Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...