Homeಫ್ಯಾಕ್ಟ್‌ಚೆಕ್FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

- Advertisement -
- Advertisement -

ಏಪ್ರಿಲ್ 26ರಂದು ಲೋಕಸಭೆ ಚುನಾವಣೆಯ ಮತದಾನದ ವೇಳೆ ಬೆಂಗಳೂರಿನ 163 ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 17 ರಲ್ಲಿ ಇವಿಎಂನ ಬ್ಯಾಲೆಟ್ ಬಟನ್ ಸಕ್ರಿಯವಾಗಿರಲಿಲ್ಲ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ ಆಡಿಯೋ ವಾಟ್ಸಾಪ್‌ನಲ್ಲಿ ವೈರಲ್ ಆಗಿತ್ತು.

ಆಡಿಯೋದಲ್ಲಿ ಈ ರೀತಿ ಹೇಳಲಾಗಿತ್ತು.. “ಶುಭೋದಯ, ನಾನು ನನ್ನ ಮತದಾನ ಮಾಡಿ ಬಂದಿದ್ದೇನೆ. ನನ್ನ ಜಿಲ್ಲೆ 163 ಶಾಂತಿನಗರ, ಭಾಗ ಸಂಖ್ಯೆ 17, ಸೇಂಟ್ ಅಣ್ಣಾ ಕಾನ್ವೆಂಟ್. ನಾನು ಮತಗಟ್ಟೆಗೆ ಹೋದಾಗ ರಿಜಿಸ್ಟರ್‌ನಲ್ಲಿ ನನ್ನ ಹೆಸರು ಎಲ್ಲಿದೆ ಎಂದು ಪರಿಶೀಲಿಸಲು ಮೊದಲ ವ್ಯಕ್ತಿ ಭಾಗ ಸಂಖ್ಯೆಯನ್ನು ತೆಗೆದುಕೊಂಡರು, ಎರಡನೆಯವರು ಸಹಿ ಮಾಡಿದರು ಮತ್ತು ಮೂರನೇ ವ್ಯಕ್ತಿ ಬೆರಳಿಗೆ ಗುರುತು ಹಾಕಿದರು. ದಯವಿಟ್ಟು ಈಗ ಎಚ್ಚರಿಕೆಯಿಂದ ಆಲಿಸಿ, ಹಿಡನ್ ಪ್ಯಾನೆಲ್‌ಗಳ ಹಿಂದೆ ಇರುವ ನಿಜವಾದ ಮತದಾನ ಯಂತ್ರವನ್ನು ಸಕ್ರಿಯಗೊಳಿಸಲು ಸಿಬ್ಬಂದಿ ತಮ್ಮ ಮಾಸ್ಟರ್ ನಿಯಂತ್ರಣ ಯೂನಿಟ್‌ನ ಬಟನ್ ಅನ್ನು ಒತ್ತಬೇಕಾಗುತ್ತದೆ. ನಾನು ಹೋಗಿ ಇವಿಎಂ ಬಟನ್ ಒತ್ತಿದಾಗ ನನಗೆ ಯಾವುದೇ ಶಬ್ದ ಕೇಳಿಲ್ಲ. ನನ್ನ ಅಭ್ಯರ್ಥಿಯ ಚಿತ್ರವನ್ನು ತೋರಿಸುವ ವಿವಿಪ್ಯಾಟ್‌ನಲ್ಲೂ ಶಬ್ದ ಕೇಳಿಲ್ಲ. ಹಾಗಾಗಿ 10-15 ಸೆಕೆಂಡ್‌ ಕಾದು ಮತ್ತೆ ಬಟನ್ ಒತ್ತಿದರೂ, ವಿವಿಪ್ಯಾಟ್‌ನಲ್ಲಿ ಶಬ್ದ ಬರಲಿಲ್ಲ, ಚಿತ್ರ ಪ್ರದರ್ಶನವಾಗುತ್ತಿತ್ತು. ಹಾಗಾಗಿ ಸ್ವಲ್ಪ ಸಿಟ್ಟಾಗಿ ಮೂರನೇ ವ್ಯಕ್ತಿಯ ಬಳಿ ಹೋದೆ, ಕಂಟ್ರೋಲ್‌ ಯೂನಿಟ್‌ನಲ್ಲಿರುವ ಆಕ್ಟಿವೇಟ್ ಬಟನ್ ಒತ್ತುವ ಮೂಲಕ ಮತ ಯಂತ್ರವನ್ನು ಸಕ್ರಿಯಗೊಳಿಸುವುದು ಅವರ ಕೆಲಸವಾಗಿತ್ತು. ನಾನು ಬಟನ್ ಏಕೆ ಒತ್ತಲಿಲ್ಲ? ಎಂದು ಕೇಳಿದೆ ಮತ್ತು ಚುನಾವಣಾಧಿಕಾರಿಯನ್ನು ಮಾತನಾಡಿಸಿದೆ. ಮೂರನೇ ವ್ಯಕ್ತಿ ಮತದಾನ ಯಂತ್ರವನ್ನು ಸಕ್ರಿಯಗೊಳಿಸುವುದನ್ನು ಖಚಿತಪಡಿಸಿಕೊಳ್ಳಿ. ಅವರು ಯಂತ್ರವನ್ನು ಸಕ್ರಿಯಗೊಳಿಸಿದ್ದಾರೆ ಎಂದು ನೀವು ಖಚಿತಪಡಿಸಿಕೊಂಡ ಬಳಿಕ ಮತದಾನದ ಮಾಡುವ ಜಾಗಕ್ಕೆ ಹೋಗಿ ಬಟನ್ ಒತ್ತಿ. ಹಸಿರು ದೀಪ ಆನ್ ಆಗಿರಬೇಕು. ಎರಡೂ ಸಂದರ್ಭಗಳಲ್ಲಿ ಹಸಿರು ದೀಪವನ್ನು ನೀವು ನೋಡಲು ಸಾಧ್ಯವಾಗುತ್ತದೆ. ದುರಂತವೆಂದರೆ, ನನ್ನ ಕೈಗೆ ಗುರುತು ಹಾಕುವ ಮೊದಲು ಗುರುತು ಹಾಕಿಸಿಕೊಂಡ ವ್ಯಕ್ತಿಗಳನ್ನು ನಾನು ಗಮನಿಸಿದ್ದೇನೆ. ಅವರು ಮತದಾನ ಮಾಡುವಾಗ ಇವಿಎಂನಿಂದ ಯಾವುದೇ ಶಬ್ದ ಬಂದಿಲ್ಲ. ಹಾಗಾಗಿ, ನಾನು ವಿನಂತಿಸುವುದೇನೆಂದರೆ ದಯವಿಟ್ಟು ನೀವು ಮೂರನೇ ವ್ಯಕ್ತಿಯ ಬಳಿ ಇರುವಾಗ ದಯವಿಟ್ಟು ಆ ವ್ಯಕ್ತಿ ಮತ ಯಂತ್ರವನ್ನು ಸಕ್ರಿಯಗೊಳಿಸಿದ್ದಾರೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳಿ. ನಂತರ ನೀವು ಹಿಡನ್ ಪ್ಯಾನೆಲ್‌ನ ಹಿಂದೆ ಹೋಗಿ ಇವಿಎಂನ ಹಸಿರು ದೀಪ ಆನ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ. ಅದು ಆನ್ ಆಗದಿದ್ದರೆ ಮತ್ತೆ ಹಿಂತಿರುಗಿ ಮತ್ತು ಆನ್ ಮಾಡಲು ಹೇಳಿ. ಉಳಿದ ಪ್ರಕ್ರಿಯೆ ನಿಮಗೆ ತಿಳಿದಿದೆ”

ಫ್ಯಾಕ್ಟ್‌ಚೆಕ್ : ವೈರಲ್ ಆಡಿಯೊದ ಹೇಳಿಕೆಯನ್ನು ಚುನಾವಣಾ ಆಯೋಗವು ಸುಳ್ಳು ಮತ್ತು ಆಧಾರರಹಿತ ಎಂದು ತಳ್ಳಿಹಾಕಿದೆ.

ಬೆಂಗಳೂರಿನ ಜಿಲ್ಲಾ ಚುನಾವಣಾಧಿಕಾರಿಯೂ ಇದನ್ನು ದೃಢಪಡಿಸಿದ್ದು, ಏಪ್ರಿಲ್ 26, 2024 ರಂದು ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಮತಗಟ್ಟೆಯಲ್ಲಿ ಬ್ಯಾಲೆಟ್ ಬಟನ್ ಸಕ್ರಿಯಗೊಳಿಸದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಎಎನ್‌ಐ ಮತ್ತು ಡೆಕ್ಕನ್ ಹೆರಾಲ್ಡ್‌ನಂತಹ ಸುದ್ದಿ ಸಂಸ್ಥೆಗಳು ಕೂಡ ಚುನಾವಣಾ ಆಯೋಗವನ್ನು ಉಲ್ಲೇಖಿಸಿ ಪ್ರಕರಣದ ಕುರಿತು ವರದಿ ಮಾಡಿವೆ.

ಚುನಾವಣಾ ಆಯೋಗ ನೀಡಿರುವ ಸ್ಪಷ್ಟೀಕರಣದಂತೆ ವೈರಲ್ ಆಡಿಯೋದಲ್ಲಿರುವ ಆರೋಪ ಸುಳ್ಳು ಎಂದು ಖಚಿತಪಡಿಸಬಹುದು. ಏಕೆಂದರೆ, ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆಯ ಅಧಿಕೃತ ಸಂಸ್ಥೆಯಾಗಿದೆ.

ಇದನ್ನೂ ಓದಿ : Fact Check : ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...