್ಯಕ್ತಿಗಳನ್ನು ನಾನು ಗಮನಿಸಿದ್ದೇನೆ. ಅವರು ಮತದಾನ ಮಾಡುವಾಗ ಇವಿಎಂನಿಂದ ಯಾವುದೇ ಶಬ್ದ ಬಂದಿಲ್ಲ. ಹಾಗಾಗಿ, ನಾನು ವಿನಂತಿಸುವುದೇನೆಂದರೆ ದಯವಿಟ್ಟು ನೀವು ಮೂರನೇ ವ್ಯಕ್ತಿಯ ಬಳಿ ಇರುವಾಗ ದಯವಿಟ್ಟು ಆ ವ್ಯಕ್ತಿ ಮತ ಯಂತ್ರವನ್ನು ಸಕ್ರಿಯಗೊಳಿಸಿದ್ದಾರೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳಿ. ನಂತರ ನೀವು ಹಿಡನ್ ಪ್ಯಾನೆಲ್‌ನ ಹಿಂದೆ ಹೋಗಿ ಇವಿಎಂನ ಹಸಿರು ದೀಪ ಆನ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ. ಅದು ಆನ್ ಆಗದಿದ್ದರೆ ಮತ್ತೆ ಹಿಂತಿರುಗಿ ಮತ್ತು ಆನ್ ಮಾಡಲು ಹೇಳಿ. ಉಳಿದ ಪ್ರಕ್ರಿಯೆ ನಿಮಗೆ ತಿಳಿದಿದೆ”

ಫ್ಯಾಕ್ಟ್‌ಚೆಕ್ : ವೈರಲ್ ಆಡಿಯೊದ ಹೇಳಿಕೆಯನ್ನು ಚುನಾವಣಾ ಆಯೋಗವು ಸುಳ್ಳು ಮತ್ತು ಆಧಾರರಹಿತ ಎಂದು ತಳ್ಳಿಹಾಕಿದೆ.

ಬೆಂಗಳೂರಿನ ಜಿಲ್ಲಾ ಚುನಾವಣಾಧಿಕಾರಿಯೂ ಇದನ್ನು ದೃಢಪಡಿಸಿದ್ದು, ಏಪ್ರಿಲ್ 26, 2024 ರಂದು ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಮತಗಟ್ಟೆಯಲ್ಲಿ ಬ್ಯಾಲೆಟ್ ಬಟನ್ ಸಕ್ರಿಯಗೊಳಿಸದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಎಎನ್‌ಐ ಮತ್ತು ಡೆಕ್ಕನ್ ಹೆರಾಲ್ಡ್‌ನಂತಹ ಸುದ್ದಿ ಸಂಸ್ಥೆಗಳು ಕೂಡ ಚುನಾವಣಾ ಆಯೋಗವನ್ನು ಉಲ್ಲೇಖಿಸಿ ಪ್ರಕರಣದ ಕುರಿತು ವರದಿ ಮಾಡಿವೆ.

ಚುನಾವಣಾ ಆಯೋಗ ನೀಡಿರುವ ಸ್ಪಷ್ಟೀಕರಣದಂತೆ ವೈರಲ್ ಆಡಿಯೋದಲ್ಲಿರುವ ಆರೋಪ ಸುಳ್ಳು ಎಂದು ಖಚಿತಪಡಿಸಬಹುದು. ಏಕೆಂದರೆ, ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆಯ ಅಧಿಕೃತ ಸಂಸ್ಥೆಯಾಗಿದೆ.

ಇದನ್ನೂ ಓದಿ : Fact Check : ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...