Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...