Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...