Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...