Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...