Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಶ್ರೀನಗರದ ಲಾಲ್ ಚೌಕದಲ್ಲಿ ರಾಷ್ಟ್ರಧ್ವಜ ಹಾರಿಸಿರುವುದು ನಿಜವೇ?

ಫ್ಯಾಕ್ಟ್ ಚೆಕ್: ಶ್ರೀನಗರದ ಲಾಲ್ ಚೌಕದಲ್ಲಿ ರಾಷ್ಟ್ರಧ್ವಜ ಹಾರಿಸಿರುವುದು ನಿಜವೇ?

ಇವುಗಳಲ್ಲಿ ಶ್ರೀನಗರದ ಲಾಲ್ ಚೌಕ್ ಮೂಲದ, ಗಡಿಯಾರದ ಸ್ಥಂಭದ ಮೇಲೆ ತ್ರಿವರ್ಣ ಧ್ವಜ ಹಾರುತ್ತಿರುವ ಛಾಯಾಚಿತ್ರವನ್ನು ಕಾಣಬಹುದು.

- Advertisement -
- Advertisement -

ಭಾರತವು ತನ್ನ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ದೇಶದ ವಿವಿಧ ಭಾಗಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿರುವ ಚಿತ್ರಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಇವುಗಳಲ್ಲಿ ಶ್ರೀನಗರದ ಲಾಲ್ ಚೌಕ್ ಮೂಲದ, ಗಡಿಯಾರದ ಸ್ಥಂಭದ ಮೇಲೆ ತ್ರಿವರ್ಣ ಧ್ವಜ ಹಾರುತ್ತಿರುವ ಛಾಯಾಚಿತ್ರವೊಂದು ವಿವಾದ ಹುಟ್ಟಿಸಿದೆ.

ಆಗಸ್ಟ್ 15 ರ ಬೆಳಿಗ್ಗೆಯಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಈ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. ದೆಹಲಿಯ ಬಿಜೆಪಿ  ನಾಯಕ ಕಪಿಲ್ ಮಿಶ್ರಾ ಅವರ ಈ ಟ್ವೀಟ್ ಗೆ 45,000 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 8,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಗಳಿಸಿದೆ.

ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಅಂದಿನಿಂದ, ಇಂಟರ್ನೆಟ್ ನಿಷ್ಕ್ರಿಯವಾಗಿದ್ದರೂ ಸಹ ಈ ಪ್ರದೇಶವು ಸಹಜ ಸ್ಥಿತಿಗೆ ಮರಳಲು ಪ್ರಯತ್ನಿಸುತ್ತಿದೆ.

ಬಿಜೆಪಿ ಸಂಸದ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಲಡಾಖ್ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಮತ್ತು ಬಿಜೆಪಿ ಸಂಸದ ಕಿರ್ರಾನ್ ಖೇರ್ ಕೂಡ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನ್ಯೂಸ್ ನೇಷನ್‌ನ ವರದಿಯಲ್ಲಿ ಈ ಚಿತ್ರಕ್ಕೆ ಸ್ಥಾನ ಸಿಕ್ಕಿದೆ. “ಲಾಲ್ ಚೌಕ್ ರಾಷ್ಟ್ರಧ್ವಜವನ್ನು ಹಾರಿಸುತ್ತಿದ್ದಿದ್ದರಿಂದ ರಕ್ತಪಾತವನ್ನು ನೋಡಬೇಕಾಗಿತ್ತು. ಈಗ ದೇಶದ ಧ್ವಜ ಹೆಮ್ಮೆಯಿಂದ ಅಲ್ಲಿ ಹಾರಾಡುತ್ತಿದೆ. “ಭಾರತದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಶ್ರೀನಗರದ ಐತಿಹಾಸಿಕ ಲಾಲ್ ಚೌಕ್‌ನಲ್ಲಿ ತ್ರಿವರ್ಣವನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ” ಎಂದು ಇಂಗ್ಲಿಷ್ ಮತ್ತು ಹಿಂದಿ ವರದಿಗಳಲ್ಲಿ ದೈನಿಕ್ ಜಾಗ್ರನ್ ಹೇಳಿದೆ.

ಎಬಿಪಿ ನ್ಯೂಸ್ ಪತ್ರಕರ್ತೆ ಅಸ್ತಾ ಕೌಶಿಕ್ ಕೂಡ ಈ ಛಾಯಾಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್;

ಸರಳವಾದ ಗೂಗಲ್ ರಿವರ್ಸ್ ಇಮೇಜ್ ಹುಡುಕಾಟವು ಇದರ ಸತ್ಯವನ್ನು ಬಯಲು ಮಾಡಿದೆ. ನಿರ್ಜನವಾದ ಲಾಲ್ ಚೌಕ್ ನ ಹಳೆಯ ಚಿತ್ರವನ್ನು ರಾಷ್ಟ್ರೀಯ ಧ್ವಜ ಹಾರುತ್ತಿರುವ ಚಿತ್ರವಾಗಿ ಎಡಿಟ್‌ ಮಾಡಿ ಮಾರ್ಪಡಿಸಲಾಗಿದೆ.

2010 ರಲ್ಲಿನ Mubasshir.blogspot.com ಬ್ಲಾಗ್‌ಪೋಸ್ಟ್ ಮೊದಲು ಈ ಚಿತ್ರ ಪ್ರಕಟಿಸಲಾಗಿದೆ. ಎಡಭಾಗದಲ್ಲಿರುವ ಕಾರುಗಳು ಮತ್ತು ಮನುಷ್ಯರ ವಾಕಿಂಗ್ ಅನ್ನು ಎರಡೂ ಚಿತ್ರಗಳಲ್ಲಿ ಕಾಣಬಹುದು. ಹೀಗಾಗಿ ವೈರಲ್ ಆಗಿರುವ ಚಿತ್ರ ಮತ್ತು ಎಡಿಟ್ ಮಾಡಿರುವುದು ಒಂದೇ ಎಂದು ಸೂಚಿಸುತ್ತದೆ.

ಇಂದು ಪತ್ರಕರ್ತ ಅಹ್ಮರ್ ಖಾನ್ ಲಾಲ್ ಚೌಕ್‌ನಲ್ಲಿರುವ ಗಡಿಯಾರ ಗೋಪುರದ ಪೋಟೊ ತೆಗೆದು ಆಲ್ಟ್ ನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ. ಅದರೆ ಅಲ್ಲಿ ತ್ರಿವರ್ಣ ಧ್ವಜ ಕಾಣಿಸುತ್ತಿಲ್ಲ.

ನಿರ್ಜನವಾದ ಲಾಲ್ ಚೌಕ್ ಪ್ರದೇಶದ ವೀಡಿಯೊವನ್ನು ಸಹ ಖಾನ್ ಟ್ವೀಟ್ ಮಾಡಿದ್ದರು. ಇದರ ಪ್ರಕಾರ, ಶ್ರೀನಗರದ ಲಾಲ್ ಚೌಕ್‌ನಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಹಾರಿಸಲಾಗಿಲ್ಲ.

 

ದಿ ಕಾಶ್ಮೀರ ಮಾನಿಟರ್‌ನ ವರದಿಯ ಪ್ರಕಾರ, ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀನಗರದ ಎಸ್‌ಕೆ ಕ್ರೀಡಾಂಗಣದಲ್ಲಿ ನಡೆಸಲಾಯಿತು. ಅಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತ್ರಿವರ್ಣ ಬಣ್ಣವನ್ನು ಹಾರಿಸಿದರು. ಆದರೆ ಸಾಮಾಜಿಕ ಮಾದ್ಯಮಗಳಲ್ಲಿ ಲಾಲ್‌ ಚೌಕದಲ್ಲಿ ಧ್ವಜ ಹಾರಾಟ ಎಂಬ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ.

ಹಲವಾರು ಪ್ರಮುಖ ಬಳಕೆದಾರರು ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ ಎಂದು ತಪ್ಪಾಗಿ ಹೇಳಿಕೊಂಡು ಈ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ.

ಅವರಲ್ಲಿ ಬಿಜೆಪಿ ದೆಹಲಿ ಐಟಿ ಸೆಲ್ ಸದಸ್ಯ ಸಂದೀಪ್ ರಾಜ್ಲಿವಾಲ್, ಫ್ರಿಂಜ್ ಗ್ರೂಪ್ ಅಧ್ಯಕ್ಷ ಆಜಾದ್ ಸೇನಾ ಅಭಿಷೇಕ್ ಆಜಾದ್, ಫ್ರೆಂಡ್ಸ್ ಆಫ್ ಆರ್ಎಸ್ಎಸ್, ರಿಪಬ್ಲಿಕ್ ಟಿವಿ ಸಂಸ್ಥಾಪಕ ಅರ್ನಾಬ್ ಗೋಸ್ವಾಮಿ (@ arnew5222) ಮತ್ತು ಗೌರವ್ ಪ್ರಧಾನ್ ಅವರ ಖಾತೆಯೂ ಸೇರಿದೆ.


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...